Advertisement
ಕಿಟಕಿ

ಪುಟ್ಟ ಕಿಂಡಿಯಿಂದ ದೊಡ್ಡ ಕಿಟಕಿಯತ್ತ

Share

ಮನೆಯಲ್ಲಿ ನಮ್ಮ( ಮಹಿಳೆಯರನ್ನು) ಮೆಚ್ಚಿನ ಜಾಗ ಯಾವುದು ಅಂತ ಏನಾದ್ರು ಕೇಳಿದರೆ ಅದು ಅಡುಗೆ ಮನೆಯೇ…! ಬಾಯಿ ಮಾತಿಗೆ ದೇವರ ಕೋಣೆ, ಪಡಸಾಲೆ, ಜಗುಲಿ, ಹೊರಗಿನ ಚಿಟ್ಟೆ, ಹಿತ್ತಿಲು ಅಂತೆಲ್ಲ ಹೇಳಿದರೂ ಸುತ್ತಿ ಬಳಸಿ ಬಂದು ನಿಲ್ಲುವುದು ಅಡುಗೆ ಮನೆಯಲ್ಲೇ.……..ಮುಂದೆ ಓದಿ…..

ಮನೆಯಾಕೆಯ ಸುರಕ್ಷಾ ವಲಯವದು. ತನ್ನ ನಗುವಿಗೆ, ದುಃಖಕ್ಕೆ , ಅಳುವಿಗೆ ಸ್ಪಂದಿಸಲ್ಪಡುವ ಏಕೈಕ ಜಾಗವೆಂದರೆ ಅದು ಅಡುಗೆ ಮನೆ. ದಿನದ ಇಪ್ಪತ್ತನಾಲ್ಕು ಗಂಟೆಯ ಬಹು ಪಾಲು ಮೀಸಲು ಅಡುಗೆಮನೆಗೆ. ನಾನು ಇಲ್ಲಿ ಉಲ್ಲೇಖಿಸುತ್ತಿರುವುದು ನನ್ನಂತಹ ಸಾಮಾನ್ಯ ಮಹಿಳೆಯ ಬಗ್ಗೆ ಮಾತ್ರ. ಮನೆಯ ಹೊರಗೆ, ಒಳಗೆ ಸಮನಾಗಿ ದುಡಿಯುವ ಸೂಪರ್ ಮಹಿಳೆಯರು ಈ ವಲಯಕ್ಕೆ ಬರುವುದಿಲ್ಲ.

ಅಡುಗೆ ಮನೆಯೇ ಕೇಂದ್ರ ಬಿಂದುವಾದರೂ ಹಿಂದಿನಿಂದಲೂ ಬಹು ಕಡೆಗಣನೆಗೆ ಗುರಿಯಾದ ಶಾಪಗ್ರಸ್ತ ಕೋಣೆಯದು. ಹಳೆಯ ಮನೆಗಳ ಅಡುಗೆ ಕೋಣೆಗಳನ್ನು ನೋಡಿದ್ದರೆ ನಿಮಗೆ ಅಂದಾಜು ಆಗಬಹುದು. ಮನೆಯ‌ ಒಂದು ಮೂಲೆಯಲ್ಲಿ‌ ಇರುತ್ತಿದ್ದ ಆ ಕೋಣೆಯಲ್ಲಿ ಯಾವಾಗಲೂ ಗಾಳಿ ಬೆಳಕಿಗೆ ಕೊರತೆಯೇ. ಒಂದು ಪುಟ್ಟ ಕಿಟಕಿ. ಅದು ಹೆಚ್ಚಾಗಿ ಮರದ ಎಳೆಯುವ ಕಿಟಕಿ. ಮಳೆಗಾಲದಲ್ಲಿ ತೆಗೆಯಲೂ ಬಾರದು, ತೆಗೆದರೆ ಹಾಕಲಾಗದು. ಹಾವು ಚೇಳುಗಳು ಮುಕ್ತವಾಗಿ ಬಂದು ಮೂಲೆಯಲ್ಲಿ ಇಡುವ ಸೌದೆಗೆ ಬಂದು ಸೇರಿ ಕೊಂಡರೆ ಗೊತ್ತೂ ಆಗದು. ಬೆಳಗ್ಗೆ ಮನೆಯಾಕೆ ‌ಒಲೆಯಿಂದ ಬೂದಿ ತೆಗೆದು ಸಾರಿಸಿ ಬೆಂಕಿ ಮಾಡಲು ಸೌದೆಗೆ ಕೈ ಹಾಕುತ್ತಲೂ ಚೇಳು ಕುಟುಕಿದರೆ ಆ ದಿನಕ್ಕೆ ನರಕಯಾತನೆಯೇ. ಬಿಡಿ ಈಗ ಎಷ್ಟೋ‌ ಬದಲಾವಣೆಗಳಾಗಿವೆ.

ಆದರೂ ಆ ಕತ್ತಲೆಯ , ಬುಡ್ಡಿ ದೀಪದ ಕೋಣೆಯೊಳಗಿನ ಆಪ್ತತೆ, ನೈಜತೆ, ಮಡಿಕೆಯ ಸಪ್ಪಳ, ಶುದ್ಧ ತೆಂಗಿನೆಣ್ಣೆಯ ಘಮ್ಮನ್ನೆವ ಪರಿಮಳ, ಕುಚ್ಚಲಕ್ಕಿ ಒಲೆಯಲ್ಲಿ ಬೇಯುವಾಗಿನ ಕುದಿಯುವ ಗೌಜು……. ಎಲ್ಲಾ ಒಂದೊಂದಾಗಿ ಕಳಚಿದ ನೆನಪುಗಳು……

ಇಂದಿನ ಅಡುಗೆಮನೆ ಕೋಣೆಯಾಗಿ ಉಳಿದಿಲ್ಲ. ಮನೆಯ ಕೇಂದ್ರ ಜಾಗದಲ್ಲೇ ಸ್ಥಾಪನೆಯಾಗಿ ಬಿಟ್ಟಿದೆ. ಎಲ್ಲಾ ಕೈಗೆಟುವಂತಹ ಸೌಕರ್ಯಗಳು. ಹೊಗೆರಹಿತ ಅಡುಗೆ ವ್ಯವಸ್ಥೆ. ಸರಳ ಸುಲಭ ಕಾರ್ಯವಿಧಾನ… ಆಧುನಿಕ‌ ಕೊಡುಗೆಗಳು ಬದುಕಿಗೆ ದೊರೆತ ಉಡುಗೊರೆಯೆನ್ನಲೇ ಶಾಪವಾ..!?,  ಉತ್ತರ ಹುಡುಕುತ್ತಿರುವೆ……, ಹಂಚಿ ಕೊಳ್ಳುವುದು ಬಹಳವಿದೆ…..

ಬರಹ :
ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago