ಪುಣ್ಯಕ್ಷೇತ್ರದ ಸ್ವಚ್ಛತೆಗೆ ಎಲ್ಲಾ ಭಕ್ತಾದಿಗಳ ಕೊಡುಗೆ ಅಗತ್ಯ ಇದೆ. ಕ್ಷೇತ್ರದಲ್ಲಿ ಸ್ವಚ್ಛತೆಯತ್ತ ಭಕ್ತಾದಿಗಳು ಆದ್ಯತೆ ನೀಡಲೇಬೇಕಿದೆ. ಈಚೆಗೆ ಕುಂಭ ಮೇಳದಲ್ಲಿ ಸ್ವಚ್ಛತೆಯ ಬಗ್ಗೆಯೂ ಚರ್ಚೆಯಾಗಿತ್ತು. ಈ ಹಿನ್ನೆಲೆಯನ್ನೂ ಗಮನಿಸಿದರೆ ದೇಶದ ಎಲ್ಲಾ ಪುಣ್ಯ ಕ್ಷೇತ್ರದಲ್ಲೂ ಸ್ವಚ್ಛತೆಯತ್ತ ಗಮನಹರಿಸಬೇಕು… ಇದೀಗ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಇಲ್ಲಿನ ನಮ್ಮಸುಬ್ರಹ್ಮಣ್ಯ ತಂಡವು ವಿಷಾದಕರವಾದ ಸಂಗತಿಯೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದೆ.………ಮುಂದೆ ಓದಿ……..
ಭಾನುವಾರ ಮಧ್ಯಾಹ್ನ ಕುಕ್ಕೆ ಸುಬ್ರಹ್ಮಣ್ಯದ ಆಟೋ ಚಾಲಕರೊಬ್ಬರು ಕುಮಾರಧಾರ ಸೇತುವೆ ಬಳಿ ಹೋಗುವಾಗ, ಸೇತುವೆ ಮೇಲೆ ವಾಹನ ನಿಲ್ಲಿಸಿ ನದಿಗೆ ತ್ಯಾಜ್ಯ ಎಸೆಯುವ ವ್ಯಕ್ತಿಯನ್ನು ಕಂಡು, ಅವರನ್ನು ತಡೆಯುವ ಪ್ರಯತ್ನ ಮಾಡುತ್ತಾರೆ. ಯಾರೋ ಜ್ಯೋತಿಷಿ ತಮ್ಮ ಹಳೆಯ ಬಟ್ಟೆ-ಬರೆಗಳನ್ನು ನದಿಗೆ ಎಸೆಯುವಂತೆ ಹೇಳಿದ್ದಾರೆ ಎಂದು ಉತ್ತರಿಸುತ್ತಾರೆ. ಹಳೆಯ ಬಟ್ಟೆಗಳನ್ನು ತುಂಬಿದ ಮೂರು ಚೀಲಗಳನ್ನು ನದಿಗೆ ಎಸೆದ ಬಳಿಕ, ಆಟೋ ಚಾಲಕರು ಆತನ ಪೋಟೋ ತೆಗೆಯುವಾಗ ಉತ್ತಮ ಕೆಲಸ ಮಾಡಿದಂತೆ ಫೋಟೋಗೆ ಪೋಸ್ ಕೂಡಾ ನೀಡಿದ್ದಾರೆ…!
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಪೂಜೆ ಸಲ್ಲಿಸಿ, ಅದೇ ದೇವರ ನದಿಗೆ ಬಟ್ಟೆ ಎಸೆದು ಮಲಿನಗೊಳಿಸಿದರೆ, ಪೂಜೆಯ ಫಲ ಪಡೆಯುವುದಕ್ಕಿಂತ ಪಾಪ ಕಟ್ಟಿಕೊಳ್ಳಬೇಕಾಗುತ್ತದೆ. ಹೀಗೆಂದು ನಮ್ಮ ಸುಬ್ರಹ್ಮಣ್ಯ ಪೇಸ್ಬುಕ್ ಪೇಜಿನಲ್ಲಿ ಪೋಸ್ಟ್ ಮಾಡಲಾಗಿದೆ.
ನಮ್ಮ ಸುಬ್ರಹ್ಮಣ್ಯ ತಂಡವು ಕಳೆದ ಅನೇಕ ಸಮಯಗಳಿಂದ ಸುಬ್ರಹ್ಮಣ್ಯದ ಸ್ವಚ್ಛತೆಯ ಬಗ್ಗೆ ಗಮನಹರಿಸುತ್ತಿದೆ. ಎರಡು ವರ್ಷಗಳ ಹಿಂದೆ ಪ್ರತೀ ಭಾನುವಾರ ಸ್ವಚ್ಛತಾ ಕೆಲಸ ನಡೆಸುವ ಮೂಲಕ ಜಾಗೃತಿ ಮೂಡಿಸಿತ್ತು. ಅದಾದ ಬಳಿಕ ಕಸ ಎಸೆಯದಂತೆ ಭಕ್ತಾದಿಗಳಿಗೆ ಮನವಿ ಮಾಡುತ್ತಿದೆ. ಕುಮಾರಧಾರಾ ನದಿಯಲ್ಲೂ ಬಟ್ಟೆಗಳ ರಾಶಿ ಪ್ರತೀ ತಿಂಗಳು ಲಭ್ಯವಾಗುತ್ತಿದೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ, ಒಡಿಶಾ ಕರಾವಳಿಯಲ್ಲಿ ಇದ್ದು, ಆಗಸ್ಟ್ 20,21ರಂದು ಗುಜರಾತ್…
ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು…
ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ…
ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…