ಮನೆಯಲ್ಲಿ ನಮ್ಮ( ಮಹಿಳೆಯರನ್ನು) ಮೆಚ್ಚಿನ ಜಾಗ ಯಾವುದು ಅಂತ ಏನಾದ್ರು ಕೇಳಿದರೆ ಅದು ಅಡುಗೆ ಮನೆಯೇ…! ಬಾಯಿ ಮಾತಿಗೆ ದೇವರ ಕೋಣೆ, ಪಡಸಾಲೆ, ಜಗುಲಿ, ಹೊರಗಿನ ಚಿಟ್ಟೆ, ಹಿತ್ತಿಲು ಅಂತೆಲ್ಲ ಹೇಳಿದರೂ ಸುತ್ತಿ ಬಳಸಿ ಬಂದು ನಿಲ್ಲುವುದು ಅಡುಗೆ ಮನೆಯಲ್ಲೇ.……..ಮುಂದೆ ಓದಿ…..
ಮನೆಯಾಕೆಯ ಸುರಕ್ಷಾ ವಲಯವದು. ತನ್ನ ನಗುವಿಗೆ, ದುಃಖಕ್ಕೆ , ಅಳುವಿಗೆ ಸ್ಪಂದಿಸಲ್ಪಡುವ ಏಕೈಕ ಜಾಗವೆಂದರೆ ಅದು ಅಡುಗೆ ಮನೆ. ದಿನದ ಇಪ್ಪತ್ತನಾಲ್ಕು ಗಂಟೆಯ ಬಹು ಪಾಲು ಮೀಸಲು ಅಡುಗೆಮನೆಗೆ. ನಾನು ಇಲ್ಲಿ ಉಲ್ಲೇಖಿಸುತ್ತಿರುವುದು ನನ್ನಂತಹ ಸಾಮಾನ್ಯ ಮಹಿಳೆಯ ಬಗ್ಗೆ ಮಾತ್ರ. ಮನೆಯ ಹೊರಗೆ, ಒಳಗೆ ಸಮನಾಗಿ ದುಡಿಯುವ ಸೂಪರ್ ಮಹಿಳೆಯರು ಈ ವಲಯಕ್ಕೆ ಬರುವುದಿಲ್ಲ.
ಅಡುಗೆ ಮನೆಯೇ ಕೇಂದ್ರ ಬಿಂದುವಾದರೂ ಹಿಂದಿನಿಂದಲೂ ಬಹು ಕಡೆಗಣನೆಗೆ ಗುರಿಯಾದ ಶಾಪಗ್ರಸ್ತ ಕೋಣೆಯದು. ಹಳೆಯ ಮನೆಗಳ ಅಡುಗೆ ಕೋಣೆಗಳನ್ನು ನೋಡಿದ್ದರೆ ನಿಮಗೆ ಅಂದಾಜು ಆಗಬಹುದು. ಮನೆಯ ಒಂದು ಮೂಲೆಯಲ್ಲಿ ಇರುತ್ತಿದ್ದ ಆ ಕೋಣೆಯಲ್ಲಿ ಯಾವಾಗಲೂ ಗಾಳಿ ಬೆಳಕಿಗೆ ಕೊರತೆಯೇ. ಒಂದು ಪುಟ್ಟ ಕಿಟಕಿ. ಅದು ಹೆಚ್ಚಾಗಿ ಮರದ ಎಳೆಯುವ ಕಿಟಕಿ. ಮಳೆಗಾಲದಲ್ಲಿ ತೆಗೆಯಲೂ ಬಾರದು, ತೆಗೆದರೆ ಹಾಕಲಾಗದು. ಹಾವು ಚೇಳುಗಳು ಮುಕ್ತವಾಗಿ ಬಂದು ಮೂಲೆಯಲ್ಲಿ ಇಡುವ ಸೌದೆಗೆ ಬಂದು ಸೇರಿ ಕೊಂಡರೆ ಗೊತ್ತೂ ಆಗದು. ಬೆಳಗ್ಗೆ ಮನೆಯಾಕೆ ಒಲೆಯಿಂದ ಬೂದಿ ತೆಗೆದು ಸಾರಿಸಿ ಬೆಂಕಿ ಮಾಡಲು ಸೌದೆಗೆ ಕೈ ಹಾಕುತ್ತಲೂ ಚೇಳು ಕುಟುಕಿದರೆ ಆ ದಿನಕ್ಕೆ ನರಕಯಾತನೆಯೇ. ಬಿಡಿ ಈಗ ಎಷ್ಟೋ ಬದಲಾವಣೆಗಳಾಗಿವೆ.
ಆದರೂ ಆ ಕತ್ತಲೆಯ , ಬುಡ್ಡಿ ದೀಪದ ಕೋಣೆಯೊಳಗಿನ ಆಪ್ತತೆ, ನೈಜತೆ, ಮಡಿಕೆಯ ಸಪ್ಪಳ, ಶುದ್ಧ ತೆಂಗಿನೆಣ್ಣೆಯ ಘಮ್ಮನ್ನೆವ ಪರಿಮಳ, ಕುಚ್ಚಲಕ್ಕಿ ಒಲೆಯಲ್ಲಿ ಬೇಯುವಾಗಿನ ಕುದಿಯುವ ಗೌಜು……. ಎಲ್ಲಾ ಒಂದೊಂದಾಗಿ ಕಳಚಿದ ನೆನಪುಗಳು……
ಇಂದಿನ ಅಡುಗೆಮನೆ ಕೋಣೆಯಾಗಿ ಉಳಿದಿಲ್ಲ. ಮನೆಯ ಕೇಂದ್ರ ಜಾಗದಲ್ಲೇ ಸ್ಥಾಪನೆಯಾಗಿ ಬಿಟ್ಟಿದೆ. ಎಲ್ಲಾ ಕೈಗೆಟುವಂತಹ ಸೌಕರ್ಯಗಳು. ಹೊಗೆರಹಿತ ಅಡುಗೆ ವ್ಯವಸ್ಥೆ. ಸರಳ ಸುಲಭ ಕಾರ್ಯವಿಧಾನ… ಆಧುನಿಕ ಕೊಡುಗೆಗಳು ಬದುಕಿಗೆ ದೊರೆತ ಉಡುಗೊರೆಯೆನ್ನಲೇ ಶಾಪವಾ..!?, ಉತ್ತರ ಹುಡುಕುತ್ತಿರುವೆ……, ಹಂಚಿ ಕೊಳ್ಳುವುದು ಬಹಳವಿದೆ…..
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…