ರಾಜ್ಯ ಸರ್ಕಾರ ಮಹಿಳೆಯರು, ಮಕ್ಕಳ ಮೇಲಿನ ದೌರ್ಜನ್ಯಗಳ ನಿಗ್ರಹ, ಕಾನೂನಿನ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೇತೃತ್ವದಲ್ಲಿ ಅಕ್ಕ ಪಡೆ ಗೆ ಚಾಲನೆ ನೀಡಿದ್ದಾರೆ. ಇವರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ನೇತೃತ್ವದಲ್ಲಿ ಈ ಉಪಕ್ರಮದಲ್ಲಿ ಪ್ರತಿ ಪಡೆಯಲ್ಲಿ ತರಬೇತಿ ಪಡೆದ ಪೊಲೀಸ್ ಸಿಬ್ಬಂದಿ ಮತ್ತು ಎನ್ಸಿಸಿ ಕೆಡೆಡ್ಗಳಾಗಿದ್ದಾರೆ.
ಈ ತಂಡ ಬಸ್ ನಿಲ್ದಾಣ, ಕಾಲೇಜು, ಹಾಸ್ಟೆಲ್, ಮಾಲ್ಗಳು ಮುಂತಾದ ಸಾರ್ವಜನಿಕ ಸ್ಥಳಗಳಲ್ಲಿ ಗಸ್ತು ತಿರುಗಲಿದ್ದು, ಮಾತ್ರವಲ್ಲದೆ, ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ, ಸಂಚಾರ ನಿಯಮಗಳು, ಮಾದಕ ಪದಾರ್ಥಗಳ ಬಳಕೆಯ ಪರಿಣಾಮಗಳು, ತುರ್ತು ಸಹಾಯವಾಣಿಗಳ ಕುರಿತಿ ವಿದಾರ್ಥಿಗಳಲ್ಲಿ ಜಾಗೃತಿ ಮೂಡಿಸಲಿದೆ.
ಅಕ್ಕ ಪಡೆಯ ಮೂಲ ಉದ್ದೇಶ ಮಹಿಳೆಯರು ಮತ್ತು ಮಕ್ಕಳ ಮೇಳಿನ ದೌರ್ಜನ್ಯ ತಡೆಗಟ್ಟುವುದ, ಸುರಕ್ಷತೆಯ ಕುರಿತು ಜಾಗೃತಿ ಮೂಡಿಸುವುದು, ದೌರ್ಜನ್ಯಕ್ಕೊಳಗಾದ ಮಹಿಳೆಯರು ಮತ್ತು ಮಕ್ಕಳಿಗೆ ತ್ವರಿತಗತಿಯಲ್ಲಿ ಬೆಂಬಲ ನೀಡುವುದು ಆಗಿದೆ.
ಪೊಲೀಸ್ ಇಲಾಖೆಯ ಹೊಯ್ಸಳ ಗಸ್ತು ಮಾದರಿಯಲ್ಲಿ ಅಕ್ಕ ಪಡೆಗಳೂ ಸಹ ಸಾರ್ವಜನಿಕ ಸ್ಥಳಗಳಲ್ಲಿ ಬೆಳಿಗ್ಗೆ 9 ರಿಂದ ಸಂಜೆ 7 ವರೆಗೆ ಗಸ್ತು ತಿರುಗಲಿದೆ. ಈ ಕಾರ್ಯಾಚರಣೆಗಾಗಿ ಹೊಯ್ಸಳ ವಾಹನಗಳ ಮಾದರಿಯಲ್ಲಿ ಮಾರ್ಪಾಡು ಮಾಡಿದ ವಾಹನಗಳನ್ನು ಬಳಸಲಾಗುತ್ತದೆ. ಪ್ರತಿ ಪಡೆಯು 35-45 ವಯೋಮಾನದ ಆರರಿಂದ ಹತ್ತು ಸದಸ್ಯರಿರಲಿದ್ದು, ಇವರಲ್ಲಿ ಕನಿಷ್ಠ ಇಬ್ಬರು ಮಹಿಳಾ ಪೊಲೀಸ್ ಕಾನ್ಸ್ಟೆಬಲ್ಗಳು ಮತ್ತು ತರಬೇತಿ ಪಡೆದ ಎನ್ಸಿಸಿ ಕೆಡೆಟ್ಗಳಿರುತ್ತಾರೆ ಎಂದು ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…