Advertisement
MIRROR FOCUS

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

Share

ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜನರ ಅಮೂಲ್ಯ ಜೀವ ಹಾಗೂ ಕೃಷಿ ಬೆಳೆಗಳಿಗೆ ಆಗುತ್ತಿರುವ ಹಾನಿ ತಡೆಯಲು ಆಯ್ದ ಪ್ರದೇಶಗಳಲ್ಲಿ ನಿರ್ದಿಷ್ಟ ವನ್ಯಜೀವಿಗಳ ಸಂತಾನ ನಿಯಂತ್ರಣ ಕುರಿತು ಚರ್ಚೆ ಅಗತ್ಯವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದ್ದಾರೆ.

ಕೊಡಗು ಜಿಲ್ಲೆಯ ದುಬಾರೆಯಲ್ಲಿ ಕಾವೇರಿ ನದಿಗೆ ಅಡ್ಡವಾಗಿ ನಿರ್ಮಿಸಲಾಗುತ್ತಿರುವ ನೂತನ ತೂಗುಸೇತುವೆ ಮತ್ತು ಅಧಿಕಾರಿಗಳ ವಸತಿಗೃಹ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಅವರು ಮಾತನಾಡಿದರು.

ದುಬಾರೆ ಪ್ರವಾಸಿಗರ ಅನುಕೂಲಕ್ಕಾಗಿ ಹಾಗೂ ದುಬಾರೆ ಹಾಡಿಯ ಸುಮಾರು 150 ಮನೆಗಳ ನಿವಾಸಿಗಳು ತುರ್ತು ಸಂದರ್ಭದಲ್ಲಿ ನಗರ ಸಂಪರ್ಕ ಪಡೆಯಲು ಅನುಕೂಲವಾಗುವಂತೆ ₹7.30 ಕೋಟಿ ವೆಚ್ಚದಲ್ಲಿ ಗುಣಮಟ್ಟದ ತೂಗುಸೇತುವೆ ನಿರ್ಮಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು. ಈ ಮೂಲಕ ದೀರ್ಘಕಾಲದ ಬೇಡಿಕೆಯನ್ನು ಈಡೇರಿಸಲಾಗುತ್ತಿದೆ ಎಂದರು.

ಆನೆ-ಮಾನವ ಸಂಘರ್ಷ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಶಿಫಾರಸು ಮಾಡಲು ರಚಿಸಲಾಗಿದ್ದ ತಜ್ಞರ ಸಮಿತಿ ಈಗಾಗಲೇ ವರದಿ ಸಲ್ಲಿಸಿದ್ದು, ಈ ವಿಷಯದಲ್ಲಿ ಕಾಡಂಚಿನ ಜನರು ಹಾಗೂ ಸಾರ್ವಜನಿಕರು ಕೂಡ ತಮ್ಮ ಸಲಹೆಗಳನ್ನು ನೀಡಬೇಕು ಎಂದು ಸಚಿವರು ಮನವಿ ಮಾಡಿದರು.ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ರೈಲ್ವೆ ಬ್ಯಾರಿಕೇಡ್ ಹಾಗೂ ಆನೆ ಕಂದಕ ನಿರ್ಮಾಣಕ್ಕೆ ಅನುದಾನದ ಕೊರತೆ ಇಲ್ಲ. ಇನ್ನಷ್ಟು ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದ್ದು, ಶೀಘ್ರದಲ್ಲಿಯೇ ಹೆಚ್ಚಿನ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗುವುದು ಎಂದು ಹೇಳಿದರು.

ಅರಣ್ಯವಾಸಿಗಳು ಹಾಗೂ ಅರಣ್ಯದಂಚಿನ ಜನರು ಹಲವು ವರ್ಷಗಳಿಂದ ಅರಣ್ಯವನ್ನು ಸಂರಕ್ಷಿಸುತ್ತಾ ಬಂದಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷದಿಂದ ಅಮೂಲ್ಯ ಜೀವಹಾನಿ ಸಂಭವಿಸುತ್ತಿದ್ದು, ಜನರ ಜೀವ ರಕ್ಷಣೆ ಅಧಿಕಾರಿಗಳ ಮೊದಲ ಆದ್ಯತೆಯಾಗಬೇಕು ಎಂದು ಸಚಿವರು ಸೂಚನೆ ನೀಡಿದರು.

Karnataka Forest Minister Eshwar B. Khandre said discussions are needed among experts and the public regarding wildlife population control in selected regions to reduce crop damage and human casualties caused by increasing human-animal conflict. He also announced infrastructure measures including elephant barriers and a new suspension bridge at Dubare in Kodagu district.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

13 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

13 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

18 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

18 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

18 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

1 day ago