Advertisement
MIRROR FOCUS

ವನ್ಯಜೀವಿ ಸಂರಕ್ಷಣಾ ಕಾಯಿದೆ ಹಾಗೂ ವನ್ಯಪ್ರಾಣಿಗಳ ರಕ್ಷಣೆಯ ಕಾಳಜಿ…! | ಆನೆಗಳ ಪಾಡು ಏನು ಹಾಗಿದ್ದರೆ….?

Share

ವನ್ಯಜೀವಿ ಸಂರಕ್ಷಣಾ ಕಾಯಿದೆ ಈಗ ಬಹುದೊಡ್ಡ ಚರ್ಚೆಯ ವಿಷಯ. ಮೃತಪಟ್ಟ ವನ್ಯಪ್ರಾಣಿಯ ಉತ್ಪನ್ನಗಳು ಸೇರಿದಂತೆ ವನ್ಯಜೀವಿ ಸಂರಕ್ಷಣಾ ಕಾಯಿದೆ ಜಾರಿಯಾಗುತ್ತದೆ. ಇದೇ ವೇಳೆ ಜೀವಂತವಾಗಿರುವ ವನ್ಯಪ್ರಾಣಿಯ ರಕ್ಷಣೆಯ ಕಡೆಗೆ ಇದೀಗ ತುರ್ತು ಗಮನ ಅಗತ್ಯವಿದೆ.

ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಹುಲಿ ಉಗುರು ಇರುವ ಲಾಕೆಟ್ ಧರಿಸಿದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಅವರನ್ನು ಬಂಧಿಸಿದ್ದರು. ಆ ನಂತರ ಹಲವು ಗಣ್ಯರ ಬಳಿಯೂ ಹುಲಿ ಉಗುರಿನ ಸರ ಇದೆ ಎಂಬ ಬಗ್ಗೆ ದೂರುಗಳು ಬರುತ್ತಿದ್ದು, ರಾಜ್ಯದಾದ್ಯಂತ ವನ್ಯಜೀವಿಗಳ ಯಾವುದೇ ಅಂಗಾಂಗ ಹೊಂದಿದ ವಸ್ತುಗಳ ಸಂಗ್ರಹಣೆ, ಮಾರಾಟ, ದಾಸ್ತಾನನ್ನು ಸಂಪೂರ್ಣ ನಿಯಂತ್ರಿಸಲು ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಗಳೂ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಸಚಿವರು ಸೂಚನೆ ನೀಡಿದ್ದಾರೆ.

ಬಳಿಕ ಪ್ರತಿಕ್ರಿಯೆ ನೀಡಿರುವ ಅರಣ್ಯ ಸಚಿವರ ಈಶ್ವರ ಖಂಡ್ರೆ ಅವರು,  ವನ್ಯ ಜೀವಿಯ ಯಾವುದೇ ಅಂಗಾಂಗದ ಉತ್ಪನ್ನಗಳನ್ನು ಅಕ್ರಮವಾಗಿ ಹೊಂದುವುದು ಅಪರಾಧವಾಗುತ್ತದೆ. ಈ ಬಗ್ಗೆ ದೂರು ಬಂದರೆ ಇಲಾಖೆ, ಪರಿಶೀಲನೆ ನಡೆಸಿ ಕ್ರಮ ಜರುಗಿಸುತ್ತದೆ ಎಂದು ಹೇಳಿದ್ದರು.

ಈ ಎಲ್ಲದರ ನಡುವೆಯೇ ಕೆಲವು ಸಮಯಗಳ ಹಿಂದೆ ಆನೆಗಳ ಬಗ್ಗೆ ಇದೇ ಮಾದರಿಯಲ್ಲಿ ಚರ್ಚೆಯಾಗಿತ್ತು. ಈ ಬಗ್ಗೆ ನ್ಯಾಯಾಲಯದ ಆದೇಶ ಇದ್ದರೂ ಅದು ಪಾಲನೆ ಆಗಿರಲಿಲ್ಲ. ಯಾವುದೇ ವನ್ಯಜೀವಿ ಅಥವಾ ಪ್ರಾಣಿಗಳನ್ನು ಮುಂದಿರಿಸಿ ಭಿಕ್ಷಾಟನೆ ಮಾಡಬಾರದು ಎಂದೂ ಸೂಚಿಸಲಾಗಿತ್ತು. ಆದರೆ ಇಲಾಖೆಗಳು ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಅನೇಕ ದೇವಸ್ಥಾನಗಳಲ್ಲಿ ಇಂದಿಗೂ ಆನೆಗಳು ಇವೆ. ಕೆಲವು ಕಡೆಗಳಲ್ಲಿ ಇಂತಹ ಆನೆಗಳು ಅನಾರೋಗ್ಯಕ್ಕೆ ತುತ್ತಾದ ಘಟನೆಗಳೂ ನಡೆದಿದೆ. ಆನೆಗಳ ಮೂಲಕ ಹಣ ಸಂಗ್ರಹ, ಆಶೀರ್ವಾದ ಮಾಡುವುದೂ ನಡೆಯುತ್ತಿದೆ. ಜೀವಂತ ಪ್ರಾಣಿಗಳ ಅದರಲ್ಲೂ ವನ್ಯಪ್ರಾಣಿಗಳ ರಕ್ಷಣೆಯ ಕಡೆಗೂ ಇಲಾಖೆಗಳು ಗಮನಹರಿಸಬೇಕಿದೆ.

The Wildlife Protection Act is now the subject of discussion. Now there are demands that the departments should think about the protection of the living wildlife.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

1 day ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

1 day ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago