ಎಲ್ಲೆಡೆ ಮೊದಲ ಮಳೆ ಖುಷಿ ತಂದರೆ ಕೆಲವು ಕಡೆಗಳಲ್ಲಿ ಭಾರೀ ಗಾಳಿ ಹಾಗೂ ಮಳೆ ಅವಾಂತರ ಸೃಷ್ಟಿಸಿದೆ.
ಸುಳ್ಯ ತಾಲೂಕಿನ ಪಂಜದ ಆಸುಪಾಸಿನಲ್ಲಿ ಬುಧವಾರ ಸಂಜೆ ಭಾರೀ ಗಾಳಿ ಹಾಗೂ ಮಳೆ ಸುರಿದಿದೆ. ಗಾಳಿಯ ಕಾರಣದಿಂದ ಪಂಜದ ಆಸುಪಾಸಿನಲ್ಲಿ ಅಪಾರ ಹಾನಿಯಾಗಿದೆ.
ಪಂಜ ಬಳಿಯ ಕಂರ್ಬಿ ಗಣೇಶ್ ಅವರ ತೋಟದಲ್ಲಿ ಸುಮಾರು 500 ಕ್ಕೂ ಹೆಚ್ಚು ಅಡಿಕೆ ಮರಗಳು,100 ಕ್ಕೂ ಹೆಚ್ಚು ರಬ್ಬರ್ ಮರಗಳು ಧರೆಗೆ ಉರುಳಿದೆ. ಈ ಆಸುಪಾಸಿನ ಸುಮಾರು 20 ಕ್ಕೂ ಅಧಿಕ ವಿದ್ಯುತ್ ಕಂಬಗಳು ತುಂಡಾಗಿದ್ದು ವಿದ್ಯುತ್ ಪರಿವರ್ತಕಗಳು ಧರೆಗೆ ಉರುಳಿದೆ.
ಗಾಳಿ ಮಳೆಗೆ ಐನೆಕಿದು ಗ್ರಾಮದ ವಿಜಯ್ ಕೋಟೆ ಬೈಲ್ ಅವರ ಮನೆಗೆ ಮರ ಬಿದ್ದಿದೆ. ಮನೆ ಹಾಗೂ ಮನೆಯ ಎದುರುಗಡೆ ನಿಲ್ಲಿಸಿದ ಬೈಕ್ ಹಾನಿಗೊಳಗಾಗಿದೆ. ಮರ ಬಿದ್ದ ಸಂದರ್ಭದಲ್ಲಿ ಮನೆಯಲ್ಲಿದ್ದವರು ಸಣ್ಣಪುಟ್ಟ ಗಾಯಗೊಂಡು ಅದೃಷ್ಟವಶಾತ್ ಪಾರಾಗಿದ್ದಾರೆ.
ಘಟನೆ ಸ್ಥಳಕ್ಕೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯ ಗಿರೀಶ್ ಪೈಲಾಜೆ, ಅಜಿತ್ ಕಲ್ಲೇರಿ, ಯಶವಂತ್ ಕೊಪ್ಪಳಗದ್ದೆ, ಅಶ್ವಥ್ ಕಲ್ಲೇರಿ, ಸುಹಾಸ್ ಕೋಟೆ ಬೈಲ್, ವಿಪತ್ತು ನಿರ್ವಹಣಾ ತಂಡದ ಬಾಲಸುಬ್ರಹ್ಮಣ್ಯ, ಲಕ್ಷಣ ಮೊದಲಾದವರು ಆಗಮಿಸಿ ಮರ ತೆರವು ಮಾಡಲು ಸಹಕರಿಸಿದರು.
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…