Advertisement
MIRROR FOCUS

ಕೃಷಿಯ ನಿಜವಾದ ಶಕ್ತಿ ಮಹಿಳೆಯರು : ಭಾರತದಲ್ಲಿ ಮೌನ ಕ್ರಾಂತಿ ಶುರುವಾಗಿದೆ..!

Share

ಕೃಷಿ ಎಂದರೆ ಕೇವಲ ಆರ್ಥಿಕ ಚಟುವಟಿಕೆ ಅಲ್ಲ, ಅದು ಮಾನವ ನಾಗರಿಕತೆಯ ಮೂಲಾಧಾರ. ಈ ಕೃಷಿ ಕಥೆ ಮಹಿಳೆಯರ ಪಾತ್ರವಿಲ್ಲದೆ ಸಂಪೂರ್ಣವಾಗುವುದೇ ಇಲ್ಲ. ಇತಿಹಾಸದಲ್ಲಿಯೇ ಮಹಿಳೆಯರು ಆಹಾರ ಉತ್ಪಾದನೆ, ಸಂಸ್ಕರಣೆ ಹಾಗೂ ಬೀಜ ಸಂರಕ್ಷಣೆ ಮೊದಲಾದ ಅನೇಕ ಕಾರ್ಯಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಈ ಬಗ್ಗೆ ಇಕನಾಮಿಕ್‌ ಟೈಮ್ಸ್‌ ವರದಿ ಮಾಡಿದೆ.

ಹಿಂದಿನ ಕಾಲದಲ್ಲಿ ಕಾಡಿನ ಸಸ್ಯಗಳನ್ನು ಗುರುತಿಸುವುದು, ಆಹಾರ ಸಂಗ್ರಹಿಸುವುದು ಹಾಗೂ ಬೀಜಗಳನ್ನು ಉಳಿಸುವುದು ಮಹಿಳೆಯರ ಜವಾಬ್ದಾರಿಯಾಗಿತ್ತು. ಇದೇ ಕ್ರಮ ಕೃಷಿ ಪದ್ಧತಿಗಳ ಬೆಳವಣಿಗೆಗೆ ಹಾಗೂ ಬೆಳೆಗಳ ಗೃಹೀಕರಣಕ್ಕೆ ಕಾರಣವಾಯಿತು.

ಇಂದಿಗೂ ಭಾರತದಲ್ಲಿ ಕೃಷಿ ಕ್ಷೇತ್ರದಲ್ಲಿ ಮಹಿಳೆಯರ ಪಾತ್ರ ಬಹಳ ದೊಡ್ಡದು. ಭಾರತದ ಕೃಷಿ ಉದ್ಯೋಗದಲ್ಲಿ 40% ಕ್ಕಿಂತ ಹೆಚ್ಚು ಮಹಿಳೆಯರು ಇದ್ದಾರೆ. ಗ್ರಾಮೀಣ ಮಹಿಳೆಯರಲ್ಲಿ ಸುಮಾರು ಎರಡುಮೂರರಷ್ಟು ಮಂದಿ ಕೃಷಿಯ ಮೇಲೆ ಅವಲಂಬಿತರಿದ್ದಾರೆ.  ಬಿತ್ತನೆ, ನೆಡುವಿಕೆ, ಕಳೆ ತೆಗೆಯುವುದು, ಕೊಯ್ಲು, ಸಂಗ್ರಹಣೆ ಮುಂತಾದ ಕೆಲಸಗಳಲ್ಲಿ ಮಹಿಳೆಯರು ಪ್ರಮುಖವಾಗಿ ತೊಡಗಿಸಿಕೊಂಡಿದ್ದಾರೆ. ಆದರೂ ಇವರ ಕೆಲಸದ ಬಹುಪಾಲು ಅಧಿಕೃತ ಆರ್ಥಿಕ ವ್ಯವಸ್ಥೆಯಲ್ಲಿ ಗುರುತಿಸದೇ ಇರುವುದೇ ದೊಡ್ಡ ಸಮಸ್ಯೆ ಎಂದು ತಜ್ಞರು ಹೇಳುತ್ತಾರೆ.

ಇತ್ತೀಚಿನ ವರ್ಷಗಳಲ್ಲಿ ಮಹಿಳೆಯರು ಕೇವಲ ಕಾರ್ಮಿಕರಾಗಿ ಮಾತ್ರವಲ್ಲದೆ Farmer Producer Organisations (FPO),  Self Help Groups (SHG), ಅಗ್ರಿ ಉದ್ಯಮಗಳ ಮೂಲಕ ನಾಯಕತ್ವದ ಸ್ಥಾನಗಳನ್ನು ಹಿಡಿಯಲು ಪ್ರಾರಂಭಿಸಿದ್ದಾರೆ.  ಮಹಿಳೆಯರಿಗೆ ಭೂಮಿ, ಹಣಕಾಸು, ತರಬೇತಿ ಹಾಗೂ ಮಾರುಕಟ್ಟೆ ಸಂಪರ್ಕ ದೊರೆತರೆ ಕೃಷಿ ಕ್ಷೇತ್ರ ಹೆಚ್ಚು ಸಮಗ್ರ ಮತ್ತು ಸ್ಥಿರವಾಗುತ್ತದೆ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ.

ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಾದರೂ ಇನ್ನೂ ಹಲವಾರು ಸವಾಲುಗಳಿವೆ.  ಕಡಿಮೆ ವೇತನ, ನಿರ್ಧಾರಗಳಲ್ಲಿ ಸೀಮಿತ ಪಾತ್ರ, ಸಾಲ ಮತ್ತು ತಂತ್ರಜ್ಞಾನಕ್ಕೆ ಕಡಿಮೆ ಪ್ರವೇಶಗಳು ಇವೆ. ಈ ಅಡೆತಡೆಗಳನ್ನು ನಿವಾರಿಸಿದರೆ ಕೃಷಿಯಲ್ಲಿ ಮಹಿಳೆಯರು ಪರಿವರ್ತನೆಯ ಪ್ರಮುಖ ನಾಯಕರು ಆಗಬಹುದು ಎಂದು ತಜ್ಞರು ಸೂಚಿಸುತ್ತಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕೃಷಿಯ ಭವಿಷ್ಯದಲ್ಲಿ ಮಹಿಳೆಯರ ಮಹತ್ವ :  ಕೃಷಿ, ಆಹಾರ ಭದ್ರತೆ ಹಾಗೂ ಹವಾಮಾನ ಬದಲಾವಣೆಯಂತಹ ಸವಾಲುಗಳನ್ನು ಎದುರಿಸಲು ಮಹಿಳೆಯರ ಪಾತ್ರ ಅತ್ಯಂತ ಪ್ರಮುಖವಾಗಿದೆ.  ಮಹಿಳೆಯರಿಗೆ ಸಮಾನ ಅವಕಾಶ, ತರಬೇತಿ ಮತ್ತು ಸಂಪನ್ಮೂಲ ದೊರೆತರೆ ಕೃಷಿ ವ್ಯವಸ್ಥೆ ಹೆಚ್ಚು ಸಮರ್ಥ, ಸಮಾನ ಮತ್ತು ಸ್ಥಿರವಾಗಬಹುದು ಎಂಬುದು ತಜ್ಞರ ಅಭಿಪ್ರಾಯ ಪಡುತ್ತಾರೆ ಎಂದು ಇಕನಾಮಿಕ್‌ ಟೈಮ್ಸ್‌ ವರದಿ ಹೇಳಿದೆ.

Women have long played a crucial yet often under-recognized role in Indian agriculture—from seed preservation and food production to managing household food systems. Today, women constitute over 40% of the agricultural workforce in India. Strengthening their access to resources, land rights, finance, and leadership roles can transform them from participants into systemic leaders in agriculture.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

23 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago