ಪುಣ್ಯಕ್ಷೇತ್ರದ ಸ್ವಚ್ಛತೆಗೆ ಎಲ್ಲಾ ಭಕ್ತಾದಿಗಳ ಕೊಡುಗೆ ಅಗತ್ಯ ಇದೆ. ಕ್ಷೇತ್ರದಲ್ಲಿ ಸ್ವಚ್ಛತೆಯತ್ತ ಭಕ್ತಾದಿಗಳು ಆದ್ಯತೆ ನೀಡಲೇಬೇಕಿದೆ. ಈಚೆಗೆ ಕುಂಭ ಮೇಳದಲ್ಲಿ ಸ್ವಚ್ಛತೆಯ ಬಗ್ಗೆಯೂ ಚರ್ಚೆಯಾಗಿತ್ತು. ಈ ಹಿನ್ನೆಲೆಯನ್ನೂ ಗಮನಿಸಿದರೆ ದೇಶದ ಎಲ್ಲಾ ಪುಣ್ಯ ಕ್ಷೇತ್ರದಲ್ಲೂ ಸ್ವಚ್ಛತೆಯತ್ತ ಗಮನಹರಿಸಬೇಕು… ಇದೀಗ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಇಲ್ಲಿನ ನಮ್ಮಸುಬ್ರಹ್ಮಣ್ಯ ತಂಡವು ವಿಷಾದಕರವಾದ ಸಂಗತಿಯೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದೆ.………ಮುಂದೆ ಓದಿ……..
ಭಾನುವಾರ ಮಧ್ಯಾಹ್ನ ಕುಕ್ಕೆ ಸುಬ್ರಹ್ಮಣ್ಯದ ಆಟೋ ಚಾಲಕರೊಬ್ಬರು ಕುಮಾರಧಾರ ಸೇತುವೆ ಬಳಿ ಹೋಗುವಾಗ, ಸೇತುವೆ ಮೇಲೆ ವಾಹನ ನಿಲ್ಲಿಸಿ ನದಿಗೆ ತ್ಯಾಜ್ಯ ಎಸೆಯುವ ವ್ಯಕ್ತಿಯನ್ನು ಕಂಡು, ಅವರನ್ನು ತಡೆಯುವ ಪ್ರಯತ್ನ ಮಾಡುತ್ತಾರೆ. ಯಾರೋ ಜ್ಯೋತಿಷಿ ತಮ್ಮ ಹಳೆಯ ಬಟ್ಟೆ-ಬರೆಗಳನ್ನು ನದಿಗೆ ಎಸೆಯುವಂತೆ ಹೇಳಿದ್ದಾರೆ ಎಂದು ಉತ್ತರಿಸುತ್ತಾರೆ. ಹಳೆಯ ಬಟ್ಟೆಗಳನ್ನು ತುಂಬಿದ ಮೂರು ಚೀಲಗಳನ್ನು ನದಿಗೆ ಎಸೆದ ಬಳಿಕ, ಆಟೋ ಚಾಲಕರು ಆತನ ಪೋಟೋ ತೆಗೆಯುವಾಗ ಉತ್ತಮ ಕೆಲಸ ಮಾಡಿದಂತೆ ಫೋಟೋಗೆ ಪೋಸ್ ಕೂಡಾ ನೀಡಿದ್ದಾರೆ…!
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಪೂಜೆ ಸಲ್ಲಿಸಿ, ಅದೇ ದೇವರ ನದಿಗೆ ಬಟ್ಟೆ ಎಸೆದು ಮಲಿನಗೊಳಿಸಿದರೆ, ಪೂಜೆಯ ಫಲ ಪಡೆಯುವುದಕ್ಕಿಂತ ಪಾಪ ಕಟ್ಟಿಕೊಳ್ಳಬೇಕಾಗುತ್ತದೆ. ಹೀಗೆಂದು ನಮ್ಮ ಸುಬ್ರಹ್ಮಣ್ಯ ಪೇಸ್ಬುಕ್ ಪೇಜಿನಲ್ಲಿ ಪೋಸ್ಟ್ ಮಾಡಲಾಗಿದೆ.
ನಮ್ಮ ಸುಬ್ರಹ್ಮಣ್ಯ ತಂಡವು ಕಳೆದ ಅನೇಕ ಸಮಯಗಳಿಂದ ಸುಬ್ರಹ್ಮಣ್ಯದ ಸ್ವಚ್ಛತೆಯ ಬಗ್ಗೆ ಗಮನಹರಿಸುತ್ತಿದೆ. ಎರಡು ವರ್ಷಗಳ ಹಿಂದೆ ಪ್ರತೀ ಭಾನುವಾರ ಸ್ವಚ್ಛತಾ ಕೆಲಸ ನಡೆಸುವ ಮೂಲಕ ಜಾಗೃತಿ ಮೂಡಿಸಿತ್ತು. ಅದಾದ ಬಳಿಕ ಕಸ ಎಸೆಯದಂತೆ ಭಕ್ತಾದಿಗಳಿಗೆ ಮನವಿ ಮಾಡುತ್ತಿದೆ. ಕುಮಾರಧಾರಾ ನದಿಯಲ್ಲೂ ಬಟ್ಟೆಗಳ ರಾಶಿ ಪ್ರತೀ ತಿಂಗಳು ಲಭ್ಯವಾಗುತ್ತಿದೆ.
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…