Advertisement
ಕಿಟಕಿ

ಪುಟ್ಟ ಕಿಂಡಿಯಿಂದ ದೊಡ್ಡ ಕಿಟಕಿಯತ್ತ

Share

ಮನೆಯಲ್ಲಿ ನಮ್ಮ( ಮಹಿಳೆಯರನ್ನು) ಮೆಚ್ಚಿನ ಜಾಗ ಯಾವುದು ಅಂತ ಏನಾದ್ರು ಕೇಳಿದರೆ ಅದು ಅಡುಗೆ ಮನೆಯೇ…! ಬಾಯಿ ಮಾತಿಗೆ ದೇವರ ಕೋಣೆ, ಪಡಸಾಲೆ, ಜಗುಲಿ, ಹೊರಗಿನ ಚಿಟ್ಟೆ, ಹಿತ್ತಿಲು ಅಂತೆಲ್ಲ ಹೇಳಿದರೂ ಸುತ್ತಿ ಬಳಸಿ ಬಂದು ನಿಲ್ಲುವುದು ಅಡುಗೆ ಮನೆಯಲ್ಲೇ.……..ಮುಂದೆ ಓದಿ…..

ಮನೆಯಾಕೆಯ ಸುರಕ್ಷಾ ವಲಯವದು. ತನ್ನ ನಗುವಿಗೆ, ದುಃಖಕ್ಕೆ , ಅಳುವಿಗೆ ಸ್ಪಂದಿಸಲ್ಪಡುವ ಏಕೈಕ ಜಾಗವೆಂದರೆ ಅದು ಅಡುಗೆ ಮನೆ. ದಿನದ ಇಪ್ಪತ್ತನಾಲ್ಕು ಗಂಟೆಯ ಬಹು ಪಾಲು ಮೀಸಲು ಅಡುಗೆಮನೆಗೆ. ನಾನು ಇಲ್ಲಿ ಉಲ್ಲೇಖಿಸುತ್ತಿರುವುದು ನನ್ನಂತಹ ಸಾಮಾನ್ಯ ಮಹಿಳೆಯ ಬಗ್ಗೆ ಮಾತ್ರ. ಮನೆಯ ಹೊರಗೆ, ಒಳಗೆ ಸಮನಾಗಿ ದುಡಿಯುವ ಸೂಪರ್ ಮಹಿಳೆಯರು ಈ ವಲಯಕ್ಕೆ ಬರುವುದಿಲ್ಲ.

ಅಡುಗೆ ಮನೆಯೇ ಕೇಂದ್ರ ಬಿಂದುವಾದರೂ ಹಿಂದಿನಿಂದಲೂ ಬಹು ಕಡೆಗಣನೆಗೆ ಗುರಿಯಾದ ಶಾಪಗ್ರಸ್ತ ಕೋಣೆಯದು. ಹಳೆಯ ಮನೆಗಳ ಅಡುಗೆ ಕೋಣೆಗಳನ್ನು ನೋಡಿದ್ದರೆ ನಿಮಗೆ ಅಂದಾಜು ಆಗಬಹುದು. ಮನೆಯ‌ ಒಂದು ಮೂಲೆಯಲ್ಲಿ‌ ಇರುತ್ತಿದ್ದ ಆ ಕೋಣೆಯಲ್ಲಿ ಯಾವಾಗಲೂ ಗಾಳಿ ಬೆಳಕಿಗೆ ಕೊರತೆಯೇ. ಒಂದು ಪುಟ್ಟ ಕಿಟಕಿ. ಅದು ಹೆಚ್ಚಾಗಿ ಮರದ ಎಳೆಯುವ ಕಿಟಕಿ. ಮಳೆಗಾಲದಲ್ಲಿ ತೆಗೆಯಲೂ ಬಾರದು, ತೆಗೆದರೆ ಹಾಕಲಾಗದು. ಹಾವು ಚೇಳುಗಳು ಮುಕ್ತವಾಗಿ ಬಂದು ಮೂಲೆಯಲ್ಲಿ ಇಡುವ ಸೌದೆಗೆ ಬಂದು ಸೇರಿ ಕೊಂಡರೆ ಗೊತ್ತೂ ಆಗದು. ಬೆಳಗ್ಗೆ ಮನೆಯಾಕೆ ‌ಒಲೆಯಿಂದ ಬೂದಿ ತೆಗೆದು ಸಾರಿಸಿ ಬೆಂಕಿ ಮಾಡಲು ಸೌದೆಗೆ ಕೈ ಹಾಕುತ್ತಲೂ ಚೇಳು ಕುಟುಕಿದರೆ ಆ ದಿನಕ್ಕೆ ನರಕಯಾತನೆಯೇ. ಬಿಡಿ ಈಗ ಎಷ್ಟೋ‌ ಬದಲಾವಣೆಗಳಾಗಿವೆ.

ಆದರೂ ಆ ಕತ್ತಲೆಯ , ಬುಡ್ಡಿ ದೀಪದ ಕೋಣೆಯೊಳಗಿನ ಆಪ್ತತೆ, ನೈಜತೆ, ಮಡಿಕೆಯ ಸಪ್ಪಳ, ಶುದ್ಧ ತೆಂಗಿನೆಣ್ಣೆಯ ಘಮ್ಮನ್ನೆವ ಪರಿಮಳ, ಕುಚ್ಚಲಕ್ಕಿ ಒಲೆಯಲ್ಲಿ ಬೇಯುವಾಗಿನ ಕುದಿಯುವ ಗೌಜು……. ಎಲ್ಲಾ ಒಂದೊಂದಾಗಿ ಕಳಚಿದ ನೆನಪುಗಳು……

ಇಂದಿನ ಅಡುಗೆಮನೆ ಕೋಣೆಯಾಗಿ ಉಳಿದಿಲ್ಲ. ಮನೆಯ ಕೇಂದ್ರ ಜಾಗದಲ್ಲೇ ಸ್ಥಾಪನೆಯಾಗಿ ಬಿಟ್ಟಿದೆ. ಎಲ್ಲಾ ಕೈಗೆಟುವಂತಹ ಸೌಕರ್ಯಗಳು. ಹೊಗೆರಹಿತ ಅಡುಗೆ ವ್ಯವಸ್ಥೆ. ಸರಳ ಸುಲಭ ಕಾರ್ಯವಿಧಾನ… ಆಧುನಿಕ‌ ಕೊಡುಗೆಗಳು ಬದುಕಿಗೆ ದೊರೆತ ಉಡುಗೊರೆಯೆನ್ನಲೇ ಶಾಪವಾ..!?,  ಉತ್ತರ ಹುಡುಕುತ್ತಿರುವೆ……, ಹಂಚಿ ಕೊಳ್ಳುವುದು ಬಹಳವಿದೆ…..

ಬರಹ :
ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 hours ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

5 hours ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

6 hours ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

6 hours ago

ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು

ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…

6 hours ago

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

14 hours ago