ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧ

April 13, 2026
10:28 PM
ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಈ ಕ್ರಮ ಅಮಾನವೀಯ ಎಂದು ಹೇಳಿ ಸರ್ಕಾರದ ಯೋಜನೆ ಕೈಬಿಡಲು ಒತ್ತಾಯಿಸಿದರು.

ಚಾಮರಾಜನಗರ ಮಾನವ-ವನ್ಯಜೀವಿ ಸಂಘರ್ಷ ತಡೆಯಲು ವನ್ಯಜೀವಿಗಳಿಗೆ ಸಂತಾನಶಕ್ತಿ ಹರಣ ಚಿಕಿತ್ಸೆ (sterilization) ಮಾಡುವ ಚಿಂತನೆಗೆ ತೀವ್ರ ವಿರೋಧ ವ್ಯಕ್ತಪಡಿಸಿ, ಚಾಮರಾಜನಗರ ತಾಲ್ಲೂಕಿನ ಮರಿಯಾಲ ಮೇಲ್ಸೇತುವೆ ಬಳಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಸರ್ಕಾರವು ಈ ಕುರಿತು ಅವೈಜ್ಞಾನಿಕ ಹಾಗೂ ಅನಾವಶ್ಯಕ ಯೋಜನೆ ರೂಪಿಸುತ್ತಿದೆ ಎಂದು ಆರೋಪಿಸಿದ ರೈತರು, ಈ ಕ್ರಮವನ್ನು ತಕ್ಷಣ ಕೈಬಿಡಬೇಕು ಎಂದು ಒತ್ತಾಯಿಸಿದರು. ವಿಶೇಷವಾಗಿ ಕಬ್ಬು ಬೆಳೆಗಾರರು ತಮ್ಮ ಬೆಳೆಗಳಿಗೆ ವನ್ಯಜೀವಿಗಳ ಹಾನಿ ಹೆಚ್ಚುತ್ತಿರುವ ಹಿನ್ನೆಲೆ ಸಮಸ್ಯೆಗೆ ಶಾಶ್ವತ ಪರಿಹಾರ ಬೇಕೆ ಹೊರತು ಇಂತಹ ಕ್ರಮ ಬೇಡ ಎಂದು ಹೇಳಿದರು.

ಈ ಸಂದರ್ಭದಲ್ಲಿ ರೈತ ಮುಖಂಡ ಭಾಗ್ಯರಾಜ್ ಮಾತನಾಡಿ, “ವನ್ಯಜೀವಿಗಳಿಗೆ ಸಂತಾನಶಕ್ತಿ ಹರಣ ಚಿಕಿತ್ಸೆ ಮಾಡುವುದು ಅಮಾನವೀಯ ಕ್ರಮವಾಗಿದ್ದು, ಪ್ರಕೃತಿ ಸಮತೋಲನಕ್ಕೆ ಧಕ್ಕೆಯಾಗಬಹುದು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆ ತಡೆದ ಹಿನ್ನೆಲೆಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಸ್ಥಳಕ್ಕೆ ಬಂದ ಅಧಿಕಾರಿಗಳು ಪ್ರತಿಭಟನಾಕಾರರನ್ನು ಸಮಾಧಾನಪಡಿಸಿ ಪರಿಸ್ಥಿತಿ ನಿಯಂತ್ರಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Farmers in Chamarajanagar staged a road blockade protest opposing the proposed sterilization of wild animals to control human-wildlife conflict. They termed the move unscientific and inhumane, demanding sustainable and effective solutions instead.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ
April 13, 2026
11:30 PM
by: ಮಿರರ್‌ ಡೆಸ್ಕ್
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ
April 13, 2026
10:45 PM
by: ಮಿರರ್‌ ಡೆಸ್ಕ್
ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ
April 13, 2026
10:21 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ
April 13, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror