Advertisement
MIRROR FOCUS

ಕುಕ್ಕೆ ಸುಬ್ರಹ್ಮಣ್ಯವನ್ನೂ…… ಪವಿತ್ರ ಕುಮಾರಧಾರ ನದಿಯನ್ನೂ ಮಲಿನ ಮಾಡ್ತೀರಾ….?

Share

ಪುಣ್ಯಕ್ಷೇತ್ರದ ಸ್ವಚ್ಛತೆಗೆ ಎಲ್ಲಾ ಭಕ್ತಾದಿಗಳ ಕೊಡುಗೆ ಅಗತ್ಯ ಇದೆ. ಕ್ಷೇತ್ರದಲ್ಲಿ ಸ್ವಚ್ಛತೆಯತ್ತ ಭಕ್ತಾದಿಗಳು ಆದ್ಯತೆ ನೀಡಲೇಬೇಕಿದೆ.   ಈಚೆಗೆ ಕುಂಭ ಮೇಳದಲ್ಲಿ ಸ್ವಚ್ಛತೆಯ ಬಗ್ಗೆಯೂ ಚರ್ಚೆಯಾಗಿತ್ತು. ಈ ಹಿನ್ನೆಲೆಯನ್ನೂ ಗಮನಿಸಿದರೆ ದೇಶದ ಎಲ್ಲಾ ಪುಣ್ಯ ಕ್ಷೇತ್ರದಲ್ಲೂ ಸ್ವಚ್ಛತೆಯತ್ತ ಗಮನಹರಿಸಬೇಕು… ಇದೀಗ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಇಲ್ಲಿನ ನಮ್ಮಸುಬ್ರಹ್ಮಣ್ಯ ತಂಡವು ವಿಷಾದಕರವಾದ ಸಂಗತಿಯೊಂದನ್ನು ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದೆ.………ಮುಂದೆ ಓದಿ……..

ಭಾನುವಾರ ಮಧ್ಯಾಹ್ನ ಕುಕ್ಕೆ ಸುಬ್ರಹ್ಮಣ್ಯದ ಆಟೋ ಚಾಲಕರೊಬ್ಬರು ಕುಮಾರಧಾರ ಸೇತುವೆ ಬಳಿ ಹೋಗುವಾಗ, ಸೇತುವೆ ಮೇಲೆ  ವಾಹನ ನಿಲ್ಲಿಸಿ ನದಿಗೆ ತ್ಯಾಜ್ಯ ಎಸೆಯುವ ವ್ಯಕ್ತಿಯನ್ನು ಕಂಡು, ಅವರನ್ನು ತಡೆಯುವ ಪ್ರಯತ್ನ ಮಾಡುತ್ತಾರೆ. ಯಾರೋ ಜ್ಯೋತಿಷಿ ತಮ್ಮ ಹಳೆಯ ಬಟ್ಟೆ-ಬರೆಗಳನ್ನು ನದಿಗೆ ಎಸೆಯುವಂತೆ ಹೇಳಿದ್ದಾರೆ ಎಂದು ಉತ್ತರಿಸುತ್ತಾರೆ. ಹಳೆಯ ಬಟ್ಟೆಗಳನ್ನು ತುಂಬಿದ ಮೂರು ಚೀಲಗಳನ್ನು ನದಿಗೆ ಎಸೆದ ಬಳಿಕ, ಆಟೋ ಚಾಲಕರು ಆತನ ಪೋಟೋ ತೆಗೆಯುವಾಗ ಉತ್ತಮ ಕೆಲಸ ಮಾಡಿದಂತೆ ಫೋಟೋಗೆ ಪೋಸ್ ಕೂಡಾ ನೀಡಿದ್ದಾರೆ…!

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಪೂಜೆ ಸಲ್ಲಿಸಿ, ಅದೇ ದೇವರ ನದಿಗೆ ಬಟ್ಟೆ ಎಸೆದು ಮಲಿನಗೊಳಿಸಿದರೆ, ಪೂಜೆಯ ಫಲ ಪಡೆಯುವುದಕ್ಕಿಂತ ಪಾಪ ಕಟ್ಟಿಕೊಳ್ಳಬೇಕಾಗುತ್ತದೆ.  ಹೀಗೆಂದು ನಮ್ಮ ಸುಬ್ರಹ್ಮಣ್ಯ ಪೇಸ್‌ಬುಕ್‌ ಪೇಜಿನಲ್ಲಿ ಪೋಸ್ಟ್‌ ಮಾಡಲಾಗಿದೆ.

ನಮ್ಮ ಸುಬ್ರಹ್ಮಣ್ಯ ತಂಡವು ಕಳೆದ ಅನೇಕ ಸಮಯಗಳಿಂದ ಸುಬ್ರಹ್ಮಣ್ಯದ ಸ್ವಚ್ಛತೆಯ ಬಗ್ಗೆ ಗಮನಹರಿಸುತ್ತಿದೆ. ಎರಡು ವರ್ಷಗಳ ಹಿಂದೆ ಪ್ರತೀ ಭಾನುವಾರ ಸ್ವಚ್ಛತಾ ಕೆಲಸ ನಡೆಸುವ ಮೂಲಕ ಜಾಗೃತಿ ಮೂಡಿಸಿತ್ತು. ಅದಾದ ಬಳಿಕ ಕಸ ಎಸೆಯದಂತೆ ಭಕ್ತಾದಿಗಳಿಗೆ ಮನವಿ ಮಾಡುತ್ತಿದೆ.  ಕುಮಾರಧಾರಾ ನದಿಯಲ್ಲೂ ಬಟ್ಟೆಗಳ ರಾಶಿ ಪ್ರತೀ ತಿಂಗಳು ಲಭ್ಯವಾಗುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

23 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

1 day ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 day ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

1 day ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

2 days ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

2 days ago