Advertisement
MIRROR FOCUS

ವನ್ಯಜೀವಿ ಸಂರಕ್ಷಣಾ ಕಾಯಿದೆ ಹಾಗೂ ವನ್ಯಪ್ರಾಣಿಗಳ ರಕ್ಷಣೆಯ ಕಾಳಜಿ…! | ಆನೆಗಳ ಪಾಡು ಏನು ಹಾಗಿದ್ದರೆ….?

Share

ವನ್ಯಜೀವಿ ಸಂರಕ್ಷಣಾ ಕಾಯಿದೆ ಈಗ ಬಹುದೊಡ್ಡ ಚರ್ಚೆಯ ವಿಷಯ. ಮೃತಪಟ್ಟ ವನ್ಯಪ್ರಾಣಿಯ ಉತ್ಪನ್ನಗಳು ಸೇರಿದಂತೆ ವನ್ಯಜೀವಿ ಸಂರಕ್ಷಣಾ ಕಾಯಿದೆ ಜಾರಿಯಾಗುತ್ತದೆ. ಇದೇ ವೇಳೆ ಜೀವಂತವಾಗಿರುವ ವನ್ಯಪ್ರಾಣಿಯ ರಕ್ಷಣೆಯ ಕಡೆಗೆ ಇದೀಗ ತುರ್ತು ಗಮನ ಅಗತ್ಯವಿದೆ.

ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಹುಲಿ ಉಗುರು ಇರುವ ಲಾಕೆಟ್ ಧರಿಸಿದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಅವರನ್ನು ಬಂಧಿಸಿದ್ದರು. ಆ ನಂತರ ಹಲವು ಗಣ್ಯರ ಬಳಿಯೂ ಹುಲಿ ಉಗುರಿನ ಸರ ಇದೆ ಎಂಬ ಬಗ್ಗೆ ದೂರುಗಳು ಬರುತ್ತಿದ್ದು, ರಾಜ್ಯದಾದ್ಯಂತ ವನ್ಯಜೀವಿಗಳ ಯಾವುದೇ ಅಂಗಾಂಗ ಹೊಂದಿದ ವಸ್ತುಗಳ ಸಂಗ್ರಹಣೆ, ಮಾರಾಟ, ದಾಸ್ತಾನನ್ನು ಸಂಪೂರ್ಣ ನಿಯಂತ್ರಿಸಲು ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಗಳೂ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಸಚಿವರು ಸೂಚನೆ ನೀಡಿದ್ದಾರೆ.

Advertisement

ಬಳಿಕ ಪ್ರತಿಕ್ರಿಯೆ ನೀಡಿರುವ ಅರಣ್ಯ ಸಚಿವರ ಈಶ್ವರ ಖಂಡ್ರೆ ಅವರು,  ವನ್ಯ ಜೀವಿಯ ಯಾವುದೇ ಅಂಗಾಂಗದ ಉತ್ಪನ್ನಗಳನ್ನು ಅಕ್ರಮವಾಗಿ ಹೊಂದುವುದು ಅಪರಾಧವಾಗುತ್ತದೆ. ಈ ಬಗ್ಗೆ ದೂರು ಬಂದರೆ ಇಲಾಖೆ, ಪರಿಶೀಲನೆ ನಡೆಸಿ ಕ್ರಮ ಜರುಗಿಸುತ್ತದೆ ಎಂದು ಹೇಳಿದ್ದರು.

ಈ ಎಲ್ಲದರ ನಡುವೆಯೇ ಕೆಲವು ಸಮಯಗಳ ಹಿಂದೆ ಆನೆಗಳ ಬಗ್ಗೆ ಇದೇ ಮಾದರಿಯಲ್ಲಿ ಚರ್ಚೆಯಾಗಿತ್ತು. ಈ ಬಗ್ಗೆ ನ್ಯಾಯಾಲಯದ ಆದೇಶ ಇದ್ದರೂ ಅದು ಪಾಲನೆ ಆಗಿರಲಿಲ್ಲ. ಯಾವುದೇ ವನ್ಯಜೀವಿ ಅಥವಾ ಪ್ರಾಣಿಗಳನ್ನು ಮುಂದಿರಿಸಿ ಭಿಕ್ಷಾಟನೆ ಮಾಡಬಾರದು ಎಂದೂ ಸೂಚಿಸಲಾಗಿತ್ತು. ಆದರೆ ಇಲಾಖೆಗಳು ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಅನೇಕ ದೇವಸ್ಥಾನಗಳಲ್ಲಿ ಇಂದಿಗೂ ಆನೆಗಳು ಇವೆ. ಕೆಲವು ಕಡೆಗಳಲ್ಲಿ ಇಂತಹ ಆನೆಗಳು ಅನಾರೋಗ್ಯಕ್ಕೆ ತುತ್ತಾದ ಘಟನೆಗಳೂ ನಡೆದಿದೆ. ಆನೆಗಳ ಮೂಲಕ ಹಣ ಸಂಗ್ರಹ, ಆಶೀರ್ವಾದ ಮಾಡುವುದೂ ನಡೆಯುತ್ತಿದೆ. ಜೀವಂತ ಪ್ರಾಣಿಗಳ ಅದರಲ್ಲೂ ವನ್ಯಪ್ರಾಣಿಗಳ ರಕ್ಷಣೆಯ ಕಡೆಗೂ ಇಲಾಖೆಗಳು ಗಮನಹರಿಸಬೇಕಿದೆ.

Advertisement
The Wildlife Protection Act is now the subject of discussion. Now there are demands that the departments should think about the protection of the living wildlife.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

14 hours ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

15 hours ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

1 day ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

2 days ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

3 days ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

3 days ago