ಕೆಲಸ ಯಾವುದಾದರೇನು ? ಛಲವೊಂದಿದ್ದರೆ ಯಾವುದೂ ಸಾಧಿಸಬಹುದು ಎನ್ನುವ ಮಾತು ಆಗಾಗ ಕಣ್ಣೆದುರು ಕಾಣುತ್ತದೆ. ಸಾಧನೆಗಳೇ ಯಶಸ್ಸಿನ ಹಿಂದಿರುವ ದಾರಿಗಳು. ಈಗ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಸ ವಿಲೇವಾರಿ ಮಾಡುವ ವಾಹನದಲ್ಲಿ ಮಹಿಳಾ ಚಾಲಕಿಯೊಬ್ಬರು ಅದೇ ಸಾಲಿನಲ್ಲಿದ್ದಾರೆ.
ಸುಬ್ರಹ್ಮಣ್ಯ ಓಂ ಶ್ರೀ ಸಂಜೀವಿನಿ ಗ್ರಾಮಪಂಚಾಯತ್ ಮಟ್ಟದ ಒಕ್ಕೂಟ ಸುಬ್ರಹ್ಮಣ್ಯ ಇದರ ಸುಬ್ರಹ್ಮಣ್ಯ ಗ್ರಾಮದಲ್ಲಿ ಕಸವೇವಾರಿ ಕೆಲಸ ಕಾರ್ಯ ನಡೆಯುತ್ತಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಪೇಟೆ, ಅಸುಪಾಸಿನ ಮನೆಗಳಲ್ಲಿ, ಒಟ್ಟು ಸುಬ್ರಹ್ಮಣ್ಯ ಗ್ರಾಮದಲ್ಲಿ ಸಂಗ್ರಹವಾಗುವ ಎಲ್ಲಾ ರೀತಿಯ ತ್ಯಾಜ ವಸ್ತುಗಳನ್ನು ಸಂಗ್ರಹ ಮಾಡಿ ಕಸ ವಿಲೇವಾರಿ ವಾಹನದ ಮೂಲಕ ಇಂಜಾಡಿಯಲ್ಲಿರುವ ಘಟಕಕ್ಕೆ ಸಾಗಿಸಲಾಗುತ್ತದೆ. ಈ ವಾಹನದ ಚಾಲಕಿಯಾಗಿ ಕೀರ್ತಿ ದೇವರಗದ್ದೆ ಕೆಲಸ ಮಾಡುತ್ತಿದ್ದಾರೆ.
ತುಂಬಾ ಸಂತೋಷದಿಂದಲೇ ಈ ವೃತ್ತಿಯನ್ನು ಮಾಡುತ್ತಿರುವ ಕೀರ್ತಿಯವರು, ಸುಮಾರು ಒಂದುವರೆ ವರ್ಷದಿಂದ ಚಾಲಕಿಯಾಗಿ ಎಲ್ಲ ತರಬೇತಿಯನ್ನು ಪಡೆದಿರುತ್ತೇನೆ. ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡಿದ್ದೇನೆ ಸದ್ಯ ಸಂಸಾರದೊಂದಿಗೆ ದೇವರ ಗದ್ದೆಯಲ್ಲಿ ವಾಸಿಸುತ್ತಿದ್ದೇನೆ. ಸುಬ್ರಹ್ಮಣ್ಯ ಓಂ ಶ್ರೀ ಸಂಜೀವಿನಿ ಗ್ರಾಮಪಂಚಾಯತ್ ಮಟ್ಟದ ಒಕ್ಕೂಟ ಕಸವಿಲ್ಲವೇರಿ ವಾಹನದ ಚಾಲಾಕಿಯಾಗಿ ದುಡಿಯುತ್ತಿದ್ದೇನೆ ಎಂದು ನಗುಮುಖದಿಂದ ಉತ್ತರಿಸುತ್ತಾರೆ. ಓರ್ವ ಮಹಿಳೆ ಚಾಲಕಿಯಾಗಿ ಉದ್ಯೋಗ ಮಾಡುತ್ತಿರುವುದು ಸುಬ್ರಹ್ಮಣ್ಯ ಗ್ರಾಮದಲ್ಲಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…