ವಿಧವೆಯರು, ಗಂಡನಿಂದ ದೂರವಾಗಿರುವವರು ಅಥವಾ ಮದುವೆಯಾಗದೆ ಒಬ್ಬಂಟಿಯಾಗಿ ಜೀವಿಸುತ್ತಿರುವ ಮಹಿಳೆರಿಗೆ ಆರ್ಥಿಕ ಭದ್ರತೆ ನೀಡುವ ದೃಷ್ಟಿಯಿಂದ ರಾಜ್ಯ ಸರ್ಕಾರವು ಮನಸ್ವಿನೀ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯ ಮೂಲಕ ಪ್ರತಿ ತಿಂಗಳು ರೂ 800 ಪಿಂಚಣಿ ಸಿಗುತ್ತದೆ. ಮಾತ್ರವಲ್ಲ ವೃದ್ಧಾಪ್ಯ ವೇತನದ ಮಾದರಿಯಲ್ಲೇ ನೇರವಾಗಿ ಫಲಾನುಭವಿಯ ಖಾತೆಗೆ ಜಮೆ ಆಗುತ್ತದೆ. ಈ ಯೋಜನೆಯ ನಿಯಮದ ಪ್ರಕಾರ ಈಗಾಗಲೇ ವಿಧವಾ ವೇತನ, ಅಂಗವಿಕಲ ವೇತನ ಅಥವಾ ಸಂಧ್ಯ ಸುರಕ್ಷ ಪಡೆಯುತ್ತಿರುವವರು ಹಾಗೂ ಮರುಮದುವೆ ಆದವರಿಗೆ ಈ ಪಿಂಚಣಿಯು ಸಿಗುವುದಿಲ್ಲ.
ಬೇಕಾಗುವ ದಾಖಲೆ:
• ಬಿಪಿಎಲ್ ರೇಷನ್ ಕಾರ್ಡ್
• ಆಧಾರ್ ಕಾರ್ಡ್
• ಬ್ಯಾಂಕ್ ಪಾಸ್ ಬುಕ್
• ಚುನಾವಣಾ ಗುರುತಿನ ಚೀಟಿ
• ಅವಿವಾಹಿತರಾಗಿದ್ದರೆ-ಮರುಮದುವೆ ಆಗಿಲ್ಲ ಎಂಬ ಪ್ರಮಾಣ ಪತ್ರ
• ವಿಚ್ಛೇದಾರರಿಗೆ- ಗಂಡನಿಂದ ದೂರವಾಗಿರುವ ಪ್ರಮಾಣ ಪತ್ರ
• ಪಾಸ್ಪೋರ್ಟ್ ಅಳತೆಯ ಪೋಟೋ
ಅರ್ಜಿ ಸಲ್ಲಿಸುವ ವಿಧಾನ:
ನಿಮ್ಮ ಹತ್ತಿರದ ನಾಡಕಚೇರಿ ಅಥವಾ ಅಟಲ್ ಜೀ ಜನಸ್ನೇಹಿ ಕೇಂದ್ರ ಕ್ಕೇ ಭೇಟಿ ನೀಡಬೇಕು. ಅಲ್ಲಿ ಫಾರಂ ಪಡೆದು ದಾಖಲೆಯೊಂದಿಗೆ ಅರ್ಜಿ ಸಲ್ಲಿಸಬಹುದು. ಯಾವುದೇ ಆನ್ ಲೈನ್ ವ್ಯವಸ್ಥೆ ಬಂದಿಲ್ಲ.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…