Advertisement
ಸುದ್ದಿಗಳು

ಮೊದಲ ಗಾಳಿ ಮಳೆ ತಂದ ಅವಾಂತರ | ಮನೆಗೆ ಬಿದ್ದ ಮರ | 500 ಕ್ಕೂ ಹೆಚ್ಚು ಅಡಿಕೆ ಮರ ನಾಶ | ತುಂಡು ತುಂಡಾದ ವಿದ್ಯುತ್‌ ಕಂಬಗಳು |

Share

ಎಲ್ಲೆಡೆ ಮೊದಲ ಮಳೆ ಖುಷಿ ತಂದರೆ ಕೆಲವು ಕಡೆಗಳಲ್ಲಿ  ಭಾರೀ ಗಾಳಿ ಹಾಗೂ ಮಳೆ ಅವಾಂತರ ಸೃಷ್ಟಿಸಿದೆ.

ಸುಳ್ಯ ತಾಲೂಕಿನ ಪಂಜದ ಆಸುಪಾಸಿನಲ್ಲಿ ಬುಧವಾರ ಸಂಜೆ ಭಾರೀ ಗಾಳಿ ಹಾಗೂ ಮಳೆ ಸುರಿದಿದೆ.  ಗಾಳಿಯ ಕಾರಣದಿಂದ ಪಂಜದ ಆಸುಪಾಸಿನಲ್ಲಿ ಅಪಾರ ಹಾನಿಯಾಗಿದೆ.

ಪಂಜ ಬಳಿಯ ಕಂರ್ಬಿ ಗಣೇಶ್‌ ಅವರ ತೋಟದಲ್ಲಿ ಸುಮಾರು 500 ಕ್ಕೂ ಹೆಚ್ಚು ಅಡಿಕೆ ಮರಗಳು,100 ಕ್ಕೂ ಹೆಚ್ಚು ರಬ್ಬರ್‌ ಮರಗಳು  ಧರೆಗೆ ಉರುಳಿದೆ. ಈ ಆಸುಪಾಸಿನ ಸುಮಾರು 20 ಕ್ಕೂ ಅಧಿಕ ವಿದ್ಯುತ್‌ ಕಂಬಗಳು ತುಂಡಾಗಿದ್ದು ವಿದ್ಯುತ್‌ ಪರಿವರ್ತಕಗಳು ಧರೆಗೆ ಉರುಳಿದೆ.

ಗಾಳಿ ಮಳೆಗೆ  ಐನೆಕಿದು ಗ್ರಾಮದ ವಿಜಯ್ ಕೋಟೆ ಬೈಲ್ ಅವರ ಮನೆಗೆ ಮರ ಬಿದ್ದಿದೆ.  ಮನೆ ಹಾಗೂ ಮನೆಯ ಎದುರುಗಡೆ ನಿಲ್ಲಿಸಿದ ಬೈಕ್ ಹಾನಿಗೊಳಗಾಗಿದೆ. ಮರ ಬಿದ್ದ ಸಂದರ್ಭದಲ್ಲಿ ಮನೆಯಲ್ಲಿದ್ದವರು ಸಣ್ಣಪುಟ್ಟ ಗಾಯಗೊಂಡು ಅದೃಷ್ಟವಶಾತ್ ಪಾರಾಗಿದ್ದಾರೆ.

ಘಟನೆ ಸ್ಥಳಕ್ಕೆ  ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯ ಗಿರೀಶ್ ಪೈಲಾಜೆ, ಅಜಿತ್ ಕಲ್ಲೇರಿ, ಯಶವಂತ್ ಕೊಪ್ಪಳಗದ್ದೆ, ಅಶ್ವಥ್ ಕಲ್ಲೇರಿ, ಸುಹಾಸ್ ಕೋಟೆ ಬೈಲ್,   ವಿಪತ್ತು ನಿರ್ವಹಣಾ ತಂಡದ  ಬಾಲಸುಬ್ರಹ್ಮಣ್ಯ, ಲಕ್ಷಣ ಮೊದಲಾದವರು ಆಗಮಿಸಿ ಮರ ತೆರವು ಮಾಡಲು ಸಹಕರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

9 minutes ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

31 minutes ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

2 hours ago

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…

2 hours ago

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

16 hours ago