ಎಲ್ಲೆಡೆ ಮೊದಲ ಮಳೆ ಖುಷಿ ತಂದರೆ ಕೆಲವು ಕಡೆಗಳಲ್ಲಿ ಭಾರೀ ಗಾಳಿ ಹಾಗೂ ಮಳೆ ಅವಾಂತರ ಸೃಷ್ಟಿಸಿದೆ.
ಸುಳ್ಯ ತಾಲೂಕಿನ ಪಂಜದ ಆಸುಪಾಸಿನಲ್ಲಿ ಬುಧವಾರ ಸಂಜೆ ಭಾರೀ ಗಾಳಿ ಹಾಗೂ ಮಳೆ ಸುರಿದಿದೆ. ಗಾಳಿಯ ಕಾರಣದಿಂದ ಪಂಜದ ಆಸುಪಾಸಿನಲ್ಲಿ ಅಪಾರ ಹಾನಿಯಾಗಿದೆ.
ಪಂಜ ಬಳಿಯ ಕಂರ್ಬಿ ಗಣೇಶ್ ಅವರ ತೋಟದಲ್ಲಿ ಸುಮಾರು 500 ಕ್ಕೂ ಹೆಚ್ಚು ಅಡಿಕೆ ಮರಗಳು,100 ಕ್ಕೂ ಹೆಚ್ಚು ರಬ್ಬರ್ ಮರಗಳು ಧರೆಗೆ ಉರುಳಿದೆ. ಈ ಆಸುಪಾಸಿನ ಸುಮಾರು 20 ಕ್ಕೂ ಅಧಿಕ ವಿದ್ಯುತ್ ಕಂಬಗಳು ತುಂಡಾಗಿದ್ದು ವಿದ್ಯುತ್ ಪರಿವರ್ತಕಗಳು ಧರೆಗೆ ಉರುಳಿದೆ.
ಗಾಳಿ ಮಳೆಗೆ ಐನೆಕಿದು ಗ್ರಾಮದ ವಿಜಯ್ ಕೋಟೆ ಬೈಲ್ ಅವರ ಮನೆಗೆ ಮರ ಬಿದ್ದಿದೆ. ಮನೆ ಹಾಗೂ ಮನೆಯ ಎದುರುಗಡೆ ನಿಲ್ಲಿಸಿದ ಬೈಕ್ ಹಾನಿಗೊಳಗಾಗಿದೆ. ಮರ ಬಿದ್ದ ಸಂದರ್ಭದಲ್ಲಿ ಮನೆಯಲ್ಲಿದ್ದವರು ಸಣ್ಣಪುಟ್ಟ ಗಾಯಗೊಂಡು ಅದೃಷ್ಟವಶಾತ್ ಪಾರಾಗಿದ್ದಾರೆ.
ಘಟನೆ ಸ್ಥಳಕ್ಕೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯ ಗಿರೀಶ್ ಪೈಲಾಜೆ, ಅಜಿತ್ ಕಲ್ಲೇರಿ, ಯಶವಂತ್ ಕೊಪ್ಪಳಗದ್ದೆ, ಅಶ್ವಥ್ ಕಲ್ಲೇರಿ, ಸುಹಾಸ್ ಕೋಟೆ ಬೈಲ್, ವಿಪತ್ತು ನಿರ್ವಹಣಾ ತಂಡದ ಬಾಲಸುಬ್ರಹ್ಮಣ್ಯ, ಲಕ್ಷಣ ಮೊದಲಾದವರು ಆಗಮಿಸಿ ಮರ ತೆರವು ಮಾಡಲು ಸಹಕರಿಸಿದರು.
ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…
ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ ಇದೆ. ಅದೇ ರೀತಿ ನೈರುತ್ಯ ಮಾನ್ಸೂನ್…
ಸಮಾಜಕ್ಕೆ ಸೇವೆ ಮಾಡೋದು ಅಂದರೆ ಅದಕ್ಕೆ ಹಲವು ಆಯಾಮಗಳಿವೆ. ನಿಮ್ಮಲ್ಲಿರುವ ಜ್ನಾನವನ್ನು ಜನರಿಗೆ…
ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ…
ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…
ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…