Rural Mirror - ಅತಿಥಿ

ಕಲಿತ ವಿದ್ಯೆಯಿಂದ ಬದುಕು ಕಟ್ಟಿದ ಮಹಿಳೆ | ಕಷ್ಟವನ್ನು ಮೆಟ್ಟಿ ನಿಂತು ಬದುಕು ಕಟ್ಟಿದ ಮಹಿಳೆಯ ಕತೆ.. |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗ್ರಾಮೀಣ ಭಾಗದಲ್ಲಿ ಸಾಕಷ್ಟು ಜನರು ಬದುಕಿನಲ್ಲಿ ಗೆದ್ದಿದ್ದಾರೆ. ಓದಿದ ವಿದ್ಯೆ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗದೇ ಇದ್ದಾಗ ಕಲಿತ ವಿದ್ಯೆ ಉಪಯೋಗಕ್ಕೆ ಬಂದಿದೆ. ಇಂತಹ ಸಾಲಿನಲ್ಲಿ ಮಹಿಳೆಯೊಬ್ಬರು ಇದ್ದಾರೆ.ಆಯುರ್ವೇದ ಚಿಕಿತ್ಸಕನಾಗಿ ತರಬೇತಿ ಪಡೆದಿದ್ದ ಈ ಮಹಿಳೆ, ಬದುಕು ಕಟ್ಟುವ ಸಮಯದಲ್ಲಿ ಆಯ್ಕೆ ಮಾಡಿದ್ದು ತೆಂಗಿನ ಕಾಯಿ(Coconut) ಸುಲಿಯುವ ಕಾಯಕ. ಈಗ ಅರ್ಧ ದಿನದಲ್ಲಿ ಒಂದು ಸಾವಿರ ತೆಂಗಿನ ಕಾಯಿ ಸುಲಿಯಬಲ್ಲರು. ಇಬ್ಬರು ಮಕ್ಕಳ ಸಹಿತ ಕುಟುಂಬವನ್ನು ಸಾಕುತ್ತಿದ್ದಾರೆ.

Advertisement
Advertisement

ಮೂಲತಃ ಮಡಿಕೇರಿಯವರಾದ 40 ವರ್ಷದ ಹರಿಣಾಕ್ಷಿ, ಪ್ರಸ್ತುತ ಕಾಸರಗೋಡಿನ ವಾಣಿನಗರದಲ್ಲಿ ವಾಸಿಸುತ್ತಿದ್ದಾರೆ. ಮದುವೆಯಾದ ನಂತರ ವೈಯಕ್ತಿಕ ಕಾರಣಗಳಿಂದ ಮಕ್ಕಳೊಂದಿಗೆ ಕಾಸರಗೋಡು ವಾಣೀನಗರಕ್ಕೆ ಬಂದು ನೆಲೆಸಿದ್ದರು.  ಆರಂಭದಲ್ಲಿ ಮನೆಗಳಿಗೆ ತೋಟದ ಕೆಲಸಗಳಿಗೆ ಹೋಗುತ್ತಿದ್ದರು. ಅಲ್ಲಿ ತೆಂಗಿನ ಕಾಯಿ ಸುಲಿಯಲು ಕಲಿತಿದ್ದರು. ಇದೀಗ ತೆಂಗಿನ ಕಾಯಿ ಸುಲಿಯುವುದೇ ಕಾಯಕ ಮಾಡಿಕೊಂಡಿದ್ದಾರೆ.ಈಗ ದಕ್ಷಿಣ ಕನ್ನಡ ಮತ್ತು ಕಾಸರಗೋಡಿನ ಗಡಿಭಾಗದ ಮನೆಗಳಲ್ಲಿ ತೆಂಗಿನಕಾಯಿ ಸುಲಿಯುವ ಕೆಲಸದಲ್ಲಿ ತೊಡಗಿದ್ದಾರೆ. ಅವರು ಪ್ರತಿ ತೆಂಗಿನಕಾಯಿಗೆ 1 ರೂಪಾಯಿ ಗಳಿಸುತ್ತಾರೆ ಮತ್ತು ಅರ್ಧ ದಿನದಲ್ಲಿ ಸುಮಾರು 1,000 ತೆಂಗಿನಕಾಯಿಗಳನ್ನು ಸುಲಿಯಬಲ್ಲರು. ಪುತ್ರ ಹಾಗೂ ಪುತ್ರಿಯ ಜೊತೆ ವಾಸಿಸುತ್ತಿರುವ ಹರಿಣಾಕ್ಷಿ, ಆದಾಯಕ್ಕೆ ಪೂರಕವಾಗಿ ಹಸುವನ್ನು ಸಾಕುತ್ತಿದ್ದಾರೆ. ಬಿಡುವಿನ ವೇಳೆಯಲ್ಲಿ ಏಣಿಯನ್ನು ಬಳಸಿ ಅಡಿಕೆ ಕೊಯ್ಲು ಮತ್ತು ಮೆಣಸು ಕೊಯ್ಲು  ಕೆಲಸ ಕೂಡ ಮಾಡುತ್ತಾರೆ.

ತೆಂಗಿನಕಾಯಿ ಸುಲಿಯುವ ಸಾಧನದ ಜೊತೆ ಹರಿಣಾಕ್ಷಿ | PHOTO CREDIT : Shailaja Padre

ಕಾಸರಗೋಡಿಗೆ ಸ್ಥಳಾಂತರಗೊಂಡಾಗ ಈ ಕೆಲಸ ಪ್ರಾರಂಭಿಸಿದೆ. ಒಂಟಿಯಾಗಿ ಇಬ್ಬರು ಮಕ್ಕಳೊಂದಿಗೆ ಬದುಕಬೇಕಾಗಿ ಬಂದಾಗ, ನಾನು ಆದಾಯದ ಮಾರ್ಗವನ್ನು ಕಂಡುಹಿಡಿಯಬೇಕಾಗಿತ್ತು. ಇಡುಕ್ಕಿಯಲ್ಲಿ ಆಯುರ್ವೇದ ಚಿಕಿತ್ಸಕನಾಗಿ ತರಬೇತಿ ಪಡೆದಿದ್ದೇನೆ ಮತ್ತು ಈ ಹಿಂದೆ ಬೆಂಗಳೂರು ಮತ್ತು ಚೆನ್ನೈನಲ್ಲಿ ಕೆಲಸ ಮಾಡಿದ್ದೇನೆ” ಎಂದು ಹರಿಣಾಕ್ಷಿ ಅವರು ಹೇಳುತ್ತಾರೆ.

ಹರಿಣಾಕ್ಷಿ ಅವರು ಗ್ರಾಮೀಣ ಭಾಗದ ಹಲವು ಕಡೆ ತನ್ನದೇ ವಾಹನದ ಮೂಲಕ ತೆಂಗಿನ ಕಾಯಿ ಸುಲಿಯುವ ಕೆಲಸಕ್ಕೆ ಹೋಗುತ್ತಿದ್ದಾರೆ. ಕೆಲಸದಲ್ಲಿನ ಬದ್ಧತೆಯೇ ಅವರನ್ನು ಯಶಸ್ಸಿನ ಹಾದಿಯಲ್ಲಿ ಕರೆದೊಯ್ಯುತ್ತಿದೆ ಎಂದು ಅಡಿಕೆ ಪತ್ರಿಕೆ ಸಂಪಾದಕ ಶ್ರೀಪಡ್ರೆ ಅವರು ಹೇಳುತ್ತಾರೆ.

 

Advertisement
ತೆಂಗಿನಕಾಯಿ ಸುಲಿಯುತ್ತಿರುವ ಹರಿಣಾಕ್ಷಿ | PHOTO CREDIT : Shailaja Padre
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

2 hours ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

9 hours ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

9 hours ago

14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…

10 hours ago

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ – ಉಪಲೋಕಾಯುಕ್ತ ಬಿ. ವೀರಪ್ಪ

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ  ಉಪಲೋಕಾಯುಕ್ತ ಬಿ.…

10 hours ago