ಮತ್ತೆ ಮುನ್ನೆಲೆಗೆ ಬಂದ ವನ್ಯ ಜೀವಿಗಳ ಅಂಗಾಂಗ ಸಂಗ್ರಹ ವಿಷಯ | ಈ ದಿನದೊಳಗೆ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ವಾಪಸ್ ನೀಡಿ | ಅರಣ್ಯ ಸಚಿವರು

February 9, 2024
12:49 PM

ಕಳೆದ ಕೆಲ ತಿಂಗಳ ಹಿಂದೆ ಹುಲಿ ಉಗುರು(Tiger nail) ಪ್ರಕರಣ ಭಾರಿ ಸದ್ದು ಮಾಡಿತ್ತು. ಇದಕ್ಕೆ ಸಂಬಂಧಪಟ್ಟಂತೆ ಸರ್ಕಾರ(Govt) ಈಗ ಮಹತ್ವದ ಆದೇಶ ನೀಡಿದೆ. ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ವನ್ಯ ಜೀವಿಗಳ (Wild Animals) ಅಂಗಾಂಗಗಳನ್ನು ಇಟ್ಟು ಕೊಂಡಿರುವರಿಗೆ ಅರಣ್ಯ ಸಚಿವ(Forest Minister) ಈಶ್ವರ್ ಖಂಡ್ರೆ (Eshwara Khandre)ಅವರು ವನ್ಯಜೀವಿ ಅಂಗಾಂಗಗಳನ್ನು ಹಿಂದಿರುಗಿಸಲು ಕೊನೆಯ ಡೆಡ್ ಲೈನ್ (Dead Line) ನೀಡಿದ್ದಾರೆ.

ಏಪ್ರಿಲ್ 10ರ ಒಳಗೆ ಹುಲಿ, ಚಿರತೆ ಮತ್ತು ಆನೆಗಳ ಕೊಂಬು, ಹಲ್ಲು, ಕೂದಲು ಸೇರಿದಂತೆ ಎಲ್ಲಾ ವನ್ಯಜೀವಿ ಅಂಗಾಂಗಗಳನ್ನು ಹಿಂತಿರುಗಿಸಲು ಕೊನೆಯದಾಗಿ ಗಡುವು ನೀಡಿದ್ದಾರೆ. ಪ್ರಮಾಣ ಪತ್ರ ಇಲ್ಲದೆ ಅಕ್ರಮವಾಗಿ ವನ್ಯಜೀವಿ ಅಂಗಾಂಗಗಳನ್ನು ಇಟ್ಟುಕೊಳ್ಳುವುದು ಶಿಕ್ಷಾರ್ಹ ಅಪರಾಧ. 1973 ಹಾಗೂ 2003 ರಲ್ಲಿ ವನ್ಯಜೀವಿ ಅಂಗಾಂಗಗಳ ವಾಪಸ್‌ಗೆ ಅವಕಾಶ ನೀಡಲಾಗಿತ್ತು. ಆದರೆ ಇನ್ನೂ ವಾಪಸ್ ಮಾಡದೇ ಇರುವುದು ದೊಡ್ಡ ಅಪರಾಧ. ಮೌಢ್ಯತೆ ಹಾಗೂ ನಂಬಿಕೆಗಾಗಿ ಕೆಲವು ಮುಗ್ದ ಜನರು ಇನ್ನೂ ಇಟ್ಟುಕೊಂಡಿದ್ದಾರೆ.

ಇಂತಹ ಮುಗ್ದ ಜನರಿಗೆ ಶಿಕ್ಷೆಯಾಗಬಾರದು ಎಂದು ನಮ್ಮ ಸರ್ಕಾರ ಏಪ್ರಿಲ್ 10 ರಂದು ಕೊನೆಯ ಬಾರಿ ವಾಪಸ್ ಮಾಡುವಂತೆ ಅವಕಾಶ ನೀಡಿದೆ. ಜನರು ತಮ್ಮ ಬಳಿ ಇರುವ ಅಂಗಾಗಳನ್ನು ಸಮೀಪದಲ್ಲಿರುವ ಅರಣ್ಯ ಕಚೇರಿಗೆ ನೀಡಬೇಕು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿ ಗಡುವು ನೀಡಿದ್ದಾರೆ.

– ಅಂತರ್ಜಾಲ ಮಾಹಿತಿ

Forest Minister Eshwara Khandre has given a dead line to return the wild animal organs to those who have illegally kept the organs of wild animals without any permit.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!
April 18, 2026
7:28 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ
April 18, 2026
7:22 AM
by: ಮಿರರ್‌ ಡೆಸ್ಕ್
ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್
April 18, 2026
7:07 AM
by: ಮಿರರ್‌ ಡೆಸ್ಕ್
ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ
April 18, 2026
7:03 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror