ಕೆಲಸ ಯಾವುದಾದರೇನು ? ಛಲವೊಂದಿದ್ದರೆ ಯಾವುದೂ ಸಾಧಿಸಬಹುದು ಎನ್ನುವ ಮಾತು ಆಗಾಗ ಕಣ್ಣೆದುರು ಕಾಣುತ್ತದೆ. ಸಾಧನೆಗಳೇ ಯಶಸ್ಸಿನ ಹಿಂದಿರುವ ದಾರಿಗಳು. ಈಗ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಸ ವಿಲೇವಾರಿ ಮಾಡುವ ವಾಹನದಲ್ಲಿ ಮಹಿಳಾ ಚಾಲಕಿಯೊಬ್ಬರು ಅದೇ ಸಾಲಿನಲ್ಲಿದ್ದಾರೆ.
ಸುಬ್ರಹ್ಮಣ್ಯ ಓಂ ಶ್ರೀ ಸಂಜೀವಿನಿ ಗ್ರಾಮಪಂಚಾಯತ್ ಮಟ್ಟದ ಒಕ್ಕೂಟ ಸುಬ್ರಹ್ಮಣ್ಯ ಇದರ ಸುಬ್ರಹ್ಮಣ್ಯ ಗ್ರಾಮದಲ್ಲಿ ಕಸವೇವಾರಿ ಕೆಲಸ ಕಾರ್ಯ ನಡೆಯುತ್ತಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಪೇಟೆ, ಅಸುಪಾಸಿನ ಮನೆಗಳಲ್ಲಿ, ಒಟ್ಟು ಸುಬ್ರಹ್ಮಣ್ಯ ಗ್ರಾಮದಲ್ಲಿ ಸಂಗ್ರಹವಾಗುವ ಎಲ್ಲಾ ರೀತಿಯ ತ್ಯಾಜ ವಸ್ತುಗಳನ್ನು ಸಂಗ್ರಹ ಮಾಡಿ ಕಸ ವಿಲೇವಾರಿ ವಾಹನದ ಮೂಲಕ ಇಂಜಾಡಿಯಲ್ಲಿರುವ ಘಟಕಕ್ಕೆ ಸಾಗಿಸಲಾಗುತ್ತದೆ. ಈ ವಾಹನದ ಚಾಲಕಿಯಾಗಿ ಕೀರ್ತಿ ದೇವರಗದ್ದೆ ಕೆಲಸ ಮಾಡುತ್ತಿದ್ದಾರೆ.
ತುಂಬಾ ಸಂತೋಷದಿಂದಲೇ ಈ ವೃತ್ತಿಯನ್ನು ಮಾಡುತ್ತಿರುವ ಕೀರ್ತಿಯವರು, ಸುಮಾರು ಒಂದುವರೆ ವರ್ಷದಿಂದ ಚಾಲಕಿಯಾಗಿ ಎಲ್ಲ ತರಬೇತಿಯನ್ನು ಪಡೆದಿರುತ್ತೇನೆ. ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡಿದ್ದೇನೆ ಸದ್ಯ ಸಂಸಾರದೊಂದಿಗೆ ದೇವರ ಗದ್ದೆಯಲ್ಲಿ ವಾಸಿಸುತ್ತಿದ್ದೇನೆ. ಸುಬ್ರಹ್ಮಣ್ಯ ಓಂ ಶ್ರೀ ಸಂಜೀವಿನಿ ಗ್ರಾಮಪಂಚಾಯತ್ ಮಟ್ಟದ ಒಕ್ಕೂಟ ಕಸವಿಲ್ಲವೇರಿ ವಾಹನದ ಚಾಲಾಕಿಯಾಗಿ ದುಡಿಯುತ್ತಿದ್ದೇನೆ ಎಂದು ನಗುಮುಖದಿಂದ ಉತ್ತರಿಸುತ್ತಾರೆ. ಓರ್ವ ಮಹಿಳೆ ಚಾಲಕಿಯಾಗಿ ಉದ್ಯೋಗ ಮಾಡುತ್ತಿರುವುದು ಸುಬ್ರಹ್ಮಣ್ಯ ಗ್ರಾಮದಲ್ಲಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…