Advertisement
ರಾಷ್ಟ್ರೀಯ

ಅಪರೂಪದ ಪ್ರಕರಣ | 3 ದಿನಗಳ ಅಂತರದಲ್ಲಿ ಅವಳಿಗಳಿಗೆ ಜನ್ಮ ನೀಡಿದ ಮಹಿಳೆ…! |

Share

ಅವಳಿ ಮಕ್ಕಳು ಸಾಮಾನ್ಯ ನಿಮಿಷಗಳ ಅಂತರದಲ್ಲಿ ಜನಿಸುತ್ತವೆ. ಆದರೆ ಇಲ್ಲೊಬ್ಬಳು ಮಹಿಳೆ ಮೂರು ದಿನದ ಅಂತರದಲ್ಲಿ ಇನ್ನೊಂದು ಮಗುವಿಗೆ ಜನ್ಮ ನೀಡುವ ಮೂಲಕ ಅಪರೂಪದ ಪ್ರಕರಣ ದಾಖಲಾಗಿದೆ. ಮಿಲಿಯನ್‌ ಪ್ರಕರಣಗಳಲ್ಲಿ ಒಂದು ಇಂತಹ ಘಟನೆಗಳು ನಡೆಯುತ್ತದೆ ಎಂದು ವೈದ್ಯರು  ಹೇಳಿದ್ದಾರೆ. ಮಾರ್ಚ್‌ ತಿಂಗಳಲ್ಲಿ ಈ ಹೆರಿಗೆ ನಡೆದಿದ್ದು ಇದೀಗ ಬಹಿರಂಗಪಡಿಸಲಾಗಿದೆ.

Advertisement

ಟೆಕ್ಸಾಸ್‌ನ ಕಾರ್ಮೆನ್ ಮಾರ್ಟಿನೆಕ್ಸ್ ಎಂಬ ಮಹಿಳೆ ಮೂರು ದಿನಗಳ ಅಂತರದಲ್ಲಿ ಎರಡು ಒಂದೇ ಅವಳಿಗಳಿಗೆ ಜನ್ಮ ನೀಡಿದವರು. ಕಾರ್ಮೆನ್ ಮಾರ್ಚ್ 7 ರಂದು ಹೆರಿಗೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಅದೇ ದಿನ ತನ್ನ ಮೊದಲ ಮಗಳು ಗೇಬ್ರಿಯೆಲಾ (ಗ್ಯಾಬಿ)  ಜನ್ಮ ನೀಡಿದರು. ಅದಾಗಿ ಮಾ.10 ರಂದು ಇನ್ನೊಂದು ಮಗುವಿಗೆ ಜನ್ಮ ನೀಡಿದರು. ಮೊದಲ ಮಗುವಿನ ಜನನದ ನಂತರ  ಎಚ್ಚರಿಕೆಯಿಂದ ಆಸ್ಪತ್ರೆಯಲ್ಲಿ ನಿಗಾ ವಿಭಾಗದಲ್ಲಿ ದಾಖಲಿಸಿ ಕಾರ್ಮೆನ್ ಅವರಿಗೆ ಮುಜುವರ್ಜಿಯಿಂದ ಚಿಕಿತ್ಸೆ ನೀಡಲಾಗಿತ್ತು. ಯಾವುದೇ ಆಪರೇಷನ್‌ ಮಾಡಿಸದೆ ಸಹಜ ಹೆರಿಗೆ ಕ್ರಿಯೆಯನ್ನು ನಡೆಸಲು ಕಾದು ಮೂರು ದಿನಗಳ ನಂತರ ಇನ್ನೊಂದು ಮಗುವಿಗೆ ಜನ್ಮ ನೀಡಲು ಸಾಧ್ಯವಾಯಿತು.

ಮೂರು ದಿನಗಳ ಕಾಲ  ಮೇಲ್ವಿಚಾರಣೆ  ಮತ್ತು ಮೆಗ್ನೀಸಿಯಮ್  ನೀಡಲಾಯಿತು, ಇದು ಹೆರಿಗೆಯ ಪ್ರಕ್ರಿಯೆಯನ್ನು ನಿಧಾನಗೊಳಿಸಲು ಅಥವಾ ನಿಲ್ಲಿಸಲು ಸಹಾಯ ಮಾಡುತ್ತದೆ ಎಂದು ವೈದ್ಯರು ಹೇಳಿದ್ದರು.  ಹೆರಿಗೆಗೆ ಸಹಾಯ ಮಾಡಿದ ಡಾ ಜೇಮ್ಸ್ ಎಲ್ ಟಾಡ್ವಿಕ್, “ನನ್ನ ವೃತ್ತಿಜೀವನದಲ್ಲಿ ತೀರಾ ಅಪರೂಪದ ಪ್ರಕರಣವಾಗಿದೆ.ಇದು ತುಂಬಾ ಅಸಾಮಾನ್ಯ ಎಂದಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

5 hours ago

ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU

ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…

5 hours ago

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

18 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

24 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

1 day ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

1 day ago