Advertisement
MIRROR FOCUS

ದೇಶದ ತೆರಿಗೆ ವ್ಯವಸ್ಥೆಯಲ್ಲಿ ಸುಧಾರಣೆ | ಜಿಎಸ್‌ಟಿ ದರಗಳಲ್ಲಿ ಇಳಿಕೆ | ಕೃಷಿ, ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಪೂರಕವೇ..?

Share

ಜಿಎಸ್ ಟಿ  ಜಾರಿಯಾದ 8 ವರ್ಷಗಳಲ್ಲಿ ಅತಿ ದೊಡ್ಡ ಪ್ರಮಾಣದ ಪರಿಷ್ಕರಣೆ ಹಾಗೂ  ಸುಧಾರಣಾ ಕ್ರಮಗಳನ್ನು  ಪ್ರಕಟಿಸುವ ಮೂಲಕ ಕೇಂದ್ರ ಸರ್ಕಾರ ಜನಸಾಮಾನ್ಯರು, ಉದ್ಯಮ ವಲಯ, ಶಿಕ್ಷಣ, ಕೃಷಿ, ಆರೋಗ್ಯ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಕಾರಾತ್ಮಕ ಬೆಳವಣಿಗೆಗೆ  ನಾಂದಿಯಾಗಲಿದೆ ಎನ್ನುವ ನಿರೀಕ್ಷೆ ಇದೆ.

ಕೇಂದ್ರ ಹಣಕಾಸು  ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದ 56ನೇ  ಜಿಎಸ್ ಟಿ  ಕೌನ್ಸಲಿಂಗ್ ಸಭೆಯಲ್ಲಿ ಕೆಲವು  ನಿರ್ಧಾರಗಳನ್ನು  ತೆಗೆದುಕೊಳ್ಳಲಾಗಿತ್ತು. ಪ್ರಸ್ತುತ ಜಿಎಸ್ ಟಿಯಲ್ಲಿ ಶೇಕಡ  5, 12, 18 ಮತ್ತು 28ರಂತೆ  ನಾಲ್ಕು  ಸ್ಲ್ಯಾಬ್ ಗಳಿದ್ದವು. ಅವುಗಳನ್ನು ಶೇಕಡ  5 ಮತ್ತು  18ರ ದರಕ್ಕೆ ಸರಳೀಕರಿಸಿ  2 ಸ್ಲ್ಯಾಬ್ ಗಳಿಗೆ  ಮಿತಿಗೊಳಿಸಲಾಗಿದೆ. ಹೊಸದಾಗಿ  ಶೇಕಡ 40 ರ ಸ್ಲ್ಯಾಬ್ ಪರಿಚಯಿಸಲಾಗಿದೆ. ಪರಿಷ್ಕೃತ ಸುಧಾರಣಾ ಕ್ರಮಗಳು  ಸೆಪ್ಟೆಂಬರ್  22ರಂದು ನವರಾತ್ರಿಯ  ಮೊದಲ ದಿನದಿಂದ ಜಾರಿಗೆ ಬರಲಿದೆ.

ಜಿಎಸ್‌ಟಿ ದರ ಇಳಿಕೆಯಾಗಿರುವ ವಸ್ತುಗಳ ವಿವರ ಇಂತಿದೆ:   ಹಲ್ಲಿನ ಪುಡಿ, ಫೀಡಿಂಗ್ ಬಾಟಲಿಗಳು, ಅಡುಗೆ ಪಾತ್ರೆಗಳು, ಕೊಡೆಗಳು, ಪಾತ್ರೆಗಳು, ಸೈಕಲ್‌ಗಳು, ಬಿದಿರಿನ ಪೀಠೋಪಕರಣಗಳು ಮತ್ತು ಬಾಚಣಿಗೆಗಳಂತಹ ಗ್ರಾಹಕ ವಸ್ತುಗಳ ದರವನ್ನು ಇಳಿಸಲಾಗುತ್ತದೆ. ಶಾಂಪೂ, ಟಾಲ್ಕಮ್ ಪೌಡರ್, ಟೂತ್‌ಪೇಸ್ಟ್, ಟೂತ್ ಬ್ರಷ್‌ಗಳು, ಫೇಸ್ ಪೌಡರ್, ಸೋಪ್ ಮತ್ತು ಹೇರ್ ಆಯಿಲ್ ಮೇಲಿನ ದರಗಳನ್ನು ಶೇಕಡಾ 18ರಿಂದ ಶೇಕಡಾ 5ಕ್ಕೆ ಇಳಿಸಲಾಗಿದೆ.  ಎಲ್ಲ ವೈಯಕ್ತಿಕ ಜೀವ ಮತ್ತು ಆರೋಗ್ಯ ವಿಮಾ ಪಾಲಿಸಿಗಳಿಗೆ ಇನ್ನು ಮುಂದೆ ಶೂನ್ಯ ತೆರಿಗೆ, ತೆರಿಗೆ ದರ ಶೇ 28ರಿಂದ ಶೇ 18ಕ್ಕೆ ಇಳಿಯುವುದರಿಂದ ಸಿಮೆಂಟ್ ಬೆಲೆ ಕಡಿಮೆಯಾಗುತ್ತದೆ.

1,200 ಸಿಸಿಗಿಂತ ಕಡಿಮೆ ಮತ್ತು 4,000 ಎಂಎಂಗಿಂತ ಹೆಚ್ಚು ಇಲ್ಲದ ಪೆಟ್ರೋಲ್, ಎಲ್‌ಪಿಜಿ ಮತ್ತು ಸಿಎನ್‌ಜಿ ವಾಹನಗಳು ಹಾಗೂ 1,500 ಸಿಸಿ ಮತ್ತು 4,000 ಎಂಎಂ ಉದ್ದದ ಡೀಸೆಲ್ ವಾಹನಗಳ ಜಿಎಸ್ ಟಿ ಕೂಡಾ ಶೇ.28ರಿಂದ ಶೇಕಡಾ 18ಕ್ಕೆ ಇಳಿಯಲಿದೆ.   350 ಸಿಸಿ ವರೆಗಿನ ಮೋಟಾರ್‌ ಸೈಕಲ್‌ಗಳು, ಹವಾನಿಯಂತ್ರಣ ಯಂತ್ರಗಳು, ಡಿಶ್‌ವಾಶರ್‌ಗಳು ಮತ್ತು ಟಿವಿಗಳಂತಹ ಗ್ರಾಹಕ ಎಲೆಕ್ಟ್ರಾನಿಕ್ಸ್‌ಗಳಿಗೆ ಸದ್ಯ ಶೇ 28ರಷ್ಟು ತೆರಿಗೆ ವಿಧಿಸಲಾಗುತ್ತಿದ್ದು, ಶೇ 18ರಷ್ಟು ಕಡಿಮೆ ಜಿಎಸ್‌ಟಿ ವಿಧಿಸಲಾಗುತ್ತದೆ. ಎಲೆಕ್ಟ್ರಿಕ್ ವಾಹನಗಳಿಗೆ ಶೇ 5ರಷ್ಟು ಜಿಎಸ್‌ಟಿ ಮುಂದುವರಿಯಲಿದೆ.

ಬೆಣ್ಣೆ ಮತ್ತು ತುಪ್ಪದಿಂದ ಹಿಡಿದು ಒಣ ಬೀಜಗಳು, ಮಂದಗೊಳಿಸಿದ ಹಾಲು, ಸಾಸೇಜ್‌ಗಳು ಮತ್ತು ಮಾಂಸ, ಸಕ್ಕರೆ ಬೇಯಿಸಿದ ಮಿಠಾಯಿ, ಜಾಮ್ ಮತ್ತು ಹಣ್ಣಿನ ಜೆಲ್ಲಿಗಳು, ಎಳನೀರು, ನಮ್ಕೀನ್, 20 ಲೀಟರ್ ಬಾಟಲಿಗಳಲ್ಲಿ ಪ್ಯಾಕ್ ಮಾಡಿದ ಕುಡಿಯುವ ನೀರು, ಹಣ್ಣಿನ ತಿರುಳು ಅಥವಾ ಹಣ್ಣಿನ ರಸ, ಹಾಲು, ಐಸ್ ಕ್ರೀಮ್, ಪೇಸ್ಟ್ರಿ ಮತ್ತು ಬಿಸ್ಕತ್ತುಗಳು, ಪಾನೀಯಗಳು, ಕಾರ್ನ್ ಫ್ಲೇಕ್ಸ್ ಮತ್ತು ಧಾನ್ಯಗಳು ಹಾಗೂ ಸಕ್ಕರೆ ಮಿಠಾಯಿಗಳ ತೆರಿಗೆ ದರವನ್ನು ಪ್ರಸ್ತುತ ಶೇ.18ರಿಂದ ಶೇಕಡಾ 5ಕ್ಕೆ ಇಳಿಸಲಾಗುತ್ತಿದೆ.

ಎಲ್ಲ ರೀತಿಯ ಚಪಾತಿ ಮತ್ತು ಪರಾಠಾಗಳಿಗೆ ಪ್ರಸ್ತುತ ಇರುವ ಶೇ.5 ರ ದರದಿಂದ ಶೂನ್ಯ ತೆರಿಗೆ ಇರಲಿದೆ. ಶೇಕಡ 40ರ ಹೊಸ ಸ್ಲ್ಯಾಬ್ ನಲ್ಲಿ   ದುಬಾರಿ ಕಾರುಗಳು, ತಂಬಾಕು ಮತ್ತು ಸಿಗರೇಟ್‌ ,  1,200 ಸಿಸಿಗಿಂತ ಹೆಚ್ಚಿನ ಮತ್ತು 4,000 ಎಂಎಂಗಿಂತ ಹೆಚ್ಚಿನ ಉದ್ದದ ಎಲ್ಲ ಆಟೋಮೊಬೈಲ್‌ಗಳು ಹಾಗೂ 350 ಸಿಸಿಗಿಂತ ಹೆಚ್ಚಿನ ಮೋಟಾರ್‌ ಸೈಕಲ್‌ಗಳು, ವೈಯಕ್ತಿಕ ಬಳಕೆಗಾಗಿ ವಿಹಾರ ನೌಕೆಗಳು ಮತ್ತು ವಿಮಾನಗಳು ಹಾಗೂ ರೇಸಿಂಗ್ ಕಾರುಗಳಿಗೆ ಅನ್ವಯವಾಗಲಿದೆ.  ಒಟ್ಟಾರೆ ದೇಶದ ಈ ತೆರಿಗೆ ವ್ಯವಸ್ಥೆಯ ಸರಳೀಕರಣವನ್ನು ಪ್ರಮುಖ ಘಟ್ಟವೆಂದು ಪರಿಗಣಿಸಲಾಗಿದೆ. ಜನರು ಶೀಘ್ರದಲ್ಲೇ ಈ ಸುಧಾರಣೆಯ ಲಾಭವನ್ನು ಪಡೆದುಕೊಳ್ಳಲಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 30.05.2026 | ಕರಾವಳಿಯಲ್ಲಿ ತುಂತುರು ಮಳೆ, ಜೂ.7ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ| ಆರಂಭ ದುರ್ಬಲವಾಗುವ ಲಕ್ಷಣ

31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ…

3 hours ago

ಅಡಿಕೆ ಹಳದಿ ಎಲೆ ರೋಗಕ್ಕೆ ಶಾಶ್ವತ ಪರಿಹಾರದ ಭರವಸೆ..! ಟಿಶ್ಯೂ ಕಲ್ಚರ್‌ನಲ್ಲಿ ಮೊದಲ ಹಂತದ ಅಡಿಕೆ ಗಿಡಗಳು ನಾಟಿಗೆ ಸಿದ್ಧ

ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್‌ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್‌ಐ…

12 hours ago

ಈ ಬಾರಿಯ ಮುಂಗಾರು ದುರ್ಬಲವೇ..? ಐಎಂಡಿ ಎರಡನೇ ಮುನ್ಸೂಚನೆ ಬಿಡುಗಡೆ – 11 ವರ್ಷಗಳಲ್ಲೇ ಅತೀ ದುರ್ಬಲ ಮುಂಗಾರು ಸಾಧ್ಯತೆ..?

ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…

21 hours ago

ಹವಾಮಾನ ವರದಿ | 29.05.2026 | ಕರ್ನಾಟಕಕ್ಕೆ ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ | ಜೂನ್ 7 ಬಳಿಕ ಕರಾವಳಿಯಲ್ಲಿ ಭಾರೀ ಮಳೆಯ ಸೂಚನೆ!

ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…

1 day ago

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲೆ – ವಿಜ್ಞಾನಿಗಳ ಹೊಸ ಅಧ್ಯಯನದಲ್ಲಿ ಬಹಿರಂಗವಾದ ಅಚ್ಚರಿಯ ಜೀವ ವೈವಿಧ್ಯ

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…

1 day ago

ಜೈಸಲ್ಮೇರ್‌ ಘಟನೆ ಬಳಿಕ ಎಚ್ಚೆತ್ತ ಆಡಳಿತ | ಕೊಳೆತ ಸ್ಥಿತಿಯಲ್ಲಿದ್ದ ನೂರಾರು ಹಸುಗಳನ್ನು ಹೂಳುವ ಕಾರ್ಯ ಆರಂಭ

ಜೈಸಲ್ಮೇರ್‌ನಲ್ಲಿ ಬಯಲಿನಲ್ಲಿ ಪತ್ತೆಯಾಗಿದ್ದ ನೂರಾರು ಹಸುಗಳ ಶವಗಳ ಘಟನೆ ಬಳಿಕ ನಗರಸಭೆ ಶವಗಳನ್ನು…

1 day ago