ಕೆಲಸ ಯಾವುದಾದರೇನು ? ಛಲವೊಂದಿದ್ದರೆ ಯಾವುದೂ ಸಾಧಿಸಬಹುದು ಎನ್ನುವ ಮಾತು ಆಗಾಗ ಕಣ್ಣೆದುರು ಕಾಣುತ್ತದೆ. ಸಾಧನೆಗಳೇ ಯಶಸ್ಸಿನ ಹಿಂದಿರುವ ದಾರಿಗಳು. ಈಗ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಸ ವಿಲೇವಾರಿ ಮಾಡುವ ವಾಹನದಲ್ಲಿ ಮಹಿಳಾ ಚಾಲಕಿಯೊಬ್ಬರು ಅದೇ ಸಾಲಿನಲ್ಲಿದ್ದಾರೆ.
ಸುಬ್ರಹ್ಮಣ್ಯ ಓಂ ಶ್ರೀ ಸಂಜೀವಿನಿ ಗ್ರಾಮಪಂಚಾಯತ್ ಮಟ್ಟದ ಒಕ್ಕೂಟ ಸುಬ್ರಹ್ಮಣ್ಯ ಇದರ ಸುಬ್ರಹ್ಮಣ್ಯ ಗ್ರಾಮದಲ್ಲಿ ಕಸವೇವಾರಿ ಕೆಲಸ ಕಾರ್ಯ ನಡೆಯುತ್ತಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಪೇಟೆ, ಅಸುಪಾಸಿನ ಮನೆಗಳಲ್ಲಿ, ಒಟ್ಟು ಸುಬ್ರಹ್ಮಣ್ಯ ಗ್ರಾಮದಲ್ಲಿ ಸಂಗ್ರಹವಾಗುವ ಎಲ್ಲಾ ರೀತಿಯ ತ್ಯಾಜ ವಸ್ತುಗಳನ್ನು ಸಂಗ್ರಹ ಮಾಡಿ ಕಸ ವಿಲೇವಾರಿ ವಾಹನದ ಮೂಲಕ ಇಂಜಾಡಿಯಲ್ಲಿರುವ ಘಟಕಕ್ಕೆ ಸಾಗಿಸಲಾಗುತ್ತದೆ. ಈ ವಾಹನದ ಚಾಲಕಿಯಾಗಿ ಕೀರ್ತಿ ದೇವರಗದ್ದೆ ಕೆಲಸ ಮಾಡುತ್ತಿದ್ದಾರೆ.
ತುಂಬಾ ಸಂತೋಷದಿಂದಲೇ ಈ ವೃತ್ತಿಯನ್ನು ಮಾಡುತ್ತಿರುವ ಕೀರ್ತಿಯವರು, ಸುಮಾರು ಒಂದುವರೆ ವರ್ಷದಿಂದ ಚಾಲಕಿಯಾಗಿ ಎಲ್ಲ ತರಬೇತಿಯನ್ನು ಪಡೆದಿರುತ್ತೇನೆ. ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡಿದ್ದೇನೆ ಸದ್ಯ ಸಂಸಾರದೊಂದಿಗೆ ದೇವರ ಗದ್ದೆಯಲ್ಲಿ ವಾಸಿಸುತ್ತಿದ್ದೇನೆ. ಸುಬ್ರಹ್ಮಣ್ಯ ಓಂ ಶ್ರೀ ಸಂಜೀವಿನಿ ಗ್ರಾಮಪಂಚಾಯತ್ ಮಟ್ಟದ ಒಕ್ಕೂಟ ಕಸವಿಲ್ಲವೇರಿ ವಾಹನದ ಚಾಲಾಕಿಯಾಗಿ ದುಡಿಯುತ್ತಿದ್ದೇನೆ ಎಂದು ನಗುಮುಖದಿಂದ ಉತ್ತರಿಸುತ್ತಾರೆ. ಓರ್ವ ಮಹಿಳೆ ಚಾಲಕಿಯಾಗಿ ಉದ್ಯೋಗ ಮಾಡುತ್ತಿರುವುದು ಸುಬ್ರಹ್ಮಣ್ಯ ಗ್ರಾಮದಲ್ಲಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಕಲಾವಿದ ಉಮೇಶ್ ಶೆಟ್ಟಿ ಉಬರಡ್ಕ…
ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…
ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.
ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…
ವಿವೇಕಾನಂದ ಎಚ್ ಕೆ ಅವರ ಬರಹ
ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್ ಆಳ್ವ ಅವರು ಬರೆದಿದ್ದಾರೆ.