Advertisement
MIRROR FOCUS

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ

Share

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ ಬರೆಯಲಾಗಿದೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಅನ್ನಪೂರ್ಣಾದೇವಿ ತಿಳಿಸಿದ್ದಾರೆ.

ಕಳೆದ 11 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕೈಗೊಂಡ ಕ್ರಮಗಳ ಪರಿಣಾಮವಾಗಿ ದುಡಿಯುವ ವರ್ಗದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ದ್ವಿಗುಣವಾಗಿದ್ದು, 2047ರ ವೇಳೆಗೆ ಶೇಕಡ 70ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು. ಮಿಷನ್ ಸಕ್ಷಮ ಅಂಗನವಾಡಿ ಕೇಂದ್ರ ಯೋಜನೆಯ ಮೂಲಕ ದೇಶದ ಎರಡು ಲಕ್ಷಕ್ಕೂ ಅಧಿಕ ಅಂಗನವಾಡಿ ಕೇಂದ್ರಗಳನ್ನು ಸಶಕ್ತಗೊಳಿಸಲಾಗಿದೆ. ಪಿಎಂ ಮಾತೃವಂದನಾ ಯೋಜನೆ, ಪೋಷಣ್ ಅಭಿಯಾನ ಮುಂತಾದ ಕಾರ್ಯಕ್ರಮಗಳ ಮೂಲಕ ಮಹಿಳೆಯರು ಮತ್ತು ಮಕ್ಕಳ ಆರೋಗ್ಯ ಸುರಕ್ಷತೆಗೆ ಗಮನ ನೀಡಲಾಗುತ್ತಿದೆ ಎಂದರು. ಮಾತೃವಂದನಾ ಯೋಜನೆಯ ಅಡಿ ಗರ್ಭಿಣಿಯರಿಗೆ 19 ಸಾವಿರ ಕೋಟಿ ರೂಪಾಯಿ ನೆರವು ನೀಡಲಾಗಿದೆ. ಪ್ರತಿ ಕ್ಷೇತ್ರದಲ್ಲೂ ಮಹಿಳೆಯರ ಪ್ರಗತಿಗೆ ಉತ್ತೇಜನ ನೀಡಲಾಗುತ್ತಿದ್ದು, ಸರ್ಕಾರದ ಎಲ್ಲಾ ಸಚಿವಾಲಯಗಳ ಯೋಜನೆಗಳಲ್ಲಿ ಲಿಂಗಾಧಾರಿತ ಅನುದಾನದಿಂದ ಹೆಚ್ಚಿನ ಅನುಕೂಲವಾಗುತ್ತಿದೆ ಎಂದು ಹೇಳಿದರು. ಸ್ವಸಹಾಯ ಸಂಘಗಳ ಮೂಲಕ ದೇಶದ 10 ಕೋಟಿ ಮಹಿಳೆಯರು ಆರ್ಥಿಕ ವಹಿವಾಟು ನಡೆಸುತ್ತಿದ್ದು, ಗಣನೀಯ ಕೊಡುಗೆ ನೀಡುತ್ತಿದ್ದಾರೆ. ವಿಕಸಿತ ಭಾರತದ ಸಂಕಲ್ಪವನ್ನು ಸಾಕಾರಗೊಳಿಸುವಲ್ಲಿ ಮಹಿಳಯರ ಪಾತ್ರ ಪ್ರಮುಖವಾಗಿದೆ ಎಂದು ಅಭಿಪ್ರಾಯಪಟ್ಟರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

48 minutes ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

57 minutes ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 hour ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

11 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

12 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

12 hours ago