Advertisement
Rural Mirror - ಅತಿಥಿ

ಕೆಲಸ ಯಾವುದಾದರೇನು, ಛಲವೊಂದಿದ್ದರೆ…. | ಜೀವನೋಪಾಯಕ್ಕೆ ಚಾಲಕ ವೃತ್ತಿ ಆಯ್ಕೆ ಮಾಡಿದ ಮಹಿಳೆ | ಕಸ ವಿಲೇವಾರಿ ವಾಹನದಲ್ಲಿ ಮಹಿಳಾ ಚಾಲಕಿ |

Share

ಕೆಲಸ ಯಾವುದಾದರೇನು ? ಛಲವೊಂದಿದ್ದರೆ ಯಾವುದೂ ಸಾಧಿಸಬಹುದು ಎನ್ನುವ ಮಾತು ಆಗಾಗ ಕಣ್ಣೆದುರು ಕಾಣುತ್ತದೆ. ಸಾಧನೆಗಳೇ ಯಶಸ್ಸಿನ ಹಿಂದಿರುವ ದಾರಿಗಳು. ಈಗ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಸ ವಿಲೇವಾರಿ ಮಾಡುವ ವಾಹನದಲ್ಲಿ ಮಹಿಳಾ ಚಾಲಕಿಯೊಬ್ಬರು ಅದೇ ಸಾಲಿನಲ್ಲಿದ್ದಾರೆ.

ಸುಬ್ರಹ್ಮಣ್ಯ ಓಂ ಶ್ರೀ ಸಂಜೀವಿನಿ ಗ್ರಾಮಪಂಚಾಯತ್ ಮಟ್ಟದ ಒಕ್ಕೂಟ ಸುಬ್ರಹ್ಮಣ್ಯ ಇದರ ಸುಬ್ರಹ್ಮಣ್ಯ ಗ್ರಾಮದಲ್ಲಿ ಕಸವೇವಾರಿ ಕೆಲಸ ಕಾರ್ಯ ನಡೆಯುತ್ತಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಪೇಟೆ, ಅಸುಪಾಸಿನ ಮನೆಗಳಲ್ಲಿ, ಒಟ್ಟು ಸುಬ್ರಹ್ಮಣ್ಯ ಗ್ರಾಮದಲ್ಲಿ ಸಂಗ್ರಹವಾಗುವ ಎಲ್ಲಾ ರೀತಿಯ ತ್ಯಾಜ ವಸ್ತುಗಳನ್ನು ಸಂಗ್ರಹ ಮಾಡಿ ಕಸ ವಿಲೇವಾರಿ ವಾಹನದ ಮೂಲಕ ಇಂಜಾಡಿಯಲ್ಲಿರುವ ಘಟಕಕ್ಕೆ ಸಾಗಿಸಲಾಗುತ್ತದೆ. ಈ ವಾಹನದ ಚಾಲಕಿಯಾಗಿ ಕೀರ್ತಿ ದೇವರಗದ್ದೆ ಕೆಲಸ ಮಾಡುತ್ತಿದ್ದಾರೆ.

ತುಂಬಾ ಸಂತೋಷದಿಂದಲೇ ಈ ವೃತ್ತಿಯನ್ನು ಮಾಡುತ್ತಿರುವ ಕೀರ್ತಿಯವರು, ಸುಮಾರು ಒಂದುವರೆ ವರ್ಷದಿಂದ ಚಾಲಕಿಯಾಗಿ ಎಲ್ಲ ತರಬೇತಿಯನ್ನು ಪಡೆದಿರುತ್ತೇನೆ. ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡಿದ್ದೇನೆ ಸದ್ಯ ಸಂಸಾರದೊಂದಿಗೆ ದೇವರ ಗದ್ದೆಯಲ್ಲಿ ವಾಸಿಸುತ್ತಿದ್ದೇನೆ. ಸುಬ್ರಹ್ಮಣ್ಯ ಓಂ ಶ್ರೀ ಸಂಜೀವಿನಿ ಗ್ರಾಮಪಂಚಾಯತ್ ಮಟ್ಟದ ಒಕ್ಕೂಟ ಕಸವಿಲ್ಲವೇರಿ ವಾಹನದ ಚಾಲಾಕಿಯಾಗಿ ದುಡಿಯುತ್ತಿದ್ದೇನೆ ಎಂದು ನಗುಮುಖದಿಂದ ಉತ್ತರಿಸುತ್ತಾರೆ. ಓರ್ವ ಮಹಿಳೆ ಚಾಲಕಿಯಾಗಿ ಉದ್ಯೋಗ ಮಾಡುತ್ತಿರುವುದು ಸುಬ್ರಹ್ಮಣ್ಯ ಗ್ರಾಮದಲ್ಲಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…

ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…

3 hours ago

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…

10 hours ago

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…

10 hours ago

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ ಎಂದು…

18 hours ago

ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?

ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…

1 day ago

ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ

ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…

1 day ago