ಕೆಲಸ ಯಾವುದಾದರೇನು, ಛಲವೊಂದಿದ್ದರೆ…. | ಜೀವನೋಪಾಯಕ್ಕೆ ಚಾಲಕ ವೃತ್ತಿ ಆಯ್ಕೆ ಮಾಡಿದ ಮಹಿಳೆ | ಕಸ ವಿಲೇವಾರಿ ವಾಹನದಲ್ಲಿ ಮಹಿಳಾ ಚಾಲಕಿ |

September 20, 2023
8:42 PM
ಕಸ ವಿಲೇವಾರಿ ವಾಹನದ ಚಾಲಕಿಯಾಗಿ ಕೀರ್ತಿ ದೇವರಗದ್ದೆ ಕೆಲಸ ಮಾಡುತ್ತಿದ್ದಾರೆ. ತಮ್ಮ ಕೆಲಸದ ಮೂಲಕ ಗಮನ ಸೆಳೆದಿರುವುದು ಮಾತ್ರವಲ್ಲ ಉತ್ತಮ ಸೇವೆಯ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.

ಕೆಲಸ ಯಾವುದಾದರೇನು ? ಛಲವೊಂದಿದ್ದರೆ ಯಾವುದೂ ಸಾಧಿಸಬಹುದು ಎನ್ನುವ ಮಾತು ಆಗಾಗ ಕಣ್ಣೆದುರು ಕಾಣುತ್ತದೆ. ಸಾಧನೆಗಳೇ ಯಶಸ್ಸಿನ ಹಿಂದಿರುವ ದಾರಿಗಳು. ಈಗ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಸ ವಿಲೇವಾರಿ ಮಾಡುವ ವಾಹನದಲ್ಲಿ ಮಹಿಳಾ ಚಾಲಕಿಯೊಬ್ಬರು ಅದೇ ಸಾಲಿನಲ್ಲಿದ್ದಾರೆ.

ಸುಬ್ರಹ್ಮಣ್ಯ ಓಂ ಶ್ರೀ ಸಂಜೀವಿನಿ ಗ್ರಾಮಪಂಚಾಯತ್ ಮಟ್ಟದ ಒಕ್ಕೂಟ ಸುಬ್ರಹ್ಮಣ್ಯ ಇದರ ಸುಬ್ರಹ್ಮಣ್ಯ ಗ್ರಾಮದಲ್ಲಿ ಕಸವೇವಾರಿ ಕೆಲಸ ಕಾರ್ಯ ನಡೆಯುತ್ತಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಪೇಟೆ, ಅಸುಪಾಸಿನ ಮನೆಗಳಲ್ಲಿ, ಒಟ್ಟು ಸುಬ್ರಹ್ಮಣ್ಯ ಗ್ರಾಮದಲ್ಲಿ ಸಂಗ್ರಹವಾಗುವ ಎಲ್ಲಾ ರೀತಿಯ ತ್ಯಾಜ ವಸ್ತುಗಳನ್ನು ಸಂಗ್ರಹ ಮಾಡಿ ಕಸ ವಿಲೇವಾರಿ ವಾಹನದ ಮೂಲಕ ಇಂಜಾಡಿಯಲ್ಲಿರುವ ಘಟಕಕ್ಕೆ ಸಾಗಿಸಲಾಗುತ್ತದೆ. ಈ ವಾಹನದ ಚಾಲಕಿಯಾಗಿ ಕೀರ್ತಿ ದೇವರಗದ್ದೆ ಕೆಲಸ ಮಾಡುತ್ತಿದ್ದಾರೆ.

ತುಂಬಾ ಸಂತೋಷದಿಂದಲೇ ಈ ವೃತ್ತಿಯನ್ನು ಮಾಡುತ್ತಿರುವ ಕೀರ್ತಿಯವರು, ಸುಮಾರು ಒಂದುವರೆ ವರ್ಷದಿಂದ ಚಾಲಕಿಯಾಗಿ ಎಲ್ಲ ತರಬೇತಿಯನ್ನು ಪಡೆದಿರುತ್ತೇನೆ. ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡಿದ್ದೇನೆ ಸದ್ಯ ಸಂಸಾರದೊಂದಿಗೆ ದೇವರ ಗದ್ದೆಯಲ್ಲಿ ವಾಸಿಸುತ್ತಿದ್ದೇನೆ. ಸುಬ್ರಹ್ಮಣ್ಯ ಓಂ ಶ್ರೀ ಸಂಜೀವಿನಿ ಗ್ರಾಮಪಂಚಾಯತ್ ಮಟ್ಟದ ಒಕ್ಕೂಟ ಕಸವಿಲ್ಲವೇರಿ ವಾಹನದ ಚಾಲಾಕಿಯಾಗಿ ದುಡಿಯುತ್ತಿದ್ದೇನೆ ಎಂದು ನಗುಮುಖದಿಂದ ಉತ್ತರಿಸುತ್ತಾರೆ. ಓರ್ವ ಮಹಿಳೆ ಚಾಲಕಿಯಾಗಿ ಉದ್ಯೋಗ ಮಾಡುತ್ತಿರುವುದು ಸುಬ್ರಹ್ಮಣ್ಯ ಗ್ರಾಮದಲ್ಲಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ
March 31, 2026
6:47 AM
by: ಮಿರರ್‌ ಡೆಸ್ಕ್
“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ
March 31, 2026
6:31 AM
by: ದ ರೂರಲ್ ಮಿರರ್.ಕಾಂ
‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ
March 31, 2026
6:09 AM
by: ದ ರೂರಲ್ ಮಿರರ್.ಕಾಂ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror