Advertisement
ಸುದ್ದಿಗಳು

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧ

Share

ಚಾಮರಾಜನಗರ ಮಾನವ-ವನ್ಯಜೀವಿ ಸಂಘರ್ಷ ತಡೆಯಲು ವನ್ಯಜೀವಿಗಳಿಗೆ ಸಂತಾನಶಕ್ತಿ ಹರಣ ಚಿಕಿತ್ಸೆ (sterilization) ಮಾಡುವ ಚಿಂತನೆಗೆ ತೀವ್ರ ವಿರೋಧ ವ್ಯಕ್ತಪಡಿಸಿ, ಚಾಮರಾಜನಗರ ತಾಲ್ಲೂಕಿನ ಮರಿಯಾಲ ಮೇಲ್ಸೇತುವೆ ಬಳಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಸರ್ಕಾರವು ಈ ಕುರಿತು ಅವೈಜ್ಞಾನಿಕ ಹಾಗೂ ಅನಾವಶ್ಯಕ ಯೋಜನೆ ರೂಪಿಸುತ್ತಿದೆ ಎಂದು ಆರೋಪಿಸಿದ ರೈತರು, ಈ ಕ್ರಮವನ್ನು ತಕ್ಷಣ ಕೈಬಿಡಬೇಕು ಎಂದು ಒತ್ತಾಯಿಸಿದರು. ವಿಶೇಷವಾಗಿ ಕಬ್ಬು ಬೆಳೆಗಾರರು ತಮ್ಮ ಬೆಳೆಗಳಿಗೆ ವನ್ಯಜೀವಿಗಳ ಹಾನಿ ಹೆಚ್ಚುತ್ತಿರುವ ಹಿನ್ನೆಲೆ ಸಮಸ್ಯೆಗೆ ಶಾಶ್ವತ ಪರಿಹಾರ ಬೇಕೆ ಹೊರತು ಇಂತಹ ಕ್ರಮ ಬೇಡ ಎಂದು ಹೇಳಿದರು.

ಈ ಸಂದರ್ಭದಲ್ಲಿ ರೈತ ಮುಖಂಡ ಭಾಗ್ಯರಾಜ್ ಮಾತನಾಡಿ, “ವನ್ಯಜೀವಿಗಳಿಗೆ ಸಂತಾನಶಕ್ತಿ ಹರಣ ಚಿಕಿತ್ಸೆ ಮಾಡುವುದು ಅಮಾನವೀಯ ಕ್ರಮವಾಗಿದ್ದು, ಪ್ರಕೃತಿ ಸಮತೋಲನಕ್ಕೆ ಧಕ್ಕೆಯಾಗಬಹುದು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆ ತಡೆದ ಹಿನ್ನೆಲೆಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಸ್ಥಳಕ್ಕೆ ಬಂದ ಅಧಿಕಾರಿಗಳು ಪ್ರತಿಭಟನಾಕಾರರನ್ನು ಸಮಾಧಾನಪಡಿಸಿ ಪರಿಸ್ಥಿತಿ ನಿಯಂತ್ರಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Farmers in Chamarajanagar staged a road blockade protest opposing the proposed sterilization of wild animals to control human-wildlife conflict. They termed the move unscientific and inhumane, demanding sustainable and effective solutions instead.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

3 minutes ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

33 minutes ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

14 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

22 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

1 day ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

2 days ago