ರಾಜ್ಯದಲ್ಲಿ ಮಹಿಳೆಯರಿಗೆ ಸ್ತ್ರೀ ಸಾಮರ್ಥ್ಯ ಯೋಜನೆ ಹಾಗೂ ಯುವಕರಿಗಾಗಿ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯನ್ನು ಜಾರಿಗೆ ತರಲಿದ್ದೇವೆ. ಈ ಮೂಲಕ ಪ್ರತಿ ಗ್ರಾಮದಲ್ಲಿ ಯುವಕರಿಗೆ ಹಾಗೂ ಮಹಿಳೆಯರಿಗೆ ಉದ್ಯೋಗ ನೀಡುವ ಯೋಜನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಯೋಜನೆಯಡಿ ಪ್ರತಿ ಗ್ರಾಮದಲ್ಲಿ ಎರಡು ಸ್ತ್ರೀ ಶಕ್ತಿ ಸಂಘಗಳಿಗೆ ತಲಾ 5 ಲಕ್ಷ ರೂಪಾಯಿ ಸಾಲ ಮತ್ತು ಅನುದಾನ ಕೊಡಲಾಗುತ್ತದೆ. ಐದು ಲಕ್ಷ ಮಹಿಳೆಯರಿಗೆ ಉದ್ಯೋಗ ಕೊಡುವ ಕಾರ್ಯಕ್ರಮ ಮಾಡುತ್ತಿದ್ದೇವೆ ಹೇಳಿದ್ದಾರೆ.
ಯುವಕರಿಗಾಗಿ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ ಜಾರಿಗೆ ಮಾಡುವುದಾಗಿ, ಪ್ರತಿ ಗ್ರಾಮದಲ್ಲಿ ಎರಡು ಯುವಶಕ್ತಿ ಸಂಘಗಳಿಗೆ ತಲಾ 5 ಲಕ್ಷ ರೂಪಾಯಿ ಅನುದಾನ ಕೊಡುತ್ತಿದ್ದೇವೆ ಎಂದರು. 5 ಲಕ್ಷ ಯುವಕರಿಗೆ ಕೊಡುವ ಯೋಜನೆ ಇದಾಗಿದ್ದು, ಎರಡು ಯೋಜನೆಗಳನ್ನು ಡಿಸೆಂಬರ್ನಲ್ಲಿ ಪ್ರಾರಂಭ ಮಾಡುವುದು ಎಂದು ತಿಳಿಸಿದರು.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…