Advertisement
ಕಿಟಕಿ

ಪುಟ್ಟ ಕಿಂಡಿಯಿಂದ ದೊಡ್ಡ ಕಿಟಕಿಯತ್ತ

Share

ಮನೆಯಲ್ಲಿ ನಮ್ಮ( ಮಹಿಳೆಯರನ್ನು) ಮೆಚ್ಚಿನ ಜಾಗ ಯಾವುದು ಅಂತ ಏನಾದ್ರು ಕೇಳಿದರೆ ಅದು ಅಡುಗೆ ಮನೆಯೇ…! ಬಾಯಿ ಮಾತಿಗೆ ದೇವರ ಕೋಣೆ, ಪಡಸಾಲೆ, ಜಗುಲಿ, ಹೊರಗಿನ ಚಿಟ್ಟೆ, ಹಿತ್ತಿಲು ಅಂತೆಲ್ಲ ಹೇಳಿದರೂ ಸುತ್ತಿ ಬಳಸಿ ಬಂದು ನಿಲ್ಲುವುದು ಅಡುಗೆ ಮನೆಯಲ್ಲೇ.……..ಮುಂದೆ ಓದಿ…..

ಮನೆಯಾಕೆಯ ಸುರಕ್ಷಾ ವಲಯವದು. ತನ್ನ ನಗುವಿಗೆ, ದುಃಖಕ್ಕೆ , ಅಳುವಿಗೆ ಸ್ಪಂದಿಸಲ್ಪಡುವ ಏಕೈಕ ಜಾಗವೆಂದರೆ ಅದು ಅಡುಗೆ ಮನೆ. ದಿನದ ಇಪ್ಪತ್ತನಾಲ್ಕು ಗಂಟೆಯ ಬಹು ಪಾಲು ಮೀಸಲು ಅಡುಗೆಮನೆಗೆ. ನಾನು ಇಲ್ಲಿ ಉಲ್ಲೇಖಿಸುತ್ತಿರುವುದು ನನ್ನಂತಹ ಸಾಮಾನ್ಯ ಮಹಿಳೆಯ ಬಗ್ಗೆ ಮಾತ್ರ. ಮನೆಯ ಹೊರಗೆ, ಒಳಗೆ ಸಮನಾಗಿ ದುಡಿಯುವ ಸೂಪರ್ ಮಹಿಳೆಯರು ಈ ವಲಯಕ್ಕೆ ಬರುವುದಿಲ್ಲ.

ಅಡುಗೆ ಮನೆಯೇ ಕೇಂದ್ರ ಬಿಂದುವಾದರೂ ಹಿಂದಿನಿಂದಲೂ ಬಹು ಕಡೆಗಣನೆಗೆ ಗುರಿಯಾದ ಶಾಪಗ್ರಸ್ತ ಕೋಣೆಯದು. ಹಳೆಯ ಮನೆಗಳ ಅಡುಗೆ ಕೋಣೆಗಳನ್ನು ನೋಡಿದ್ದರೆ ನಿಮಗೆ ಅಂದಾಜು ಆಗಬಹುದು. ಮನೆಯ‌ ಒಂದು ಮೂಲೆಯಲ್ಲಿ‌ ಇರುತ್ತಿದ್ದ ಆ ಕೋಣೆಯಲ್ಲಿ ಯಾವಾಗಲೂ ಗಾಳಿ ಬೆಳಕಿಗೆ ಕೊರತೆಯೇ. ಒಂದು ಪುಟ್ಟ ಕಿಟಕಿ. ಅದು ಹೆಚ್ಚಾಗಿ ಮರದ ಎಳೆಯುವ ಕಿಟಕಿ. ಮಳೆಗಾಲದಲ್ಲಿ ತೆಗೆಯಲೂ ಬಾರದು, ತೆಗೆದರೆ ಹಾಕಲಾಗದು. ಹಾವು ಚೇಳುಗಳು ಮುಕ್ತವಾಗಿ ಬಂದು ಮೂಲೆಯಲ್ಲಿ ಇಡುವ ಸೌದೆಗೆ ಬಂದು ಸೇರಿ ಕೊಂಡರೆ ಗೊತ್ತೂ ಆಗದು. ಬೆಳಗ್ಗೆ ಮನೆಯಾಕೆ ‌ಒಲೆಯಿಂದ ಬೂದಿ ತೆಗೆದು ಸಾರಿಸಿ ಬೆಂಕಿ ಮಾಡಲು ಸೌದೆಗೆ ಕೈ ಹಾಕುತ್ತಲೂ ಚೇಳು ಕುಟುಕಿದರೆ ಆ ದಿನಕ್ಕೆ ನರಕಯಾತನೆಯೇ. ಬಿಡಿ ಈಗ ಎಷ್ಟೋ‌ ಬದಲಾವಣೆಗಳಾಗಿವೆ.

ಆದರೂ ಆ ಕತ್ತಲೆಯ , ಬುಡ್ಡಿ ದೀಪದ ಕೋಣೆಯೊಳಗಿನ ಆಪ್ತತೆ, ನೈಜತೆ, ಮಡಿಕೆಯ ಸಪ್ಪಳ, ಶುದ್ಧ ತೆಂಗಿನೆಣ್ಣೆಯ ಘಮ್ಮನ್ನೆವ ಪರಿಮಳ, ಕುಚ್ಚಲಕ್ಕಿ ಒಲೆಯಲ್ಲಿ ಬೇಯುವಾಗಿನ ಕುದಿಯುವ ಗೌಜು……. ಎಲ್ಲಾ ಒಂದೊಂದಾಗಿ ಕಳಚಿದ ನೆನಪುಗಳು……

ಇಂದಿನ ಅಡುಗೆಮನೆ ಕೋಣೆಯಾಗಿ ಉಳಿದಿಲ್ಲ. ಮನೆಯ ಕೇಂದ್ರ ಜಾಗದಲ್ಲೇ ಸ್ಥಾಪನೆಯಾಗಿ ಬಿಟ್ಟಿದೆ. ಎಲ್ಲಾ ಕೈಗೆಟುವಂತಹ ಸೌಕರ್ಯಗಳು. ಹೊಗೆರಹಿತ ಅಡುಗೆ ವ್ಯವಸ್ಥೆ. ಸರಳ ಸುಲಭ ಕಾರ್ಯವಿಧಾನ… ಆಧುನಿಕ‌ ಕೊಡುಗೆಗಳು ಬದುಕಿಗೆ ದೊರೆತ ಉಡುಗೊರೆಯೆನ್ನಲೇ ಶಾಪವಾ..!?,  ಉತ್ತರ ಹುಡುಕುತ್ತಿರುವೆ……, ಹಂಚಿ ಕೊಳ್ಳುವುದು ಬಹಳವಿದೆ…..

ಬರಹ :
ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

2 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

5 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

5 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

9 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

9 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

12 hours ago