ಎಲ್ಲೆಡೆ ಮೊದಲ ಮಳೆ ಖುಷಿ ತಂದರೆ ಕೆಲವು ಕಡೆಗಳಲ್ಲಿ ಭಾರೀ ಗಾಳಿ ಹಾಗೂ ಮಳೆ ಅವಾಂತರ ಸೃಷ್ಟಿಸಿದೆ.
ಸುಳ್ಯ ತಾಲೂಕಿನ ಪಂಜದ ಆಸುಪಾಸಿನಲ್ಲಿ ಬುಧವಾರ ಸಂಜೆ ಭಾರೀ ಗಾಳಿ ಹಾಗೂ ಮಳೆ ಸುರಿದಿದೆ. ಗಾಳಿಯ ಕಾರಣದಿಂದ ಪಂಜದ ಆಸುಪಾಸಿನಲ್ಲಿ ಅಪಾರ ಹಾನಿಯಾಗಿದೆ.
ಪಂಜ ಬಳಿಯ ಕಂರ್ಬಿ ಗಣೇಶ್ ಅವರ ತೋಟದಲ್ಲಿ ಸುಮಾರು 500 ಕ್ಕೂ ಹೆಚ್ಚು ಅಡಿಕೆ ಮರಗಳು,100 ಕ್ಕೂ ಹೆಚ್ಚು ರಬ್ಬರ್ ಮರಗಳು ಧರೆಗೆ ಉರುಳಿದೆ. ಈ ಆಸುಪಾಸಿನ ಸುಮಾರು 20 ಕ್ಕೂ ಅಧಿಕ ವಿದ್ಯುತ್ ಕಂಬಗಳು ತುಂಡಾಗಿದ್ದು ವಿದ್ಯುತ್ ಪರಿವರ್ತಕಗಳು ಧರೆಗೆ ಉರುಳಿದೆ.
ಗಾಳಿ ಮಳೆಗೆ ಐನೆಕಿದು ಗ್ರಾಮದ ವಿಜಯ್ ಕೋಟೆ ಬೈಲ್ ಅವರ ಮನೆಗೆ ಮರ ಬಿದ್ದಿದೆ. ಮನೆ ಹಾಗೂ ಮನೆಯ ಎದುರುಗಡೆ ನಿಲ್ಲಿಸಿದ ಬೈಕ್ ಹಾನಿಗೊಳಗಾಗಿದೆ. ಮರ ಬಿದ್ದ ಸಂದರ್ಭದಲ್ಲಿ ಮನೆಯಲ್ಲಿದ್ದವರು ಸಣ್ಣಪುಟ್ಟ ಗಾಯಗೊಂಡು ಅದೃಷ್ಟವಶಾತ್ ಪಾರಾಗಿದ್ದಾರೆ.
ಘಟನೆ ಸ್ಥಳಕ್ಕೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯ ಗಿರೀಶ್ ಪೈಲಾಜೆ, ಅಜಿತ್ ಕಲ್ಲೇರಿ, ಯಶವಂತ್ ಕೊಪ್ಪಳಗದ್ದೆ, ಅಶ್ವಥ್ ಕಲ್ಲೇರಿ, ಸುಹಾಸ್ ಕೋಟೆ ಬೈಲ್, ವಿಪತ್ತು ನಿರ್ವಹಣಾ ತಂಡದ ಬಾಲಸುಬ್ರಹ್ಮಣ್ಯ, ಲಕ್ಷಣ ಮೊದಲಾದವರು ಆಗಮಿಸಿ ಮರ ತೆರವು ಮಾಡಲು ಸಹಕರಿಸಿದರು.
ಒಂಬತ್ತು ತಿಂಗಳ ಹಿಂದೆ ಜೂನ್ 5 ರಂದು ISS ಅಂದರೆ ಅಂತಾರಾಷ್ಟ್ರೀಯ ಬಾಹ್ಯಾಕಾಶ…
ಮಂಗನಕಾಯಿಲೆ ಸೋಂಕು ಮಲೆನಾಡು ಕಡೆಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕೆಲವು ಕಡೆ…
ರೈತರ ಪಂಪ್ ಸೆಟ್ ಗಳಿಗೆ ಪ್ರತಿನಿತ್ಯ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ…
ಅಮೆರಿಕದ ಹಲವು ರಾಜ್ಯಗಳಲ್ಲಿ ಅತ್ಯಂತ ಪ್ರಬಲ ಚಂಡಮಾರುತ ಹಾಗೂ ಸುಳಿಗಾಳಿ ಉಂಟಾಗಿದ್ದು, ಈವರೆಗೆ…
ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಾ. 20 ರವರೆಗೆ ಬಿಸಿ ಗಾಳಿ ಬೀಸುವ…
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಹಿಮಪಾತ ಆರಂಭವಾಗಿದೆ. ಕಾಶ್ಮೀರದ ಹಲವು ಭಾಗಗಳಲ್ಲಿ ಎರಡು ದಿನಗಳ…