Advertisement
MIRROR FOCUS

ವನ್ಯಜೀವಿ ಸಂರಕ್ಷಣಾ ಕಾಯಿದೆ ಹಾಗೂ ವನ್ಯಪ್ರಾಣಿಗಳ ರಕ್ಷಣೆಯ ಕಾಳಜಿ…! | ಆನೆಗಳ ಪಾಡು ಏನು ಹಾಗಿದ್ದರೆ….?

Share

ವನ್ಯಜೀವಿ ಸಂರಕ್ಷಣಾ ಕಾಯಿದೆ ಈಗ ಬಹುದೊಡ್ಡ ಚರ್ಚೆಯ ವಿಷಯ. ಮೃತಪಟ್ಟ ವನ್ಯಪ್ರಾಣಿಯ ಉತ್ಪನ್ನಗಳು ಸೇರಿದಂತೆ ವನ್ಯಜೀವಿ ಸಂರಕ್ಷಣಾ ಕಾಯಿದೆ ಜಾರಿಯಾಗುತ್ತದೆ. ಇದೇ ವೇಳೆ ಜೀವಂತವಾಗಿರುವ ವನ್ಯಪ್ರಾಣಿಯ ರಕ್ಷಣೆಯ ಕಡೆಗೆ ಇದೀಗ ತುರ್ತು ಗಮನ ಅಗತ್ಯವಿದೆ.

ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಹುಲಿ ಉಗುರು ಇರುವ ಲಾಕೆಟ್ ಧರಿಸಿದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಅವರನ್ನು ಬಂಧಿಸಿದ್ದರು. ಆ ನಂತರ ಹಲವು ಗಣ್ಯರ ಬಳಿಯೂ ಹುಲಿ ಉಗುರಿನ ಸರ ಇದೆ ಎಂಬ ಬಗ್ಗೆ ದೂರುಗಳು ಬರುತ್ತಿದ್ದು, ರಾಜ್ಯದಾದ್ಯಂತ ವನ್ಯಜೀವಿಗಳ ಯಾವುದೇ ಅಂಗಾಂಗ ಹೊಂದಿದ ವಸ್ತುಗಳ ಸಂಗ್ರಹಣೆ, ಮಾರಾಟ, ದಾಸ್ತಾನನ್ನು ಸಂಪೂರ್ಣ ನಿಯಂತ್ರಿಸಲು ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಗಳೂ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಸಚಿವರು ಸೂಚನೆ ನೀಡಿದ್ದಾರೆ.

ಬಳಿಕ ಪ್ರತಿಕ್ರಿಯೆ ನೀಡಿರುವ ಅರಣ್ಯ ಸಚಿವರ ಈಶ್ವರ ಖಂಡ್ರೆ ಅವರು,  ವನ್ಯ ಜೀವಿಯ ಯಾವುದೇ ಅಂಗಾಂಗದ ಉತ್ಪನ್ನಗಳನ್ನು ಅಕ್ರಮವಾಗಿ ಹೊಂದುವುದು ಅಪರಾಧವಾಗುತ್ತದೆ. ಈ ಬಗ್ಗೆ ದೂರು ಬಂದರೆ ಇಲಾಖೆ, ಪರಿಶೀಲನೆ ನಡೆಸಿ ಕ್ರಮ ಜರುಗಿಸುತ್ತದೆ ಎಂದು ಹೇಳಿದ್ದರು.

ಈ ಎಲ್ಲದರ ನಡುವೆಯೇ ಕೆಲವು ಸಮಯಗಳ ಹಿಂದೆ ಆನೆಗಳ ಬಗ್ಗೆ ಇದೇ ಮಾದರಿಯಲ್ಲಿ ಚರ್ಚೆಯಾಗಿತ್ತು. ಈ ಬಗ್ಗೆ ನ್ಯಾಯಾಲಯದ ಆದೇಶ ಇದ್ದರೂ ಅದು ಪಾಲನೆ ಆಗಿರಲಿಲ್ಲ. ಯಾವುದೇ ವನ್ಯಜೀವಿ ಅಥವಾ ಪ್ರಾಣಿಗಳನ್ನು ಮುಂದಿರಿಸಿ ಭಿಕ್ಷಾಟನೆ ಮಾಡಬಾರದು ಎಂದೂ ಸೂಚಿಸಲಾಗಿತ್ತು. ಆದರೆ ಇಲಾಖೆಗಳು ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಅನೇಕ ದೇವಸ್ಥಾನಗಳಲ್ಲಿ ಇಂದಿಗೂ ಆನೆಗಳು ಇವೆ. ಕೆಲವು ಕಡೆಗಳಲ್ಲಿ ಇಂತಹ ಆನೆಗಳು ಅನಾರೋಗ್ಯಕ್ಕೆ ತುತ್ತಾದ ಘಟನೆಗಳೂ ನಡೆದಿದೆ. ಆನೆಗಳ ಮೂಲಕ ಹಣ ಸಂಗ್ರಹ, ಆಶೀರ್ವಾದ ಮಾಡುವುದೂ ನಡೆಯುತ್ತಿದೆ. ಜೀವಂತ ಪ್ರಾಣಿಗಳ ಅದರಲ್ಲೂ ವನ್ಯಪ್ರಾಣಿಗಳ ರಕ್ಷಣೆಯ ಕಡೆಗೂ ಇಲಾಖೆಗಳು ಗಮನಹರಿಸಬೇಕಿದೆ.

The Wildlife Protection Act is now the subject of discussion. Now there are demands that the departments should think about the protection of the living wildlife.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

7 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

10 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

19 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

20 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

21 hours ago