ವನ್ಯಜೀವಿ ಸಪ್ತಾಹ ಅಂಗವಾಗಿ ಪ್ರಾದೇಶಿಕ ಅರಣ್ಯ ವಿಭಾಗದ ವತಿಯಿಂದ ಆಯೋಜಿಸಿದ್ದ 70ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮವನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತುಮಕೂರಿನಲ್ಲಿಂದು ಉದ್ಘಾಟಿಸಿದರು.ಇದೇ ವೇಳೆ , ತುಮಕೂರು ಚಿಟ್ಟೆಗಳು ಹಾಗೂ ಹಾವುಗಳು ಎಂಬ ಶೀರ್ಷಿಕೆಯ ಭಿತ್ತಿಚಿತ್ರ ಬಿಡುಗಡೆಗೊಳಿಸಿ, ಅರಣ್ಯ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಸಿಬ್ಬಂದಿಗೆ ಸನ್ಮಾನಿಸಿದರು. ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಸ್.ಆರ್ ಶ್ರೀನಿವಾಸ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ಜಿ.ಪರಮೇಶ್ವರ್, ಭೂಮಿ ಮೇಲಿನ ಪ್ರತಿಯೊಬ್ಬರು ಸಹಬಾಳ್ವೆಯಿಂದ ಬದುಕಬೇಕು, ಮಾಲಿನ್ಯದಿಂದಾಗಿ ಜಾಗತಿಕ ತಾಪಮಾನ ಹೆಚ್ಚಾಗುತ್ತಿದೆ. ಅರಣ್ಯ ಸಂಪತ್ತು ಹಾಗೂ ವನ್ಯ ಜೀವಿಗಳ ನಶಿಸುತ್ತಿದೆ, ಅರಣ್ಯ ಬೆಳೆಸುವುದರ ಜೊತೆಗೆ ವನ್ಯ ಜೀವಿಗಳನ್ನು ಕಾಪಾಡುವುದು, ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನು ರಕ್ಷಿಸುವುದು ಸರ್ಕಾರ ಸೇರಿದಂತೆ ಎಲ್ಲರ ಆದ್ಯ ಕರ್ತವ್ಯ ಎಂದು ಹೇಳಿದರು. ಇದಕ್ಕೂ ಮುನ್ನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ವನ್ಯ ಜೀವಿ ರಕ್ಷಣೆ ಹಾಗೂ ಆರಣ್ಯಗಳ ಮಹತ್ವ ಕುರಿತು ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸಲಾಯಿತು.
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…