ಎಲ್ಲೆಡೆ ಮೊದಲ ಮಳೆ ಖುಷಿ ತಂದರೆ ಕೆಲವು ಕಡೆಗಳಲ್ಲಿ ಭಾರೀ ಗಾಳಿ ಹಾಗೂ ಮಳೆ ಅವಾಂತರ ಸೃಷ್ಟಿಸಿದೆ.
ಸುಳ್ಯ ತಾಲೂಕಿನ ಪಂಜದ ಆಸುಪಾಸಿನಲ್ಲಿ ಬುಧವಾರ ಸಂಜೆ ಭಾರೀ ಗಾಳಿ ಹಾಗೂ ಮಳೆ ಸುರಿದಿದೆ. ಗಾಳಿಯ ಕಾರಣದಿಂದ ಪಂಜದ ಆಸುಪಾಸಿನಲ್ಲಿ ಅಪಾರ ಹಾನಿಯಾಗಿದೆ.
ಪಂಜ ಬಳಿಯ ಕಂರ್ಬಿ ಗಣೇಶ್ ಅವರ ತೋಟದಲ್ಲಿ ಸುಮಾರು 500 ಕ್ಕೂ ಹೆಚ್ಚು ಅಡಿಕೆ ಮರಗಳು,100 ಕ್ಕೂ ಹೆಚ್ಚು ರಬ್ಬರ್ ಮರಗಳು ಧರೆಗೆ ಉರುಳಿದೆ. ಈ ಆಸುಪಾಸಿನ ಸುಮಾರು 20 ಕ್ಕೂ ಅಧಿಕ ವಿದ್ಯುತ್ ಕಂಬಗಳು ತುಂಡಾಗಿದ್ದು ವಿದ್ಯುತ್ ಪರಿವರ್ತಕಗಳು ಧರೆಗೆ ಉರುಳಿದೆ.
ಗಾಳಿ ಮಳೆಗೆ ಐನೆಕಿದು ಗ್ರಾಮದ ವಿಜಯ್ ಕೋಟೆ ಬೈಲ್ ಅವರ ಮನೆಗೆ ಮರ ಬಿದ್ದಿದೆ. ಮನೆ ಹಾಗೂ ಮನೆಯ ಎದುರುಗಡೆ ನಿಲ್ಲಿಸಿದ ಬೈಕ್ ಹಾನಿಗೊಳಗಾಗಿದೆ. ಮರ ಬಿದ್ದ ಸಂದರ್ಭದಲ್ಲಿ ಮನೆಯಲ್ಲಿದ್ದವರು ಸಣ್ಣಪುಟ್ಟ ಗಾಯಗೊಂಡು ಅದೃಷ್ಟವಶಾತ್ ಪಾರಾಗಿದ್ದಾರೆ.
ಘಟನೆ ಸ್ಥಳಕ್ಕೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯ ಗಿರೀಶ್ ಪೈಲಾಜೆ, ಅಜಿತ್ ಕಲ್ಲೇರಿ, ಯಶವಂತ್ ಕೊಪ್ಪಳಗದ್ದೆ, ಅಶ್ವಥ್ ಕಲ್ಲೇರಿ, ಸುಹಾಸ್ ಕೋಟೆ ಬೈಲ್, ವಿಪತ್ತು ನಿರ್ವಹಣಾ ತಂಡದ ಬಾಲಸುಬ್ರಹ್ಮಣ್ಯ, ಲಕ್ಷಣ ಮೊದಲಾದವರು ಆಗಮಿಸಿ ಮರ ತೆರವು ಮಾಡಲು ಸಹಕರಿಸಿದರು.
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…