Advertisement
ರಾಷ್ಟ್ರೀಯ

ಅಪರೂಪದ ಪ್ರಕರಣ | 3 ದಿನಗಳ ಅಂತರದಲ್ಲಿ ಅವಳಿಗಳಿಗೆ ಜನ್ಮ ನೀಡಿದ ಮಹಿಳೆ…! |

Share

ಅವಳಿ ಮಕ್ಕಳು ಸಾಮಾನ್ಯ ನಿಮಿಷಗಳ ಅಂತರದಲ್ಲಿ ಜನಿಸುತ್ತವೆ. ಆದರೆ ಇಲ್ಲೊಬ್ಬಳು ಮಹಿಳೆ ಮೂರು ದಿನದ ಅಂತರದಲ್ಲಿ ಇನ್ನೊಂದು ಮಗುವಿಗೆ ಜನ್ಮ ನೀಡುವ ಮೂಲಕ ಅಪರೂಪದ ಪ್ರಕರಣ ದಾಖಲಾಗಿದೆ. ಮಿಲಿಯನ್‌ ಪ್ರಕರಣಗಳಲ್ಲಿ ಒಂದು ಇಂತಹ ಘಟನೆಗಳು ನಡೆಯುತ್ತದೆ ಎಂದು ವೈದ್ಯರು  ಹೇಳಿದ್ದಾರೆ. ಮಾರ್ಚ್‌ ತಿಂಗಳಲ್ಲಿ ಈ ಹೆರಿಗೆ ನಡೆದಿದ್ದು ಇದೀಗ ಬಹಿರಂಗಪಡಿಸಲಾಗಿದೆ.

ಟೆಕ್ಸಾಸ್‌ನ ಕಾರ್ಮೆನ್ ಮಾರ್ಟಿನೆಕ್ಸ್ ಎಂಬ ಮಹಿಳೆ ಮೂರು ದಿನಗಳ ಅಂತರದಲ್ಲಿ ಎರಡು ಒಂದೇ ಅವಳಿಗಳಿಗೆ ಜನ್ಮ ನೀಡಿದವರು. ಕಾರ್ಮೆನ್ ಮಾರ್ಚ್ 7 ರಂದು ಹೆರಿಗೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಅದೇ ದಿನ ತನ್ನ ಮೊದಲ ಮಗಳು ಗೇಬ್ರಿಯೆಲಾ (ಗ್ಯಾಬಿ)  ಜನ್ಮ ನೀಡಿದರು. ಅದಾಗಿ ಮಾ.10 ರಂದು ಇನ್ನೊಂದು ಮಗುವಿಗೆ ಜನ್ಮ ನೀಡಿದರು. ಮೊದಲ ಮಗುವಿನ ಜನನದ ನಂತರ  ಎಚ್ಚರಿಕೆಯಿಂದ ಆಸ್ಪತ್ರೆಯಲ್ಲಿ ನಿಗಾ ವಿಭಾಗದಲ್ಲಿ ದಾಖಲಿಸಿ ಕಾರ್ಮೆನ್ ಅವರಿಗೆ ಮುಜುವರ್ಜಿಯಿಂದ ಚಿಕಿತ್ಸೆ ನೀಡಲಾಗಿತ್ತು. ಯಾವುದೇ ಆಪರೇಷನ್‌ ಮಾಡಿಸದೆ ಸಹಜ ಹೆರಿಗೆ ಕ್ರಿಯೆಯನ್ನು ನಡೆಸಲು ಕಾದು ಮೂರು ದಿನಗಳ ನಂತರ ಇನ್ನೊಂದು ಮಗುವಿಗೆ ಜನ್ಮ ನೀಡಲು ಸಾಧ್ಯವಾಯಿತು.

Advertisement

ಮೂರು ದಿನಗಳ ಕಾಲ  ಮೇಲ್ವಿಚಾರಣೆ  ಮತ್ತು ಮೆಗ್ನೀಸಿಯಮ್  ನೀಡಲಾಯಿತು, ಇದು ಹೆರಿಗೆಯ ಪ್ರಕ್ರಿಯೆಯನ್ನು ನಿಧಾನಗೊಳಿಸಲು ಅಥವಾ ನಿಲ್ಲಿಸಲು ಸಹಾಯ ಮಾಡುತ್ತದೆ ಎಂದು ವೈದ್ಯರು ಹೇಳಿದ್ದರು.  ಹೆರಿಗೆಗೆ ಸಹಾಯ ಮಾಡಿದ ಡಾ ಜೇಮ್ಸ್ ಎಲ್ ಟಾಡ್ವಿಕ್, “ನನ್ನ ವೃತ್ತಿಜೀವನದಲ್ಲಿ ತೀರಾ ಅಪರೂಪದ ಪ್ರಕರಣವಾಗಿದೆ.ಇದು ತುಂಬಾ ಅಸಾಮಾನ್ಯ ಎಂದಿದ್ದಾರೆ.

 

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಳೆ ಕೊರತೆ ಆತಂಕ – ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಿ – ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…

2 hours ago

ಮಲೆನಾಡು ಮತ್ತೆ ಮಳೆಯಲ್ಲಿ ಮಿಂದೆದ್ದಿದೆ…! ಮಳೆ ಬಂದರೆ ಶಿರಾಡಿ ಹೀಗಿರುತ್ತೆ…?

ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ…

2 hours ago

ಮಲೆನಾಡು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚುರುಕು-ಕೃಷಿಗೆ ಹೊಸ ಚೈತನ್ಯ, ರೈತರಲ್ಲಿ ಖುಷಿ

ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…

8 hours ago

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

3 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

3 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

3 days ago