ಎಲ್ಲೆಡೆ ಮೊದಲ ಮಳೆ ಖುಷಿ ತಂದರೆ ಕೆಲವು ಕಡೆಗಳಲ್ಲಿ ಭಾರೀ ಗಾಳಿ ಹಾಗೂ ಮಳೆ ಅವಾಂತರ ಸೃಷ್ಟಿಸಿದೆ.
ಸುಳ್ಯ ತಾಲೂಕಿನ ಪಂಜದ ಆಸುಪಾಸಿನಲ್ಲಿ ಬುಧವಾರ ಸಂಜೆ ಭಾರೀ ಗಾಳಿ ಹಾಗೂ ಮಳೆ ಸುರಿದಿದೆ. ಗಾಳಿಯ ಕಾರಣದಿಂದ ಪಂಜದ ಆಸುಪಾಸಿನಲ್ಲಿ ಅಪಾರ ಹಾನಿಯಾಗಿದೆ.
ಪಂಜ ಬಳಿಯ ಕಂರ್ಬಿ ಗಣೇಶ್ ಅವರ ತೋಟದಲ್ಲಿ ಸುಮಾರು 500 ಕ್ಕೂ ಹೆಚ್ಚು ಅಡಿಕೆ ಮರಗಳು,100 ಕ್ಕೂ ಹೆಚ್ಚು ರಬ್ಬರ್ ಮರಗಳು ಧರೆಗೆ ಉರುಳಿದೆ. ಈ ಆಸುಪಾಸಿನ ಸುಮಾರು 20 ಕ್ಕೂ ಅಧಿಕ ವಿದ್ಯುತ್ ಕಂಬಗಳು ತುಂಡಾಗಿದ್ದು ವಿದ್ಯುತ್ ಪರಿವರ್ತಕಗಳು ಧರೆಗೆ ಉರುಳಿದೆ.
ಗಾಳಿ ಮಳೆಗೆ ಐನೆಕಿದು ಗ್ರಾಮದ ವಿಜಯ್ ಕೋಟೆ ಬೈಲ್ ಅವರ ಮನೆಗೆ ಮರ ಬಿದ್ದಿದೆ. ಮನೆ ಹಾಗೂ ಮನೆಯ ಎದುರುಗಡೆ ನಿಲ್ಲಿಸಿದ ಬೈಕ್ ಹಾನಿಗೊಳಗಾಗಿದೆ. ಮರ ಬಿದ್ದ ಸಂದರ್ಭದಲ್ಲಿ ಮನೆಯಲ್ಲಿದ್ದವರು ಸಣ್ಣಪುಟ್ಟ ಗಾಯಗೊಂಡು ಅದೃಷ್ಟವಶಾತ್ ಪಾರಾಗಿದ್ದಾರೆ.
ಘಟನೆ ಸ್ಥಳಕ್ಕೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯ ಗಿರೀಶ್ ಪೈಲಾಜೆ, ಅಜಿತ್ ಕಲ್ಲೇರಿ, ಯಶವಂತ್ ಕೊಪ್ಪಳಗದ್ದೆ, ಅಶ್ವಥ್ ಕಲ್ಲೇರಿ, ಸುಹಾಸ್ ಕೋಟೆ ಬೈಲ್, ವಿಪತ್ತು ನಿರ್ವಹಣಾ ತಂಡದ ಬಾಲಸುಬ್ರಹ್ಮಣ್ಯ, ಲಕ್ಷಣ ಮೊದಲಾದವರು ಆಗಮಿಸಿ ಮರ ತೆರವು ಮಾಡಲು ಸಹಕರಿಸಿದರು.
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…
ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್ಡಿಆರ್ಎಫ್ ಪರಿಹಾರ ಮೊತ್ತ…
ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…
ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…