Advertisement
ಸುದ್ದಿಗಳು

ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..

Share

ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ ಗಟ್ಟಿ ನಿರ್ಧಾರಗಳು ಈ ಗಾದೆ ಮಾತನ್ನು ನಿಜವಾಗಿಸುತ್ತಾರೆ. ಅಂತಹವರಲ್ಲಿ ಆಸಿಯಾ ಒಬ್ಬರು. ಉತ್ತರ ಕಾಶ್ಮೀರದಲ್ಲಿ ನಡೆದ ಗುಂಡಿನ ದಾಳಿಗೆ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಪತಿಯನ್ನು ಕಳೆದುಕೊಂಡು. ಮುಂದೆ ಜೀವನ ಹೇಗೆ ಎಂಬ ಪ್ರಶ್ನೆಗೆ, ತಾನೇ ಕೃಷಿಯ ಮೂಲಕ ಉತ್ತರ ಕಂಡುಕೊಂಡಿದ್ದಾರೆ.

ಆಸಿಯಾ ಅವರ ಬದುಕಿನ  ಹೋರಾಟಗಳು ಅನೇಕರಿಗೆ ಧೈರ್ಯ ತಂದುಕೊಡುತ್ತವೆ.  ಮದುವೆಯಾದ ಕೆಲವೇ ವರ್ಷಗಳಲ್ಲಿ ಪತಿಯನ್ನು ಕಳೆದುಕೊಂಡರು.  ಇಬ್ಬರು ಮಕ್ಕಳನ್ನು ಒಂಟಿಯಾಗಿ ಬೆಳೆಸಬೇಕಾಯಿತು. 2019 ರಲ್ಲಿ ಬೆಂಕಿಯು ಅವರ ಮನೆಯನ್ನು ನಾಶಮಾಡಿದಾಗ ಅವರ ಸವಾಲುಗಳು ಮತ್ತಷ್ಟು ಹೆಚ್ಚಾದವು. ಸೀಮಿತ ಸಂಪನ್ಮೂಲಗಳು ಮತ್ತು ಕೃಷಿ ಮಾಡಲು ಭೂಮಿ ಇಲ್ಲದ ಕಾರಣ, ಸ್ಥಳೀಯವಾಗಿ ಲಭ್ಯವಿರುವ ವಸ್ತುಗಳು ಮತ್ತು ಸ್ವಯಂ-ಕಲಿಸಿದ ತಂತ್ರಗಳಿಂದ ತಮ್ಮ ಮೇಲ್ಛಾವಣಿಯನ್ನು ಸಣ್ಣ ಪ್ರಮಾಣದ ಸಾವಯವ ಕೃಷಿಯನ್ನು ಪ್ರಾರಂಭಿಸಲು ಬಳಸಿದರು.

ಜೀವನದಲ್ಲಿ ಏನಾದರೂ ಸಾಧಿಸಬೇಕೆಂಬ ಹಠದಿಂದ, ರೂಪ್ ಟಾಪ್ ತರಕಾರಿ ತೋಟ ಹಾಗೂ ಅಣಬೆ ಕೃಷಿಯನ್ನು ತಮ್ಮ ಬದುಕಿನ ಬಂಡಿಗೆ ಮೂಲಧಾರವಾಗಿಸಿಕೊಂಡಿದ್ದಾರೆ. ಇಂದು ಆಸಿಯಾ ತಿಂಗಳಿಗೆ ರೂ 35,000 ದಿಂದ 40,000 ಆದಾಯ ಗಳಿಸುತ್ತಿದ್ದಾರೆ. 10×10 ಅಡಿ ಕೋಣೆಯಲ್ಲಿ ಅಣಬೆ ಕೃಷಿ ಮಾಡಿದ ಅವರು ಅಣಬೆಗಳಿಂದ ತಯಾರಿಸಿದ ವರ್ಮಿಕಾಂಪೋಸ್ಟ್ ಬಳಸಿ ತರಕಾರಿಗಳನ್ನು ಬೆಳೆಯಲು ನಿರ್ಧರಿಸುತ್ತಾರೆ. ಇವರ ಬಳಿ ಕೃಷಿ ಮಾಡಲು ಬೇಕಾದಷ್ಟು ಭೂಮಿ ಇರದ ಕಾರಣ ಮನೆಯ ಮೇಲ್ಛಾವಣಿಯನ್ನೇ ಕೃಷಿ ಭೂಮಿಯನ್ನಾಗಿಸಿಕೊಂಡಿದ್ದಾರೆ.

ಆಸಿಯಾ ಮನೆಯ ಟೆರೇಸ್ ನಲ್ಲೇ ಅಣಬೆ ಗೊಬ್ಬರ ಬಳಸಿಕೊಂಡು ಕೃಷಿಯಲ್ಲಿ ಪ್ರಯೋಗ ನಡೆಸಲು ಮುಂದಾದರು. ಪ್ಲಾಸ್ಟಿಕ್ ಬುಟ್ಟಿಗಳನ್ನು ಖರೀದಿಸಿ ಅದರಲ್ಲಿ ತರಕಾರಿ ಬೆಳೆಯಲಾರಂಭಿಸಿದರು. ಹೀಗೆ ನಿಧಾನವಾಗಿ ಅವರ ಪ್ರಯೋಗ ಫಲ ನೀಡಿತು. ಮೇಲ್ಛಾವಣಿ ಉದ್ಯಾನ ಅವರ ಪರಿಶ್ರಮಕ್ಕೆ ತಕ್ಕ ಬಹುಮಾನ ತಂದಿತು. ಆರಂಭದಲ್ಲಿ ಕಷ್ಟಗಳು ಎದುರಾದರೂ ನಿಧಾನವಾಗಿ ಸ್ಥಳಿಯ ಬಂಡಿಪೋರಾ ಮಾರುಕಟ್ಟೆಗಳಲ್ಲಿ ತರಕಾರಿಗಳನ್ನು ಮಾರಾಟ ಮಾಡಲು ಪ್ರಾರಂಭಿಸಿದರು.

ಕೊಲ್ಲಾರ್ಡ್ ಗ್ರೀನ್ಸ್, ಈರುಳ್ಳಿ, ಆಲೂಗಡ್ಡೆ, ಬದನೆಕಾಯಿ, ಪಾಲಕ್, ಮೆಣಸಿಕಾಯಿಗಳು, ಟೊಮ್ಯಾಟಿ, ಬೀನ್ಸ್, ಕ್ಯಾರೆಟ್, ಎಲೆಗಳ ಸೊಪ್ಪುಗಳು ಮತ್ತು ವಿವಿಧ ರೀತಿಯ ಮೊಳಕೆಗಳನ್ನು ಒಳಗೊಂಡಂತೆ ವರ್ಷಪೂರ್ತಿ ತರಕಾರಿಗಳನ್ನು ಬೆಳೆಸುತ್ತಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

11 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

11 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

11 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

21 hours ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

1 day ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

1 day ago