ಕೃಷಿಯನ್ನು ನಂಬಿ ಸೋತ ಉದಾಹರಣೆ ಕಡಿಮೆ. ಆದರೆ ಹವಾಮಾನ, ನೀರಾವರಿ ಹಾಗೂ ಅವೈಜ್ಞಾನಿಕ ಪದ್ಧತಿಗಳಿಂದ ಹಿನ್ನಡೆಯಾದ ಉದಾಹರಣೆ ಇದೆ. ಆದರೆ, ಕೃಷಿಯನ್ನು ತಪಸ್ಸಿನಂತೆ ಮಾಡಿದವರು ಎಂದೂ ಸೋರ ಉದಾಹರಣೆ ಇಲ್ಲ. ಇದಕ್ಕೆ ಉದಾಹರಣೆ, ಮಧ್ಯಪ್ರದೇಶದ ನರ್ಮದಾಪುರಂನ ಕಾಂಚನ್ ವರ್ಮಾ.
ಇವರು ಗೋಧಿ, ಮೆಕ್ಕೆಜೋಳ ಮತ್ತು ತರಕಾರಿಗಳನ್ನು ಬೆಳೆಯುವ ಜೊತೆಗೆ, 2020 ರಲ್ಲಿ ಅರಶಿನ ಕೃಷಿಯನ್ನು ಪ್ರಾರಂಭಿಸಿ ಸಾಂಪ್ರದಾಯಿಕ ಬೆಳೆಗಳಿಂದ ಒಂದು ಎಕರೆಗೆ 1.5 ಲಕ್ಷ ರೂ ಗಳಿಸುತ್ತಿದ್ದ ಇವರು ಅರಶಿನ ಕೃಷಿಯಿಂದ ತಮ್ಮ ಆದಾಯವನ್ನು 3 ಲಕ್ಷ ರೂ ಗಳಿಗೆ ದ್ವಿಗುಣಗೊಳಿಸಿದರು.
2020 ರಲ್ಲಿ ನಾನು ದೂರದರ್ಶನದಲ್ಲಿ ಅರಿಶಿನ ಕೃಷಿಯ ಪ್ರಯೋಜನಗಳ ಬಗ್ಗೆ ಕಾರ್ಯಕ್ರಮವನ್ನು ನೋಡಿದೆ. ತದನಂತರ, ಹೆಚ್ಚಿನ ಮಾಹಿತಿ ಪಡೆಯಲು ಕೃಷಿ ವಿಜ್ಞಾನ ಕೇಂದ್ರ ಗೆ ಭೇಟಿ ನೀಡಿ ಏಳು ದಿನಗಳ ತರಬೇತಿ ಕಾರ್ಯಕ್ರಮವನ್ನು ಪಡೆದೆ. ಇಲ್ಲಿ ನಾನು “ಸಾಂಗ್ಲಿ” ತಳಿಯ ಅರಿಶಿಣವನ್ನು ಆಯ್ಕೆ ಮಾಡಿಕೊಂಡರು, ಇದು ಹೆಚ್ಚಿನ ಕರ್ಕ್ಯುಮಿನ್ ಅಂಶವನ್ನು ಹೊಂದಿದೆ ಮತ್ತು ಔಷದೀಯ ಉದ್ದೇಶಗಳಿಗಾಗಿ ಬಳಸಲಾಗುತ್ತದೆ. ಈ ತಳಿಯ ಆಳವಾದ ಕಿತ್ತಳೆ ಬಣ್ಣ ಮತ್ತು ಸುವಾಸನೆಯನ್ನು ಹೊಂದಿದೆ, ಜೊತೆಗೆ ದೊಡ್ಡ ಗೆಡ್ಡೆಗಳನ್ನು ಉತ್ಪಾದಿಸುತ್ತದೆ ಇದರಿಂದ ನಾನು ಯಶಸ್ವಿಯಾಗಲು ಸಾಧ್ಯ ಎಂದರು.
ಮೊದಲ ವರ್ಷದಲ್ಲಿ ನಾನು ಒಂದು ಎಕರೆ ಭೂಮಿಯಲ್ಲಿ ಎಂಟು ಕ್ವಿಂಟಾಲ್ ಅರಿಶಿಣವನ್ನು ಬಿತ್ತಿ 100 ಕ್ವಿಂಟಾಲ್ ಇಳುವರಿ ಪಡೆದೆ.. 2023ರಲ್ಲಿ 400 ಕ್ವಿಂಟಾಲ್ ಅರಿಶಿಣವನ್ನು ಕಟಾವು ಮಾಡಿ 12 ಲಕ್ಷ ರೂ ಆದಾಯ ಗಳಿಸಿದೆ. ಈಗ ನಾನು 10 ಎಕರೆ ಭೂಮಿಗೆ ಅರಿಶಿಣ ಕೃಷಿಯನ್ನು ವಿಸ್ತರಿಸಿದ್ದೇನೆ ಹಾಗೂ ಈ ಋತುವಿನಲ್ಲಿ 30 ಲಕ್ಷ ರೂ ಆದಾಯ ನಿರೀಕ್ಷಿಸುತ್ತಿದ್ದೇನೆ ಎಂದು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
(ಮೂಲ-ನ್ಯೂಸ್ ಫೀಡ್)
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…