Advertisement
Rural Mirror - ಅತಿಥಿ

ಕಲಿತ ವಿದ್ಯೆಯಿಂದ ಬದುಕು ಕಟ್ಟಿದ ಮಹಿಳೆ | ಕಷ್ಟವನ್ನು ಮೆಟ್ಟಿ ನಿಂತು ಬದುಕು ಕಟ್ಟಿದ ಮಹಿಳೆಯ ಕತೆ.. |

Share

ಗ್ರಾಮೀಣ ಭಾಗದಲ್ಲಿ ಸಾಕಷ್ಟು ಜನರು ಬದುಕಿನಲ್ಲಿ ಗೆದ್ದಿದ್ದಾರೆ. ಓದಿದ ವಿದ್ಯೆ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗದೇ ಇದ್ದಾಗ ಕಲಿತ ವಿದ್ಯೆ ಉಪಯೋಗಕ್ಕೆ ಬಂದಿದೆ. ಇಂತಹ ಸಾಲಿನಲ್ಲಿ ಮಹಿಳೆಯೊಬ್ಬರು ಇದ್ದಾರೆ.ಆಯುರ್ವೇದ ಚಿಕಿತ್ಸಕನಾಗಿ ತರಬೇತಿ ಪಡೆದಿದ್ದ ಈ ಮಹಿಳೆ, ಬದುಕು ಕಟ್ಟುವ ಸಮಯದಲ್ಲಿ ಆಯ್ಕೆ ಮಾಡಿದ್ದು ತೆಂಗಿನ ಕಾಯಿ(Coconut) ಸುಲಿಯುವ ಕಾಯಕ. ಈಗ ಅರ್ಧ ದಿನದಲ್ಲಿ ಒಂದು ಸಾವಿರ ತೆಂಗಿನ ಕಾಯಿ ಸುಲಿಯಬಲ್ಲರು. ಇಬ್ಬರು ಮಕ್ಕಳ ಸಹಿತ ಕುಟುಂಬವನ್ನು ಸಾಕುತ್ತಿದ್ದಾರೆ.

ಮೂಲತಃ ಮಡಿಕೇರಿಯವರಾದ 40 ವರ್ಷದ ಹರಿಣಾಕ್ಷಿ, ಪ್ರಸ್ತುತ ಕಾಸರಗೋಡಿನ ವಾಣಿನಗರದಲ್ಲಿ ವಾಸಿಸುತ್ತಿದ್ದಾರೆ. ಮದುವೆಯಾದ ನಂತರ ವೈಯಕ್ತಿಕ ಕಾರಣಗಳಿಂದ ಮಕ್ಕಳೊಂದಿಗೆ ಕಾಸರಗೋಡು ವಾಣೀನಗರಕ್ಕೆ ಬಂದು ನೆಲೆಸಿದ್ದರು.  ಆರಂಭದಲ್ಲಿ ಮನೆಗಳಿಗೆ ತೋಟದ ಕೆಲಸಗಳಿಗೆ ಹೋಗುತ್ತಿದ್ದರು. ಅಲ್ಲಿ ತೆಂಗಿನ ಕಾಯಿ ಸುಲಿಯಲು ಕಲಿತಿದ್ದರು. ಇದೀಗ ತೆಂಗಿನ ಕಾಯಿ ಸುಲಿಯುವುದೇ ಕಾಯಕ ಮಾಡಿಕೊಂಡಿದ್ದಾರೆ.ಈಗ ದಕ್ಷಿಣ ಕನ್ನಡ ಮತ್ತು ಕಾಸರಗೋಡಿನ ಗಡಿಭಾಗದ ಮನೆಗಳಲ್ಲಿ ತೆಂಗಿನಕಾಯಿ ಸುಲಿಯುವ ಕೆಲಸದಲ್ಲಿ ತೊಡಗಿದ್ದಾರೆ. ಅವರು ಪ್ರತಿ ತೆಂಗಿನಕಾಯಿಗೆ 1 ರೂಪಾಯಿ ಗಳಿಸುತ್ತಾರೆ ಮತ್ತು ಅರ್ಧ ದಿನದಲ್ಲಿ ಸುಮಾರು 1,000 ತೆಂಗಿನಕಾಯಿಗಳನ್ನು ಸುಲಿಯಬಲ್ಲರು. ಪುತ್ರ ಹಾಗೂ ಪುತ್ರಿಯ ಜೊತೆ ವಾಸಿಸುತ್ತಿರುವ ಹರಿಣಾಕ್ಷಿ, ಆದಾಯಕ್ಕೆ ಪೂರಕವಾಗಿ ಹಸುವನ್ನು ಸಾಕುತ್ತಿದ್ದಾರೆ. ಬಿಡುವಿನ ವೇಳೆಯಲ್ಲಿ ಏಣಿಯನ್ನು ಬಳಸಿ ಅಡಿಕೆ ಕೊಯ್ಲು ಮತ್ತು ಮೆಣಸು ಕೊಯ್ಲು  ಕೆಲಸ ಕೂಡ ಮಾಡುತ್ತಾರೆ.

ತೆಂಗಿನಕಾಯಿ ಸುಲಿಯುವ ಸಾಧನದ ಜೊತೆ ಹರಿಣಾಕ್ಷಿ | PHOTO CREDIT : Shailaja Padre

ಕಾಸರಗೋಡಿಗೆ ಸ್ಥಳಾಂತರಗೊಂಡಾಗ ಈ ಕೆಲಸ ಪ್ರಾರಂಭಿಸಿದೆ. ಒಂಟಿಯಾಗಿ ಇಬ್ಬರು ಮಕ್ಕಳೊಂದಿಗೆ ಬದುಕಬೇಕಾಗಿ ಬಂದಾಗ, ನಾನು ಆದಾಯದ ಮಾರ್ಗವನ್ನು ಕಂಡುಹಿಡಿಯಬೇಕಾಗಿತ್ತು. ಇಡುಕ್ಕಿಯಲ್ಲಿ ಆಯುರ್ವೇದ ಚಿಕಿತ್ಸಕನಾಗಿ ತರಬೇತಿ ಪಡೆದಿದ್ದೇನೆ ಮತ್ತು ಈ ಹಿಂದೆ ಬೆಂಗಳೂರು ಮತ್ತು ಚೆನ್ನೈನಲ್ಲಿ ಕೆಲಸ ಮಾಡಿದ್ದೇನೆ” ಎಂದು ಹರಿಣಾಕ್ಷಿ ಅವರು ಹೇಳುತ್ತಾರೆ.

ಹರಿಣಾಕ್ಷಿ ಅವರು ಗ್ರಾಮೀಣ ಭಾಗದ ಹಲವು ಕಡೆ ತನ್ನದೇ ವಾಹನದ ಮೂಲಕ ತೆಂಗಿನ ಕಾಯಿ ಸುಲಿಯುವ ಕೆಲಸಕ್ಕೆ ಹೋಗುತ್ತಿದ್ದಾರೆ. ಕೆಲಸದಲ್ಲಿನ ಬದ್ಧತೆಯೇ ಅವರನ್ನು ಯಶಸ್ಸಿನ ಹಾದಿಯಲ್ಲಿ ಕರೆದೊಯ್ಯುತ್ತಿದೆ ಎಂದು ಅಡಿಕೆ ಪತ್ರಿಕೆ ಸಂಪಾದಕ ಶ್ರೀಪಡ್ರೆ ಅವರು ಹೇಳುತ್ತಾರೆ.

 

ತೆಂಗಿನಕಾಯಿ ಸುಲಿಯುತ್ತಿರುವ ಹರಿಣಾಕ್ಷಿ | PHOTO CREDIT : Shailaja Padre
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

12 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

16 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

23 hours ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

23 hours ago

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

1 day ago

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…

1 day ago