ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ ಬರೆಯಲಾಗಿದೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಅನ್ನಪೂರ್ಣಾದೇವಿ ತಿಳಿಸಿದ್ದಾರೆ.
ಕಳೆದ 11 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕೈಗೊಂಡ ಕ್ರಮಗಳ ಪರಿಣಾಮವಾಗಿ ದುಡಿಯುವ ವರ್ಗದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ದ್ವಿಗುಣವಾಗಿದ್ದು, 2047ರ ವೇಳೆಗೆ ಶೇಕಡ 70ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು. ಮಿಷನ್ ಸಕ್ಷಮ ಅಂಗನವಾಡಿ ಕೇಂದ್ರ ಯೋಜನೆಯ ಮೂಲಕ ದೇಶದ ಎರಡು ಲಕ್ಷಕ್ಕೂ ಅಧಿಕ ಅಂಗನವಾಡಿ ಕೇಂದ್ರಗಳನ್ನು ಸಶಕ್ತಗೊಳಿಸಲಾಗಿದೆ. ಪಿಎಂ ಮಾತೃವಂದನಾ ಯೋಜನೆ, ಪೋಷಣ್ ಅಭಿಯಾನ ಮುಂತಾದ ಕಾರ್ಯಕ್ರಮಗಳ ಮೂಲಕ ಮಹಿಳೆಯರು ಮತ್ತು ಮಕ್ಕಳ ಆರೋಗ್ಯ ಸುರಕ್ಷತೆಗೆ ಗಮನ ನೀಡಲಾಗುತ್ತಿದೆ ಎಂದರು. ಮಾತೃವಂದನಾ ಯೋಜನೆಯ ಅಡಿ ಗರ್ಭಿಣಿಯರಿಗೆ 19 ಸಾವಿರ ಕೋಟಿ ರೂಪಾಯಿ ನೆರವು ನೀಡಲಾಗಿದೆ. ಪ್ರತಿ ಕ್ಷೇತ್ರದಲ್ಲೂ ಮಹಿಳೆಯರ ಪ್ರಗತಿಗೆ ಉತ್ತೇಜನ ನೀಡಲಾಗುತ್ತಿದ್ದು, ಸರ್ಕಾರದ ಎಲ್ಲಾ ಸಚಿವಾಲಯಗಳ ಯೋಜನೆಗಳಲ್ಲಿ ಲಿಂಗಾಧಾರಿತ ಅನುದಾನದಿಂದ ಹೆಚ್ಚಿನ ಅನುಕೂಲವಾಗುತ್ತಿದೆ ಎಂದು ಹೇಳಿದರು. ಸ್ವಸಹಾಯ ಸಂಘಗಳ ಮೂಲಕ ದೇಶದ 10 ಕೋಟಿ ಮಹಿಳೆಯರು ಆರ್ಥಿಕ ವಹಿವಾಟು ನಡೆಸುತ್ತಿದ್ದು, ಗಣನೀಯ ಕೊಡುಗೆ ನೀಡುತ್ತಿದ್ದಾರೆ. ವಿಕಸಿತ ಭಾರತದ ಸಂಕಲ್ಪವನ್ನು ಸಾಕಾರಗೊಳಿಸುವಲ್ಲಿ ಮಹಿಳಯರ ಪಾತ್ರ ಪ್ರಮುಖವಾಗಿದೆ ಎಂದು ಅಭಿಪ್ರಾಯಪಟ್ಟರು.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…