Advertisement
Rural Mirror - ಅತಿಥಿ

ಕಲಿತ ವಿದ್ಯೆಯಿಂದ ಬದುಕು ಕಟ್ಟಿದ ಮಹಿಳೆ | ಕಷ್ಟವನ್ನು ಮೆಟ್ಟಿ ನಿಂತು ಬದುಕು ಕಟ್ಟಿದ ಮಹಿಳೆಯ ಕತೆ.. |

Share

ಗ್ರಾಮೀಣ ಭಾಗದಲ್ಲಿ ಸಾಕಷ್ಟು ಜನರು ಬದುಕಿನಲ್ಲಿ ಗೆದ್ದಿದ್ದಾರೆ. ಓದಿದ ವಿದ್ಯೆ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗದೇ ಇದ್ದಾಗ ಕಲಿತ ವಿದ್ಯೆ ಉಪಯೋಗಕ್ಕೆ ಬಂದಿದೆ. ಇಂತಹ ಸಾಲಿನಲ್ಲಿ ಮಹಿಳೆಯೊಬ್ಬರು ಇದ್ದಾರೆ.ಆಯುರ್ವೇದ ಚಿಕಿತ್ಸಕನಾಗಿ ತರಬೇತಿ ಪಡೆದಿದ್ದ ಈ ಮಹಿಳೆ, ಬದುಕು ಕಟ್ಟುವ ಸಮಯದಲ್ಲಿ ಆಯ್ಕೆ ಮಾಡಿದ್ದು ತೆಂಗಿನ ಕಾಯಿ(Coconut) ಸುಲಿಯುವ ಕಾಯಕ. ಈಗ ಅರ್ಧ ದಿನದಲ್ಲಿ ಒಂದು ಸಾವಿರ ತೆಂಗಿನ ಕಾಯಿ ಸುಲಿಯಬಲ್ಲರು. ಇಬ್ಬರು ಮಕ್ಕಳ ಸಹಿತ ಕುಟುಂಬವನ್ನು ಸಾಕುತ್ತಿದ್ದಾರೆ.

ಮೂಲತಃ ಮಡಿಕೇರಿಯವರಾದ 40 ವರ್ಷದ ಹರಿಣಾಕ್ಷಿ, ಪ್ರಸ್ತುತ ಕಾಸರಗೋಡಿನ ವಾಣಿನಗರದಲ್ಲಿ ವಾಸಿಸುತ್ತಿದ್ದಾರೆ. ಮದುವೆಯಾದ ನಂತರ ವೈಯಕ್ತಿಕ ಕಾರಣಗಳಿಂದ ಮಕ್ಕಳೊಂದಿಗೆ ಕಾಸರಗೋಡು ವಾಣೀನಗರಕ್ಕೆ ಬಂದು ನೆಲೆಸಿದ್ದರು.  ಆರಂಭದಲ್ಲಿ ಮನೆಗಳಿಗೆ ತೋಟದ ಕೆಲಸಗಳಿಗೆ ಹೋಗುತ್ತಿದ್ದರು. ಅಲ್ಲಿ ತೆಂಗಿನ ಕಾಯಿ ಸುಲಿಯಲು ಕಲಿತಿದ್ದರು. ಇದೀಗ ತೆಂಗಿನ ಕಾಯಿ ಸುಲಿಯುವುದೇ ಕಾಯಕ ಮಾಡಿಕೊಂಡಿದ್ದಾರೆ.ಈಗ ದಕ್ಷಿಣ ಕನ್ನಡ ಮತ್ತು ಕಾಸರಗೋಡಿನ ಗಡಿಭಾಗದ ಮನೆಗಳಲ್ಲಿ ತೆಂಗಿನಕಾಯಿ ಸುಲಿಯುವ ಕೆಲಸದಲ್ಲಿ ತೊಡಗಿದ್ದಾರೆ. ಅವರು ಪ್ರತಿ ತೆಂಗಿನಕಾಯಿಗೆ 1 ರೂಪಾಯಿ ಗಳಿಸುತ್ತಾರೆ ಮತ್ತು ಅರ್ಧ ದಿನದಲ್ಲಿ ಸುಮಾರು 1,000 ತೆಂಗಿನಕಾಯಿಗಳನ್ನು ಸುಲಿಯಬಲ್ಲರು. ಪುತ್ರ ಹಾಗೂ ಪುತ್ರಿಯ ಜೊತೆ ವಾಸಿಸುತ್ತಿರುವ ಹರಿಣಾಕ್ಷಿ, ಆದಾಯಕ್ಕೆ ಪೂರಕವಾಗಿ ಹಸುವನ್ನು ಸಾಕುತ್ತಿದ್ದಾರೆ. ಬಿಡುವಿನ ವೇಳೆಯಲ್ಲಿ ಏಣಿಯನ್ನು ಬಳಸಿ ಅಡಿಕೆ ಕೊಯ್ಲು ಮತ್ತು ಮೆಣಸು ಕೊಯ್ಲು  ಕೆಲಸ ಕೂಡ ಮಾಡುತ್ತಾರೆ.

ತೆಂಗಿನಕಾಯಿ ಸುಲಿಯುವ ಸಾಧನದ ಜೊತೆ ಹರಿಣಾಕ್ಷಿ | PHOTO CREDIT : Shailaja Padre

ಕಾಸರಗೋಡಿಗೆ ಸ್ಥಳಾಂತರಗೊಂಡಾಗ ಈ ಕೆಲಸ ಪ್ರಾರಂಭಿಸಿದೆ. ಒಂಟಿಯಾಗಿ ಇಬ್ಬರು ಮಕ್ಕಳೊಂದಿಗೆ ಬದುಕಬೇಕಾಗಿ ಬಂದಾಗ, ನಾನು ಆದಾಯದ ಮಾರ್ಗವನ್ನು ಕಂಡುಹಿಡಿಯಬೇಕಾಗಿತ್ತು. ಇಡುಕ್ಕಿಯಲ್ಲಿ ಆಯುರ್ವೇದ ಚಿಕಿತ್ಸಕನಾಗಿ ತರಬೇತಿ ಪಡೆದಿದ್ದೇನೆ ಮತ್ತು ಈ ಹಿಂದೆ ಬೆಂಗಳೂರು ಮತ್ತು ಚೆನ್ನೈನಲ್ಲಿ ಕೆಲಸ ಮಾಡಿದ್ದೇನೆ” ಎಂದು ಹರಿಣಾಕ್ಷಿ ಅವರು ಹೇಳುತ್ತಾರೆ.

ಹರಿಣಾಕ್ಷಿ ಅವರು ಗ್ರಾಮೀಣ ಭಾಗದ ಹಲವು ಕಡೆ ತನ್ನದೇ ವಾಹನದ ಮೂಲಕ ತೆಂಗಿನ ಕಾಯಿ ಸುಲಿಯುವ ಕೆಲಸಕ್ಕೆ ಹೋಗುತ್ತಿದ್ದಾರೆ. ಕೆಲಸದಲ್ಲಿನ ಬದ್ಧತೆಯೇ ಅವರನ್ನು ಯಶಸ್ಸಿನ ಹಾದಿಯಲ್ಲಿ ಕರೆದೊಯ್ಯುತ್ತಿದೆ ಎಂದು ಅಡಿಕೆ ಪತ್ರಿಕೆ ಸಂಪಾದಕ ಶ್ರೀಪಡ್ರೆ ಅವರು ಹೇಳುತ್ತಾರೆ.

 

ತೆಂಗಿನಕಾಯಿ ಸುಲಿಯುತ್ತಿರುವ ಹರಿಣಾಕ್ಷಿ | PHOTO CREDIT : Shailaja Padre
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅತಿವೃಷ್ಟಿ, ಬರ, ಹೀಟ್‌ ವೇವ್‌ಗಳಿಗೆ ಯಾರು ಕಾರಣ? ಐಐಟಿ ದೆಹಲಿ ಅಧ್ಯಯನದಿಂದ ಕುತೂಹಲಕಾರಿ ಮಾಹಿತಿ!

ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…

12 minutes ago

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

14 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

14 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

15 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

23 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

23 hours ago