Advertisement
ಸುದ್ದಿಗಳು

ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..

Share

ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ ಗಟ್ಟಿ ನಿರ್ಧಾರಗಳು ಈ ಗಾದೆ ಮಾತನ್ನು ನಿಜವಾಗಿಸುತ್ತಾರೆ. ಅಂತಹವರಲ್ಲಿ ಆಸಿಯಾ ಒಬ್ಬರು. ಉತ್ತರ ಕಾಶ್ಮೀರದಲ್ಲಿ ನಡೆದ ಗುಂಡಿನ ದಾಳಿಗೆ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಪತಿಯನ್ನು ಕಳೆದುಕೊಂಡು. ಮುಂದೆ ಜೀವನ ಹೇಗೆ ಎಂಬ ಪ್ರಶ್ನೆಗೆ, ತಾನೇ ಕೃಷಿಯ ಮೂಲಕ ಉತ್ತರ ಕಂಡುಕೊಂಡಿದ್ದಾರೆ.

ಆಸಿಯಾ ಅವರ ಬದುಕಿನ  ಹೋರಾಟಗಳು ಅನೇಕರಿಗೆ ಧೈರ್ಯ ತಂದುಕೊಡುತ್ತವೆ.  ಮದುವೆಯಾದ ಕೆಲವೇ ವರ್ಷಗಳಲ್ಲಿ ಪತಿಯನ್ನು ಕಳೆದುಕೊಂಡರು.  ಇಬ್ಬರು ಮಕ್ಕಳನ್ನು ಒಂಟಿಯಾಗಿ ಬೆಳೆಸಬೇಕಾಯಿತು. 2019 ರಲ್ಲಿ ಬೆಂಕಿಯು ಅವರ ಮನೆಯನ್ನು ನಾಶಮಾಡಿದಾಗ ಅವರ ಸವಾಲುಗಳು ಮತ್ತಷ್ಟು ಹೆಚ್ಚಾದವು. ಸೀಮಿತ ಸಂಪನ್ಮೂಲಗಳು ಮತ್ತು ಕೃಷಿ ಮಾಡಲು ಭೂಮಿ ಇಲ್ಲದ ಕಾರಣ, ಸ್ಥಳೀಯವಾಗಿ ಲಭ್ಯವಿರುವ ವಸ್ತುಗಳು ಮತ್ತು ಸ್ವಯಂ-ಕಲಿಸಿದ ತಂತ್ರಗಳಿಂದ ತಮ್ಮ ಮೇಲ್ಛಾವಣಿಯನ್ನು ಸಣ್ಣ ಪ್ರಮಾಣದ ಸಾವಯವ ಕೃಷಿಯನ್ನು ಪ್ರಾರಂಭಿಸಲು ಬಳಸಿದರು.

ಜೀವನದಲ್ಲಿ ಏನಾದರೂ ಸಾಧಿಸಬೇಕೆಂಬ ಹಠದಿಂದ, ರೂಪ್ ಟಾಪ್ ತರಕಾರಿ ತೋಟ ಹಾಗೂ ಅಣಬೆ ಕೃಷಿಯನ್ನು ತಮ್ಮ ಬದುಕಿನ ಬಂಡಿಗೆ ಮೂಲಧಾರವಾಗಿಸಿಕೊಂಡಿದ್ದಾರೆ. ಇಂದು ಆಸಿಯಾ ತಿಂಗಳಿಗೆ ರೂ 35,000 ದಿಂದ 40,000 ಆದಾಯ ಗಳಿಸುತ್ತಿದ್ದಾರೆ. 10×10 ಅಡಿ ಕೋಣೆಯಲ್ಲಿ ಅಣಬೆ ಕೃಷಿ ಮಾಡಿದ ಅವರು ಅಣಬೆಗಳಿಂದ ತಯಾರಿಸಿದ ವರ್ಮಿಕಾಂಪೋಸ್ಟ್ ಬಳಸಿ ತರಕಾರಿಗಳನ್ನು ಬೆಳೆಯಲು ನಿರ್ಧರಿಸುತ್ತಾರೆ. ಇವರ ಬಳಿ ಕೃಷಿ ಮಾಡಲು ಬೇಕಾದಷ್ಟು ಭೂಮಿ ಇರದ ಕಾರಣ ಮನೆಯ ಮೇಲ್ಛಾವಣಿಯನ್ನೇ ಕೃಷಿ ಭೂಮಿಯನ್ನಾಗಿಸಿಕೊಂಡಿದ್ದಾರೆ.

ಆಸಿಯಾ ಮನೆಯ ಟೆರೇಸ್ ನಲ್ಲೇ ಅಣಬೆ ಗೊಬ್ಬರ ಬಳಸಿಕೊಂಡು ಕೃಷಿಯಲ್ಲಿ ಪ್ರಯೋಗ ನಡೆಸಲು ಮುಂದಾದರು. ಪ್ಲಾಸ್ಟಿಕ್ ಬುಟ್ಟಿಗಳನ್ನು ಖರೀದಿಸಿ ಅದರಲ್ಲಿ ತರಕಾರಿ ಬೆಳೆಯಲಾರಂಭಿಸಿದರು. ಹೀಗೆ ನಿಧಾನವಾಗಿ ಅವರ ಪ್ರಯೋಗ ಫಲ ನೀಡಿತು. ಮೇಲ್ಛಾವಣಿ ಉದ್ಯಾನ ಅವರ ಪರಿಶ್ರಮಕ್ಕೆ ತಕ್ಕ ಬಹುಮಾನ ತಂದಿತು. ಆರಂಭದಲ್ಲಿ ಕಷ್ಟಗಳು ಎದುರಾದರೂ ನಿಧಾನವಾಗಿ ಸ್ಥಳಿಯ ಬಂಡಿಪೋರಾ ಮಾರುಕಟ್ಟೆಗಳಲ್ಲಿ ತರಕಾರಿಗಳನ್ನು ಮಾರಾಟ ಮಾಡಲು ಪ್ರಾರಂಭಿಸಿದರು.

ಕೊಲ್ಲಾರ್ಡ್ ಗ್ರೀನ್ಸ್, ಈರುಳ್ಳಿ, ಆಲೂಗಡ್ಡೆ, ಬದನೆಕಾಯಿ, ಪಾಲಕ್, ಮೆಣಸಿಕಾಯಿಗಳು, ಟೊಮ್ಯಾಟಿ, ಬೀನ್ಸ್, ಕ್ಯಾರೆಟ್, ಎಲೆಗಳ ಸೊಪ್ಪುಗಳು ಮತ್ತು ವಿವಿಧ ರೀತಿಯ ಮೊಳಕೆಗಳನ್ನು ಒಳಗೊಂಡಂತೆ ವರ್ಷಪೂರ್ತಿ ತರಕಾರಿಗಳನ್ನು ಬೆಳೆಸುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

4 hours ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

4 hours ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

17 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

18 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

18 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

23 hours ago