Advertisement
ಸುದ್ದಿಗಳು

ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..

Share

ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ ಗಟ್ಟಿ ನಿರ್ಧಾರಗಳು ಈ ಗಾದೆ ಮಾತನ್ನು ನಿಜವಾಗಿಸುತ್ತಾರೆ. ಅಂತಹವರಲ್ಲಿ ಆಸಿಯಾ ಒಬ್ಬರು. ಉತ್ತರ ಕಾಶ್ಮೀರದಲ್ಲಿ ನಡೆದ ಗುಂಡಿನ ದಾಳಿಗೆ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಪತಿಯನ್ನು ಕಳೆದುಕೊಂಡು. ಮುಂದೆ ಜೀವನ ಹೇಗೆ ಎಂಬ ಪ್ರಶ್ನೆಗೆ, ತಾನೇ ಕೃಷಿಯ ಮೂಲಕ ಉತ್ತರ ಕಂಡುಕೊಂಡಿದ್ದಾರೆ.

ಆಸಿಯಾ ಅವರ ಬದುಕಿನ  ಹೋರಾಟಗಳು ಅನೇಕರಿಗೆ ಧೈರ್ಯ ತಂದುಕೊಡುತ್ತವೆ.  ಮದುವೆಯಾದ ಕೆಲವೇ ವರ್ಷಗಳಲ್ಲಿ ಪತಿಯನ್ನು ಕಳೆದುಕೊಂಡರು.  ಇಬ್ಬರು ಮಕ್ಕಳನ್ನು ಒಂಟಿಯಾಗಿ ಬೆಳೆಸಬೇಕಾಯಿತು. 2019 ರಲ್ಲಿ ಬೆಂಕಿಯು ಅವರ ಮನೆಯನ್ನು ನಾಶಮಾಡಿದಾಗ ಅವರ ಸವಾಲುಗಳು ಮತ್ತಷ್ಟು ಹೆಚ್ಚಾದವು. ಸೀಮಿತ ಸಂಪನ್ಮೂಲಗಳು ಮತ್ತು ಕೃಷಿ ಮಾಡಲು ಭೂಮಿ ಇಲ್ಲದ ಕಾರಣ, ಸ್ಥಳೀಯವಾಗಿ ಲಭ್ಯವಿರುವ ವಸ್ತುಗಳು ಮತ್ತು ಸ್ವಯಂ-ಕಲಿಸಿದ ತಂತ್ರಗಳಿಂದ ತಮ್ಮ ಮೇಲ್ಛಾವಣಿಯನ್ನು ಸಣ್ಣ ಪ್ರಮಾಣದ ಸಾವಯವ ಕೃಷಿಯನ್ನು ಪ್ರಾರಂಭಿಸಲು ಬಳಸಿದರು.

ಜೀವನದಲ್ಲಿ ಏನಾದರೂ ಸಾಧಿಸಬೇಕೆಂಬ ಹಠದಿಂದ, ರೂಪ್ ಟಾಪ್ ತರಕಾರಿ ತೋಟ ಹಾಗೂ ಅಣಬೆ ಕೃಷಿಯನ್ನು ತಮ್ಮ ಬದುಕಿನ ಬಂಡಿಗೆ ಮೂಲಧಾರವಾಗಿಸಿಕೊಂಡಿದ್ದಾರೆ. ಇಂದು ಆಸಿಯಾ ತಿಂಗಳಿಗೆ ರೂ 35,000 ದಿಂದ 40,000 ಆದಾಯ ಗಳಿಸುತ್ತಿದ್ದಾರೆ. 10×10 ಅಡಿ ಕೋಣೆಯಲ್ಲಿ ಅಣಬೆ ಕೃಷಿ ಮಾಡಿದ ಅವರು ಅಣಬೆಗಳಿಂದ ತಯಾರಿಸಿದ ವರ್ಮಿಕಾಂಪೋಸ್ಟ್ ಬಳಸಿ ತರಕಾರಿಗಳನ್ನು ಬೆಳೆಯಲು ನಿರ್ಧರಿಸುತ್ತಾರೆ. ಇವರ ಬಳಿ ಕೃಷಿ ಮಾಡಲು ಬೇಕಾದಷ್ಟು ಭೂಮಿ ಇರದ ಕಾರಣ ಮನೆಯ ಮೇಲ್ಛಾವಣಿಯನ್ನೇ ಕೃಷಿ ಭೂಮಿಯನ್ನಾಗಿಸಿಕೊಂಡಿದ್ದಾರೆ.

ಆಸಿಯಾ ಮನೆಯ ಟೆರೇಸ್ ನಲ್ಲೇ ಅಣಬೆ ಗೊಬ್ಬರ ಬಳಸಿಕೊಂಡು ಕೃಷಿಯಲ್ಲಿ ಪ್ರಯೋಗ ನಡೆಸಲು ಮುಂದಾದರು. ಪ್ಲಾಸ್ಟಿಕ್ ಬುಟ್ಟಿಗಳನ್ನು ಖರೀದಿಸಿ ಅದರಲ್ಲಿ ತರಕಾರಿ ಬೆಳೆಯಲಾರಂಭಿಸಿದರು. ಹೀಗೆ ನಿಧಾನವಾಗಿ ಅವರ ಪ್ರಯೋಗ ಫಲ ನೀಡಿತು. ಮೇಲ್ಛಾವಣಿ ಉದ್ಯಾನ ಅವರ ಪರಿಶ್ರಮಕ್ಕೆ ತಕ್ಕ ಬಹುಮಾನ ತಂದಿತು. ಆರಂಭದಲ್ಲಿ ಕಷ್ಟಗಳು ಎದುರಾದರೂ ನಿಧಾನವಾಗಿ ಸ್ಥಳಿಯ ಬಂಡಿಪೋರಾ ಮಾರುಕಟ್ಟೆಗಳಲ್ಲಿ ತರಕಾರಿಗಳನ್ನು ಮಾರಾಟ ಮಾಡಲು ಪ್ರಾರಂಭಿಸಿದರು.

ಕೊಲ್ಲಾರ್ಡ್ ಗ್ರೀನ್ಸ್, ಈರುಳ್ಳಿ, ಆಲೂಗಡ್ಡೆ, ಬದನೆಕಾಯಿ, ಪಾಲಕ್, ಮೆಣಸಿಕಾಯಿಗಳು, ಟೊಮ್ಯಾಟಿ, ಬೀನ್ಸ್, ಕ್ಯಾರೆಟ್, ಎಲೆಗಳ ಸೊಪ್ಪುಗಳು ಮತ್ತು ವಿವಿಧ ರೀತಿಯ ಮೊಳಕೆಗಳನ್ನು ಒಳಗೊಂಡಂತೆ ವರ್ಷಪೂರ್ತಿ ತರಕಾರಿಗಳನ್ನು ಬೆಳೆಸುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

14 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

23 hours ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

24 hours ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

2 days ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

2 days ago