Advertisement
ಕಿಟಕಿ

ಪುಟ್ಟ ಕಿಂಡಿಯಿಂದ ದೊಡ್ಡ ಕಿಟಕಿಯತ್ತ

Share

ಮನೆಯಲ್ಲಿ ನಮ್ಮ( ಮಹಿಳೆಯರನ್ನು) ಮೆಚ್ಚಿನ ಜಾಗ ಯಾವುದು ಅಂತ ಏನಾದ್ರು ಕೇಳಿದರೆ ಅದು ಅಡುಗೆ ಮನೆಯೇ…! ಬಾಯಿ ಮಾತಿಗೆ ದೇವರ ಕೋಣೆ, ಪಡಸಾಲೆ, ಜಗುಲಿ, ಹೊರಗಿನ ಚಿಟ್ಟೆ, ಹಿತ್ತಿಲು ಅಂತೆಲ್ಲ ಹೇಳಿದರೂ ಸುತ್ತಿ ಬಳಸಿ ಬಂದು ನಿಲ್ಲುವುದು ಅಡುಗೆ ಮನೆಯಲ್ಲೇ.……..ಮುಂದೆ ಓದಿ…..

ಮನೆಯಾಕೆಯ ಸುರಕ್ಷಾ ವಲಯವದು. ತನ್ನ ನಗುವಿಗೆ, ದುಃಖಕ್ಕೆ , ಅಳುವಿಗೆ ಸ್ಪಂದಿಸಲ್ಪಡುವ ಏಕೈಕ ಜಾಗವೆಂದರೆ ಅದು ಅಡುಗೆ ಮನೆ. ದಿನದ ಇಪ್ಪತ್ತನಾಲ್ಕು ಗಂಟೆಯ ಬಹು ಪಾಲು ಮೀಸಲು ಅಡುಗೆಮನೆಗೆ. ನಾನು ಇಲ್ಲಿ ಉಲ್ಲೇಖಿಸುತ್ತಿರುವುದು ನನ್ನಂತಹ ಸಾಮಾನ್ಯ ಮಹಿಳೆಯ ಬಗ್ಗೆ ಮಾತ್ರ. ಮನೆಯ ಹೊರಗೆ, ಒಳಗೆ ಸಮನಾಗಿ ದುಡಿಯುವ ಸೂಪರ್ ಮಹಿಳೆಯರು ಈ ವಲಯಕ್ಕೆ ಬರುವುದಿಲ್ಲ.

ಅಡುಗೆ ಮನೆಯೇ ಕೇಂದ್ರ ಬಿಂದುವಾದರೂ ಹಿಂದಿನಿಂದಲೂ ಬಹು ಕಡೆಗಣನೆಗೆ ಗುರಿಯಾದ ಶಾಪಗ್ರಸ್ತ ಕೋಣೆಯದು. ಹಳೆಯ ಮನೆಗಳ ಅಡುಗೆ ಕೋಣೆಗಳನ್ನು ನೋಡಿದ್ದರೆ ನಿಮಗೆ ಅಂದಾಜು ಆಗಬಹುದು. ಮನೆಯ‌ ಒಂದು ಮೂಲೆಯಲ್ಲಿ‌ ಇರುತ್ತಿದ್ದ ಆ ಕೋಣೆಯಲ್ಲಿ ಯಾವಾಗಲೂ ಗಾಳಿ ಬೆಳಕಿಗೆ ಕೊರತೆಯೇ. ಒಂದು ಪುಟ್ಟ ಕಿಟಕಿ. ಅದು ಹೆಚ್ಚಾಗಿ ಮರದ ಎಳೆಯುವ ಕಿಟಕಿ. ಮಳೆಗಾಲದಲ್ಲಿ ತೆಗೆಯಲೂ ಬಾರದು, ತೆಗೆದರೆ ಹಾಕಲಾಗದು. ಹಾವು ಚೇಳುಗಳು ಮುಕ್ತವಾಗಿ ಬಂದು ಮೂಲೆಯಲ್ಲಿ ಇಡುವ ಸೌದೆಗೆ ಬಂದು ಸೇರಿ ಕೊಂಡರೆ ಗೊತ್ತೂ ಆಗದು. ಬೆಳಗ್ಗೆ ಮನೆಯಾಕೆ ‌ಒಲೆಯಿಂದ ಬೂದಿ ತೆಗೆದು ಸಾರಿಸಿ ಬೆಂಕಿ ಮಾಡಲು ಸೌದೆಗೆ ಕೈ ಹಾಕುತ್ತಲೂ ಚೇಳು ಕುಟುಕಿದರೆ ಆ ದಿನಕ್ಕೆ ನರಕಯಾತನೆಯೇ. ಬಿಡಿ ಈಗ ಎಷ್ಟೋ‌ ಬದಲಾವಣೆಗಳಾಗಿವೆ.

ಆದರೂ ಆ ಕತ್ತಲೆಯ , ಬುಡ್ಡಿ ದೀಪದ ಕೋಣೆಯೊಳಗಿನ ಆಪ್ತತೆ, ನೈಜತೆ, ಮಡಿಕೆಯ ಸಪ್ಪಳ, ಶುದ್ಧ ತೆಂಗಿನೆಣ್ಣೆಯ ಘಮ್ಮನ್ನೆವ ಪರಿಮಳ, ಕುಚ್ಚಲಕ್ಕಿ ಒಲೆಯಲ್ಲಿ ಬೇಯುವಾಗಿನ ಕುದಿಯುವ ಗೌಜು……. ಎಲ್ಲಾ ಒಂದೊಂದಾಗಿ ಕಳಚಿದ ನೆನಪುಗಳು……

ಇಂದಿನ ಅಡುಗೆಮನೆ ಕೋಣೆಯಾಗಿ ಉಳಿದಿಲ್ಲ. ಮನೆಯ ಕೇಂದ್ರ ಜಾಗದಲ್ಲೇ ಸ್ಥಾಪನೆಯಾಗಿ ಬಿಟ್ಟಿದೆ. ಎಲ್ಲಾ ಕೈಗೆಟುವಂತಹ ಸೌಕರ್ಯಗಳು. ಹೊಗೆರಹಿತ ಅಡುಗೆ ವ್ಯವಸ್ಥೆ. ಸರಳ ಸುಲಭ ಕಾರ್ಯವಿಧಾನ… ಆಧುನಿಕ‌ ಕೊಡುಗೆಗಳು ಬದುಕಿಗೆ ದೊರೆತ ಉಡುಗೊರೆಯೆನ್ನಲೇ ಶಾಪವಾ..!?,  ಉತ್ತರ ಹುಡುಕುತ್ತಿರುವೆ……, ಹಂಚಿ ಕೊಳ್ಳುವುದು ಬಹಳವಿದೆ…..

ಬರಹ :
ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

5 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

7 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

14 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

16 hours ago

ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು

ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…

22 hours ago

2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?

2026ರಲ್ಲಿ ಎಲ್‌ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್‌ನಿನೊ" ಆಗುವ…

1 day ago