Advertisement
MIRROR FOCUS

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

Share

ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜನರ ಅಮೂಲ್ಯ ಜೀವ ಹಾಗೂ ಕೃಷಿ ಬೆಳೆಗಳಿಗೆ ಆಗುತ್ತಿರುವ ಹಾನಿ ತಡೆಯಲು ಆಯ್ದ ಪ್ರದೇಶಗಳಲ್ಲಿ ನಿರ್ದಿಷ್ಟ ವನ್ಯಜೀವಿಗಳ ಸಂತಾನ ನಿಯಂತ್ರಣ ಕುರಿತು ಚರ್ಚೆ ಅಗತ್ಯವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದ್ದಾರೆ.

ಕೊಡಗು ಜಿಲ್ಲೆಯ ದುಬಾರೆಯಲ್ಲಿ ಕಾವೇರಿ ನದಿಗೆ ಅಡ್ಡವಾಗಿ ನಿರ್ಮಿಸಲಾಗುತ್ತಿರುವ ನೂತನ ತೂಗುಸೇತುವೆ ಮತ್ತು ಅಧಿಕಾರಿಗಳ ವಸತಿಗೃಹ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಅವರು ಮಾತನಾಡಿದರು.

ದುಬಾರೆ ಪ್ರವಾಸಿಗರ ಅನುಕೂಲಕ್ಕಾಗಿ ಹಾಗೂ ದುಬಾರೆ ಹಾಡಿಯ ಸುಮಾರು 150 ಮನೆಗಳ ನಿವಾಸಿಗಳು ತುರ್ತು ಸಂದರ್ಭದಲ್ಲಿ ನಗರ ಸಂಪರ್ಕ ಪಡೆಯಲು ಅನುಕೂಲವಾಗುವಂತೆ ₹7.30 ಕೋಟಿ ವೆಚ್ಚದಲ್ಲಿ ಗುಣಮಟ್ಟದ ತೂಗುಸೇತುವೆ ನಿರ್ಮಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು. ಈ ಮೂಲಕ ದೀರ್ಘಕಾಲದ ಬೇಡಿಕೆಯನ್ನು ಈಡೇರಿಸಲಾಗುತ್ತಿದೆ ಎಂದರು.

ಆನೆ-ಮಾನವ ಸಂಘರ್ಷ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಶಿಫಾರಸು ಮಾಡಲು ರಚಿಸಲಾಗಿದ್ದ ತಜ್ಞರ ಸಮಿತಿ ಈಗಾಗಲೇ ವರದಿ ಸಲ್ಲಿಸಿದ್ದು, ಈ ವಿಷಯದಲ್ಲಿ ಕಾಡಂಚಿನ ಜನರು ಹಾಗೂ ಸಾರ್ವಜನಿಕರು ಕೂಡ ತಮ್ಮ ಸಲಹೆಗಳನ್ನು ನೀಡಬೇಕು ಎಂದು ಸಚಿವರು ಮನವಿ ಮಾಡಿದರು.ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ರೈಲ್ವೆ ಬ್ಯಾರಿಕೇಡ್ ಹಾಗೂ ಆನೆ ಕಂದಕ ನಿರ್ಮಾಣಕ್ಕೆ ಅನುದಾನದ ಕೊರತೆ ಇಲ್ಲ. ಇನ್ನಷ್ಟು ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದ್ದು, ಶೀಘ್ರದಲ್ಲಿಯೇ ಹೆಚ್ಚಿನ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗುವುದು ಎಂದು ಹೇಳಿದರು.

ಅರಣ್ಯವಾಸಿಗಳು ಹಾಗೂ ಅರಣ್ಯದಂಚಿನ ಜನರು ಹಲವು ವರ್ಷಗಳಿಂದ ಅರಣ್ಯವನ್ನು ಸಂರಕ್ಷಿಸುತ್ತಾ ಬಂದಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷದಿಂದ ಅಮೂಲ್ಯ ಜೀವಹಾನಿ ಸಂಭವಿಸುತ್ತಿದ್ದು, ಜನರ ಜೀವ ರಕ್ಷಣೆ ಅಧಿಕಾರಿಗಳ ಮೊದಲ ಆದ್ಯತೆಯಾಗಬೇಕು ಎಂದು ಸಚಿವರು ಸೂಚನೆ ನೀಡಿದರು.

Karnataka Forest Minister Eshwar B. Khandre said discussions are needed among experts and the public regarding wildlife population control in selected regions to reduce crop damage and human casualties caused by increasing human-animal conflict. He also announced infrastructure measures including elephant barriers and a new suspension bridge at Dubare in Kodagu district.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ

ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…

2 hours ago

ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…

3 hours ago

ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ

ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ಗೆ…

3 hours ago

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

7 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

7 hours ago

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

18 hours ago