ವನ್ಯಜೀವಿ ಸಂರಕ್ಷಣಾ ಕಾಯಿದೆ ಈಗ ಬಹುದೊಡ್ಡ ಚರ್ಚೆಯ ವಿಷಯ. ಮೃತಪಟ್ಟ ವನ್ಯಪ್ರಾಣಿಯ ಉತ್ಪನ್ನಗಳು ಸೇರಿದಂತೆ ವನ್ಯಜೀವಿ ಸಂರಕ್ಷಣಾ ಕಾಯಿದೆ ಜಾರಿಯಾಗುತ್ತದೆ. ಇದೇ ವೇಳೆ ಜೀವಂತವಾಗಿರುವ ವನ್ಯಪ್ರಾಣಿಯ ರಕ್ಷಣೆಯ ಕಡೆಗೆ ಇದೀಗ ತುರ್ತು ಗಮನ ಅಗತ್ಯವಿದೆ.
ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಹುಲಿ ಉಗುರು ಇರುವ ಲಾಕೆಟ್ ಧರಿಸಿದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಅವರನ್ನು ಬಂಧಿಸಿದ್ದರು. ಆ ನಂತರ ಹಲವು ಗಣ್ಯರ ಬಳಿಯೂ ಹುಲಿ ಉಗುರಿನ ಸರ ಇದೆ ಎಂಬ ಬಗ್ಗೆ ದೂರುಗಳು ಬರುತ್ತಿದ್ದು, ರಾಜ್ಯದಾದ್ಯಂತ ವನ್ಯಜೀವಿಗಳ ಯಾವುದೇ ಅಂಗಾಂಗ ಹೊಂದಿದ ವಸ್ತುಗಳ ಸಂಗ್ರಹಣೆ, ಮಾರಾಟ, ದಾಸ್ತಾನನ್ನು ಸಂಪೂರ್ಣ ನಿಯಂತ್ರಿಸಲು ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಗಳೂ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಸಚಿವರು ಸೂಚನೆ ನೀಡಿದ್ದಾರೆ.
ಬಳಿಕ ಪ್ರತಿಕ್ರಿಯೆ ನೀಡಿರುವ ಅರಣ್ಯ ಸಚಿವರ ಈಶ್ವರ ಖಂಡ್ರೆ ಅವರು, ವನ್ಯ ಜೀವಿಯ ಯಾವುದೇ ಅಂಗಾಂಗದ ಉತ್ಪನ್ನಗಳನ್ನು ಅಕ್ರಮವಾಗಿ ಹೊಂದುವುದು ಅಪರಾಧವಾಗುತ್ತದೆ. ಈ ಬಗ್ಗೆ ದೂರು ಬಂದರೆ ಇಲಾಖೆ, ಪರಿಶೀಲನೆ ನಡೆಸಿ ಕ್ರಮ ಜರುಗಿಸುತ್ತದೆ ಎಂದು ಹೇಳಿದ್ದರು.
ಈ ಎಲ್ಲದರ ನಡುವೆಯೇ ಕೆಲವು ಸಮಯಗಳ ಹಿಂದೆ ಆನೆಗಳ ಬಗ್ಗೆ ಇದೇ ಮಾದರಿಯಲ್ಲಿ ಚರ್ಚೆಯಾಗಿತ್ತು. ಈ ಬಗ್ಗೆ ನ್ಯಾಯಾಲಯದ ಆದೇಶ ಇದ್ದರೂ ಅದು ಪಾಲನೆ ಆಗಿರಲಿಲ್ಲ. ಯಾವುದೇ ವನ್ಯಜೀವಿ ಅಥವಾ ಪ್ರಾಣಿಗಳನ್ನು ಮುಂದಿರಿಸಿ ಭಿಕ್ಷಾಟನೆ ಮಾಡಬಾರದು ಎಂದೂ ಸೂಚಿಸಲಾಗಿತ್ತು. ಆದರೆ ಇಲಾಖೆಗಳು ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಅನೇಕ ದೇವಸ್ಥಾನಗಳಲ್ಲಿ ಇಂದಿಗೂ ಆನೆಗಳು ಇವೆ. ಕೆಲವು ಕಡೆಗಳಲ್ಲಿ ಇಂತಹ ಆನೆಗಳು ಅನಾರೋಗ್ಯಕ್ಕೆ ತುತ್ತಾದ ಘಟನೆಗಳೂ ನಡೆದಿದೆ. ಆನೆಗಳ ಮೂಲಕ ಹಣ ಸಂಗ್ರಹ, ಆಶೀರ್ವಾದ ಮಾಡುವುದೂ ನಡೆಯುತ್ತಿದೆ. ಜೀವಂತ ಪ್ರಾಣಿಗಳ ಅದರಲ್ಲೂ ವನ್ಯಪ್ರಾಣಿಗಳ ರಕ್ಷಣೆಯ ಕಡೆಗೂ ಇಲಾಖೆಗಳು ಗಮನಹರಿಸಬೇಕಿದೆ.
The Wildlife Protection Act is now the subject of discussion. Now there are demands that the departments should think about the protection of the living wildlife.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490
ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…
ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…
ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…
ರಾಜ್ಯದಲ್ಲಿ ಮಾರಾಟವಾಗುವ 15 ಬಗೆಯ ಔಷಧಗಳು ಹಾಗೂ ಸೌಂದರ್ಯ ವರ್ಧಕಗಳು ಪ್ರಾಮಾಣಿಕೃತ ಗುಣಮಟ್ಟದಲ್ಲಿ…
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಆಕ್ಸಿಯಮ್-4 ಮಿಷನ್…