ಗ್ರಾಮೀಣ ಭಾಗದಲ್ಲಿ ಸಾಕಷ್ಟು ಜನರು ಬದುಕಿನಲ್ಲಿ ಗೆದ್ದಿದ್ದಾರೆ. ಓದಿದ ವಿದ್ಯೆ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗದೇ ಇದ್ದಾಗ ಕಲಿತ ವಿದ್ಯೆ ಉಪಯೋಗಕ್ಕೆ ಬಂದಿದೆ. ಇಂತಹ ಸಾಲಿನಲ್ಲಿ ಮಹಿಳೆಯೊಬ್ಬರು ಇದ್ದಾರೆ.ಆಯುರ್ವೇದ ಚಿಕಿತ್ಸಕನಾಗಿ ತರಬೇತಿ ಪಡೆದಿದ್ದ ಈ ಮಹಿಳೆ, ಬದುಕು ಕಟ್ಟುವ ಸಮಯದಲ್ಲಿ ಆಯ್ಕೆ ಮಾಡಿದ್ದು ತೆಂಗಿನ ಕಾಯಿ(Coconut) ಸುಲಿಯುವ ಕಾಯಕ. ಈಗ ಅರ್ಧ ದಿನದಲ್ಲಿ ಒಂದು ಸಾವಿರ ತೆಂಗಿನ ಕಾಯಿ ಸುಲಿಯಬಲ್ಲರು. ಇಬ್ಬರು ಮಕ್ಕಳ ಸಹಿತ ಕುಟುಂಬವನ್ನು ಸಾಕುತ್ತಿದ್ದಾರೆ.
ಮೂಲತಃ ಮಡಿಕೇರಿಯವರಾದ 40 ವರ್ಷದ ಹರಿಣಾಕ್ಷಿ, ಪ್ರಸ್ತುತ ಕಾಸರಗೋಡಿನ ವಾಣಿನಗರದಲ್ಲಿ ವಾಸಿಸುತ್ತಿದ್ದಾರೆ. ಮದುವೆಯಾದ ನಂತರ ವೈಯಕ್ತಿಕ ಕಾರಣಗಳಿಂದ ಮಕ್ಕಳೊಂದಿಗೆ ಕಾಸರಗೋಡು ವಾಣೀನಗರಕ್ಕೆ ಬಂದು ನೆಲೆಸಿದ್ದರು. ಆರಂಭದಲ್ಲಿ ಮನೆಗಳಿಗೆ ತೋಟದ ಕೆಲಸಗಳಿಗೆ ಹೋಗುತ್ತಿದ್ದರು. ಅಲ್ಲಿ ತೆಂಗಿನ ಕಾಯಿ ಸುಲಿಯಲು ಕಲಿತಿದ್ದರು. ಇದೀಗ ತೆಂಗಿನ ಕಾಯಿ ಸುಲಿಯುವುದೇ ಕಾಯಕ ಮಾಡಿಕೊಂಡಿದ್ದಾರೆ.ಈಗ ದಕ್ಷಿಣ ಕನ್ನಡ ಮತ್ತು ಕಾಸರಗೋಡಿನ ಗಡಿಭಾಗದ ಮನೆಗಳಲ್ಲಿ ತೆಂಗಿನಕಾಯಿ ಸುಲಿಯುವ ಕೆಲಸದಲ್ಲಿ ತೊಡಗಿದ್ದಾರೆ. ಅವರು ಪ್ರತಿ ತೆಂಗಿನಕಾಯಿಗೆ 1 ರೂಪಾಯಿ ಗಳಿಸುತ್ತಾರೆ ಮತ್ತು ಅರ್ಧ ದಿನದಲ್ಲಿ ಸುಮಾರು 1,000 ತೆಂಗಿನಕಾಯಿಗಳನ್ನು ಸುಲಿಯಬಲ್ಲರು. ಪುತ್ರ ಹಾಗೂ ಪುತ್ರಿಯ ಜೊತೆ ವಾಸಿಸುತ್ತಿರುವ ಹರಿಣಾಕ್ಷಿ, ಆದಾಯಕ್ಕೆ ಪೂರಕವಾಗಿ ಹಸುವನ್ನು ಸಾಕುತ್ತಿದ್ದಾರೆ. ಬಿಡುವಿನ ವೇಳೆಯಲ್ಲಿ ಏಣಿಯನ್ನು ಬಳಸಿ ಅಡಿಕೆ ಕೊಯ್ಲು ಮತ್ತು ಮೆಣಸು ಕೊಯ್ಲು ಕೆಲಸ ಕೂಡ ಮಾಡುತ್ತಾರೆ.
ಕಾಸರಗೋಡಿಗೆ ಸ್ಥಳಾಂತರಗೊಂಡಾಗ ಈ ಕೆಲಸ ಪ್ರಾರಂಭಿಸಿದೆ. ಒಂಟಿಯಾಗಿ ಇಬ್ಬರು ಮಕ್ಕಳೊಂದಿಗೆ ಬದುಕಬೇಕಾಗಿ ಬಂದಾಗ, ನಾನು ಆದಾಯದ ಮಾರ್ಗವನ್ನು ಕಂಡುಹಿಡಿಯಬೇಕಾಗಿತ್ತು. ಇಡುಕ್ಕಿಯಲ್ಲಿ ಆಯುರ್ವೇದ ಚಿಕಿತ್ಸಕನಾಗಿ ತರಬೇತಿ ಪಡೆದಿದ್ದೇನೆ ಮತ್ತು ಈ ಹಿಂದೆ ಬೆಂಗಳೂರು ಮತ್ತು ಚೆನ್ನೈನಲ್ಲಿ ಕೆಲಸ ಮಾಡಿದ್ದೇನೆ” ಎಂದು ಹರಿಣಾಕ್ಷಿ ಅವರು ಹೇಳುತ್ತಾರೆ.
ಹರಿಣಾಕ್ಷಿ ಅವರು ಗ್ರಾಮೀಣ ಭಾಗದ ಹಲವು ಕಡೆ ತನ್ನದೇ ವಾಹನದ ಮೂಲಕ ತೆಂಗಿನ ಕಾಯಿ ಸುಲಿಯುವ ಕೆಲಸಕ್ಕೆ ಹೋಗುತ್ತಿದ್ದಾರೆ. ಕೆಲಸದಲ್ಲಿನ ಬದ್ಧತೆಯೇ ಅವರನ್ನು ಯಶಸ್ಸಿನ ಹಾದಿಯಲ್ಲಿ ಕರೆದೊಯ್ಯುತ್ತಿದೆ ಎಂದು ಅಡಿಕೆ ಪತ್ರಿಕೆ ಸಂಪಾದಕ ಶ್ರೀಪಡ್ರೆ ಅವರು ಹೇಳುತ್ತಾರೆ.
ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್ಫೋನ್(Ear Phone)…
ಸಸ್ಯಗಳು ಆರೋಗ್ಯಪೂರ್ಣವಾಗಿರಬೇಕಾದರೆ ಸರಿಯಾದ ಪೋಷಕಾಂಶಗಳು ಬೇಕು. ಗೋವಿನ ಸಗಣಿಯಲ್ಲಿ(Cow dung) ಪೂರ್ಣ ಪ್ರಮಾಣದ…
ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…
ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…
ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…
ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ ಇದೆ. ಅದೇ ರೀತಿ ನೈರುತ್ಯ ಮಾನ್ಸೂನ್…