Advertisement
MIRROR FOCUS

ಅರಿಶಿನ ಕೃಷಿಯಲ್ಲಿ ಯಶಸ್ಸು ಗಳಿಸಿದ ಮಹಿಳೆ – ಮಿಶ್ರ ಬೆಳೆಗೆ ಇವರು ಮಾದರಿ..!

Share

ಕೃಷಿಯನ್ನು ನಂಬಿ ಸೋತ ಉದಾಹರಣೆ ಕಡಿಮೆ. ಆದರೆ ಹವಾಮಾನ, ನೀರಾವರಿ ಹಾಗೂ ಅವೈಜ್ಞಾನಿಕ ಪದ್ಧತಿಗಳಿಂದ ಹಿನ್ನಡೆಯಾದ ಉದಾಹರಣೆ ಇದೆ. ಆದರೆ, ಕೃಷಿಯನ್ನು ತಪಸ್ಸಿನಂತೆ ಮಾಡಿದವರು ಎಂದೂ ಸೋರ ಉದಾಹರಣೆ ಇಲ್ಲ. ಇದಕ್ಕೆ ಉದಾಹರಣೆ, ಮಧ್ಯಪ್ರದೇಶದ ನರ್ಮದಾಪುರಂನ ಕಾಂಚನ್ ವರ್ಮಾ.

ಇವರು ಗೋಧಿ, ಮೆಕ್ಕೆಜೋಳ ಮತ್ತು ತರಕಾರಿಗಳನ್ನು ಬೆಳೆಯುವ ಜೊತೆಗೆ, 2020 ರಲ್ಲಿ ಅರಶಿನ ಕೃಷಿಯನ್ನು ಪ್ರಾರಂಭಿಸಿ ಸಾಂಪ್ರದಾಯಿಕ ಬೆಳೆಗಳಿಂದ ಒಂದು ಎಕರೆಗೆ 1.5 ಲಕ್ಷ ರೂ ಗಳಿಸುತ್ತಿದ್ದ ಇವರು ಅರಶಿನ ಕೃಷಿಯಿಂದ ತಮ್ಮ ಆದಾಯವನ್ನು 3 ಲಕ್ಷ ರೂ ಗಳಿಗೆ ದ್ವಿಗುಣಗೊಳಿಸಿದರು.
2020 ರಲ್ಲಿ ನಾನು ದೂರದರ್ಶನದಲ್ಲಿ ಅರಿಶಿನ ಕೃಷಿಯ ಪ್ರಯೋಜನಗಳ ಬಗ್ಗೆ ಕಾರ್ಯಕ್ರಮವನ್ನು ನೋಡಿದೆ. ತದನಂತರ, ಹೆಚ್ಚಿನ ಮಾಹಿತಿ ಪಡೆಯಲು ಕೃಷಿ ವಿಜ್ಞಾನ ಕೇಂದ್ರ ಗೆ ಭೇಟಿ ನೀಡಿ ಏಳು ದಿನಗಳ ತರಬೇತಿ ಕಾರ್ಯಕ್ರಮವನ್ನು ಪಡೆದೆ. ಇಲ್ಲಿ ನಾನು “ಸಾಂಗ್ಲಿ” ತಳಿಯ ಅರಿಶಿಣವನ್ನು ಆಯ್ಕೆ ಮಾಡಿಕೊಂಡರು, ಇದು ಹೆಚ್ಚಿನ ಕರ್ಕ್ಯುಮಿನ್ ಅಂಶವನ್ನು ಹೊಂದಿದೆ ಮತ್ತು ಔಷದೀಯ ಉದ್ದೇಶಗಳಿಗಾಗಿ ಬಳಸಲಾಗುತ್ತದೆ. ಈ ತಳಿಯ ಆಳವಾದ ಕಿತ್ತಳೆ ಬಣ್ಣ ಮತ್ತು  ಸುವಾಸನೆಯನ್ನು ಹೊಂದಿದೆ, ಜೊತೆಗೆ ದೊಡ್ಡ ಗೆಡ್ಡೆಗಳನ್ನು ಉತ್ಪಾದಿಸುತ್ತದೆ ಇದರಿಂದ ನಾನು ಯಶಸ್ವಿಯಾಗಲು ಸಾಧ್ಯ ಎಂದರು.

ಮೊದಲ ವರ್ಷದಲ್ಲಿ ನಾನು ಒಂದು ಎಕರೆ ಭೂಮಿಯಲ್ಲಿ ಎಂಟು ಕ್ವಿಂಟಾಲ್ ಅರಿಶಿಣವನ್ನು ಬಿತ್ತಿ 100 ಕ್ವಿಂಟಾಲ್ ಇಳುವರಿ ಪಡೆದೆ.. 2023ರಲ್ಲಿ 400 ಕ್ವಿಂಟಾಲ್ ಅರಿಶಿಣವನ್ನು ಕಟಾವು ಮಾಡಿ 12 ಲಕ್ಷ ರೂ ಆದಾಯ ಗಳಿಸಿದೆ. ಈಗ ನಾನು 10 ಎಕರೆ ಭೂಮಿಗೆ ಅರಿಶಿಣ ಕೃಷಿಯನ್ನು ವಿಸ್ತರಿಸಿದ್ದೇನೆ ಹಾಗೂ ಈ ಋತುವಿನಲ್ಲಿ 30 ಲಕ್ಷ ರೂ ಆದಾಯ ನಿರೀಕ್ಷಿಸುತ್ತಿದ್ದೇನೆ ಎಂದು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

(ಮೂಲ-ನ್ಯೂಸ್‌ ಫೀಡ್)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

15 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

15 hours ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

15 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

23 hours ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

1 day ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

2 days ago