Advertisement
ಕಿಟಕಿ

ಪುಟ್ಟ ಕಿಂಡಿಯಿಂದ ದೊಡ್ಡ ಕಿಟಕಿಯತ್ತ

Share

ಮನೆಯಲ್ಲಿ ನಮ್ಮ( ಮಹಿಳೆಯರನ್ನು) ಮೆಚ್ಚಿನ ಜಾಗ ಯಾವುದು ಅಂತ ಏನಾದ್ರು ಕೇಳಿದರೆ ಅದು ಅಡುಗೆ ಮನೆಯೇ…! ಬಾಯಿ ಮಾತಿಗೆ ದೇವರ ಕೋಣೆ, ಪಡಸಾಲೆ, ಜಗುಲಿ, ಹೊರಗಿನ ಚಿಟ್ಟೆ, ಹಿತ್ತಿಲು ಅಂತೆಲ್ಲ ಹೇಳಿದರೂ ಸುತ್ತಿ ಬಳಸಿ ಬಂದು ನಿಲ್ಲುವುದು ಅಡುಗೆ ಮನೆಯಲ್ಲೇ.……..ಮುಂದೆ ಓದಿ…..

ಮನೆಯಾಕೆಯ ಸುರಕ್ಷಾ ವಲಯವದು. ತನ್ನ ನಗುವಿಗೆ, ದುಃಖಕ್ಕೆ , ಅಳುವಿಗೆ ಸ್ಪಂದಿಸಲ್ಪಡುವ ಏಕೈಕ ಜಾಗವೆಂದರೆ ಅದು ಅಡುಗೆ ಮನೆ. ದಿನದ ಇಪ್ಪತ್ತನಾಲ್ಕು ಗಂಟೆಯ ಬಹು ಪಾಲು ಮೀಸಲು ಅಡುಗೆಮನೆಗೆ. ನಾನು ಇಲ್ಲಿ ಉಲ್ಲೇಖಿಸುತ್ತಿರುವುದು ನನ್ನಂತಹ ಸಾಮಾನ್ಯ ಮಹಿಳೆಯ ಬಗ್ಗೆ ಮಾತ್ರ. ಮನೆಯ ಹೊರಗೆ, ಒಳಗೆ ಸಮನಾಗಿ ದುಡಿಯುವ ಸೂಪರ್ ಮಹಿಳೆಯರು ಈ ವಲಯಕ್ಕೆ ಬರುವುದಿಲ್ಲ.

ಅಡುಗೆ ಮನೆಯೇ ಕೇಂದ್ರ ಬಿಂದುವಾದರೂ ಹಿಂದಿನಿಂದಲೂ ಬಹು ಕಡೆಗಣನೆಗೆ ಗುರಿಯಾದ ಶಾಪಗ್ರಸ್ತ ಕೋಣೆಯದು. ಹಳೆಯ ಮನೆಗಳ ಅಡುಗೆ ಕೋಣೆಗಳನ್ನು ನೋಡಿದ್ದರೆ ನಿಮಗೆ ಅಂದಾಜು ಆಗಬಹುದು. ಮನೆಯ‌ ಒಂದು ಮೂಲೆಯಲ್ಲಿ‌ ಇರುತ್ತಿದ್ದ ಆ ಕೋಣೆಯಲ್ಲಿ ಯಾವಾಗಲೂ ಗಾಳಿ ಬೆಳಕಿಗೆ ಕೊರತೆಯೇ. ಒಂದು ಪುಟ್ಟ ಕಿಟಕಿ. ಅದು ಹೆಚ್ಚಾಗಿ ಮರದ ಎಳೆಯುವ ಕಿಟಕಿ. ಮಳೆಗಾಲದಲ್ಲಿ ತೆಗೆಯಲೂ ಬಾರದು, ತೆಗೆದರೆ ಹಾಕಲಾಗದು. ಹಾವು ಚೇಳುಗಳು ಮುಕ್ತವಾಗಿ ಬಂದು ಮೂಲೆಯಲ್ಲಿ ಇಡುವ ಸೌದೆಗೆ ಬಂದು ಸೇರಿ ಕೊಂಡರೆ ಗೊತ್ತೂ ಆಗದು. ಬೆಳಗ್ಗೆ ಮನೆಯಾಕೆ ‌ಒಲೆಯಿಂದ ಬೂದಿ ತೆಗೆದು ಸಾರಿಸಿ ಬೆಂಕಿ ಮಾಡಲು ಸೌದೆಗೆ ಕೈ ಹಾಕುತ್ತಲೂ ಚೇಳು ಕುಟುಕಿದರೆ ಆ ದಿನಕ್ಕೆ ನರಕಯಾತನೆಯೇ. ಬಿಡಿ ಈಗ ಎಷ್ಟೋ‌ ಬದಲಾವಣೆಗಳಾಗಿವೆ.

ಆದರೂ ಆ ಕತ್ತಲೆಯ , ಬುಡ್ಡಿ ದೀಪದ ಕೋಣೆಯೊಳಗಿನ ಆಪ್ತತೆ, ನೈಜತೆ, ಮಡಿಕೆಯ ಸಪ್ಪಳ, ಶುದ್ಧ ತೆಂಗಿನೆಣ್ಣೆಯ ಘಮ್ಮನ್ನೆವ ಪರಿಮಳ, ಕುಚ್ಚಲಕ್ಕಿ ಒಲೆಯಲ್ಲಿ ಬೇಯುವಾಗಿನ ಕುದಿಯುವ ಗೌಜು……. ಎಲ್ಲಾ ಒಂದೊಂದಾಗಿ ಕಳಚಿದ ನೆನಪುಗಳು……

ಇಂದಿನ ಅಡುಗೆಮನೆ ಕೋಣೆಯಾಗಿ ಉಳಿದಿಲ್ಲ. ಮನೆಯ ಕೇಂದ್ರ ಜಾಗದಲ್ಲೇ ಸ್ಥಾಪನೆಯಾಗಿ ಬಿಟ್ಟಿದೆ. ಎಲ್ಲಾ ಕೈಗೆಟುವಂತಹ ಸೌಕರ್ಯಗಳು. ಹೊಗೆರಹಿತ ಅಡುಗೆ ವ್ಯವಸ್ಥೆ. ಸರಳ ಸುಲಭ ಕಾರ್ಯವಿಧಾನ… ಆಧುನಿಕ‌ ಕೊಡುಗೆಗಳು ಬದುಕಿಗೆ ದೊರೆತ ಉಡುಗೊರೆಯೆನ್ನಲೇ ಶಾಪವಾ..!?,  ಉತ್ತರ ಹುಡುಕುತ್ತಿರುವೆ……, ಹಂಚಿ ಕೊಳ್ಳುವುದು ಬಹಳವಿದೆ…..

ಬರಹ :
ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

6 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

8 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

14 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

14 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

22 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

22 hours ago