Advertisement
ಸುದ್ದಿಗಳು

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧ

Share

ಚಾಮರಾಜನಗರ ಮಾನವ-ವನ್ಯಜೀವಿ ಸಂಘರ್ಷ ತಡೆಯಲು ವನ್ಯಜೀವಿಗಳಿಗೆ ಸಂತಾನಶಕ್ತಿ ಹರಣ ಚಿಕಿತ್ಸೆ (sterilization) ಮಾಡುವ ಚಿಂತನೆಗೆ ತೀವ್ರ ವಿರೋಧ ವ್ಯಕ್ತಪಡಿಸಿ, ಚಾಮರಾಜನಗರ ತಾಲ್ಲೂಕಿನ ಮರಿಯಾಲ ಮೇಲ್ಸೇತುವೆ ಬಳಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಸರ್ಕಾರವು ಈ ಕುರಿತು ಅವೈಜ್ಞಾನಿಕ ಹಾಗೂ ಅನಾವಶ್ಯಕ ಯೋಜನೆ ರೂಪಿಸುತ್ತಿದೆ ಎಂದು ಆರೋಪಿಸಿದ ರೈತರು, ಈ ಕ್ರಮವನ್ನು ತಕ್ಷಣ ಕೈಬಿಡಬೇಕು ಎಂದು ಒತ್ತಾಯಿಸಿದರು. ವಿಶೇಷವಾಗಿ ಕಬ್ಬು ಬೆಳೆಗಾರರು ತಮ್ಮ ಬೆಳೆಗಳಿಗೆ ವನ್ಯಜೀವಿಗಳ ಹಾನಿ ಹೆಚ್ಚುತ್ತಿರುವ ಹಿನ್ನೆಲೆ ಸಮಸ್ಯೆಗೆ ಶಾಶ್ವತ ಪರಿಹಾರ ಬೇಕೆ ಹೊರತು ಇಂತಹ ಕ್ರಮ ಬೇಡ ಎಂದು ಹೇಳಿದರು.

ಈ ಸಂದರ್ಭದಲ್ಲಿ ರೈತ ಮುಖಂಡ ಭಾಗ್ಯರಾಜ್ ಮಾತನಾಡಿ, “ವನ್ಯಜೀವಿಗಳಿಗೆ ಸಂತಾನಶಕ್ತಿ ಹರಣ ಚಿಕಿತ್ಸೆ ಮಾಡುವುದು ಅಮಾನವೀಯ ಕ್ರಮವಾಗಿದ್ದು, ಪ್ರಕೃತಿ ಸಮತೋಲನಕ್ಕೆ ಧಕ್ಕೆಯಾಗಬಹುದು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆ ತಡೆದ ಹಿನ್ನೆಲೆಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಸ್ಥಳಕ್ಕೆ ಬಂದ ಅಧಿಕಾರಿಗಳು ಪ್ರತಿಭಟನಾಕಾರರನ್ನು ಸಮಾಧಾನಪಡಿಸಿ ಪರಿಸ್ಥಿತಿ ನಿಯಂತ್ರಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Farmers in Chamarajanagar staged a road blockade protest opposing the proposed sterilization of wild animals to control human-wildlife conflict. They termed the move unscientific and inhumane, demanding sustainable and effective solutions instead.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

2 hours ago

ಹವಾಮಾನ ವರದಿ | 09-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ..! ಜುಲೈ 11 ರಿಂದ ಮಳೆ ಮತ್ತಷ್ಟು ಇಳಿಕೆ, ಬಿಸಿಲಿನ ಅವಧಿ ಹೆಚ್ಚಳ ಸಾಧ್ಯ

ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…

4 hours ago

ಜುಲೈ ಮಳೆಯಿಂದ ದೇಶಕ್ಕೆ ನೆಮ್ಮದಿ…! ಮಳೆ ಕೊರತೆ 12%ಕ್ಕೆ ಇಳಿಕೆ

ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…

4 hours ago

ಇಂಧನಕ್ಕೂ ರೈತನೇ ಆಧಾರ…! ಇಥೆನಾಲ್‌ ಯೋಜನೆಯಿಂದ ರೈತರಿಗೆ ₹1.6 ಲಕ್ಷ ಕೋಟಿ ಹೆಚ್ಚುವರಿ ಆದಾಯ

ಇಥೆನಾಲ್‌ ಮಿಶ್ರಣ ಯೋಜನೆಯಿಂದ ಕಳೆದ ಹತ್ತು ವರ್ಷಗಳಲ್ಲಿ ರೈತರಿಗೆ ₹1.6 ಲಕ್ಷ ಕೋಟಿಗೂ…

4 hours ago

ಅಮೆರಿಕ-ಇರಾನ್ ಯುದ್ಧ ಮತ್ತೆ ಭುಗಿಲೇ..? ಕದನ ವಿರಾಮ ಅಂತ್ಯ ಎಂದ ಟ್ರಂಪ್ – ಹೊಸ ದಾಳಿಗಳಿಂದ ಜಾಗತಿಕ ಆತಂಕ

ಅಮೆರಿಕ-ಇರಾನ್ ನಡುವಿನ ಕದನ ವಿರಾಮ ಮತ್ತೆ ಮುರಿಯುವ ಹಂತಕ್ಕೆ ತಲುಪಿದ್ದು, ಹೊಸ ಅಮೆರಿಕನ್…

4 hours ago

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ

ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…

18 hours ago