ವಿಧವೆಯರು, ಗಂಡನಿಂದ ದೂರವಾಗಿರುವವರು ಅಥವಾ ಮದುವೆಯಾಗದೆ ಒಬ್ಬಂಟಿಯಾಗಿ ಜೀವಿಸುತ್ತಿರುವ ಮಹಿಳೆರಿಗೆ ಆರ್ಥಿಕ ಭದ್ರತೆ ನೀಡುವ ದೃಷ್ಟಿಯಿಂದ ರಾಜ್ಯ ಸರ್ಕಾರವು ಮನಸ್ವಿನೀ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯ ಮೂಲಕ ಪ್ರತಿ ತಿಂಗಳು ರೂ 800 ಪಿಂಚಣಿ ಸಿಗುತ್ತದೆ. ಮಾತ್ರವಲ್ಲ ವೃದ್ಧಾಪ್ಯ ವೇತನದ ಮಾದರಿಯಲ್ಲೇ ನೇರವಾಗಿ ಫಲಾನುಭವಿಯ ಖಾತೆಗೆ ಜಮೆ ಆಗುತ್ತದೆ. ಈ ಯೋಜನೆಯ ನಿಯಮದ ಪ್ರಕಾರ ಈಗಾಗಲೇ ವಿಧವಾ ವೇತನ, ಅಂಗವಿಕಲ ವೇತನ ಅಥವಾ ಸಂಧ್ಯ ಸುರಕ್ಷ ಪಡೆಯುತ್ತಿರುವವರು ಹಾಗೂ ಮರುಮದುವೆ ಆದವರಿಗೆ ಈ ಪಿಂಚಣಿಯು ಸಿಗುವುದಿಲ್ಲ.
ಬೇಕಾಗುವ ದಾಖಲೆ:
• ಬಿಪಿಎಲ್ ರೇಷನ್ ಕಾರ್ಡ್
• ಆಧಾರ್ ಕಾರ್ಡ್
• ಬ್ಯಾಂಕ್ ಪಾಸ್ ಬುಕ್
• ಚುನಾವಣಾ ಗುರುತಿನ ಚೀಟಿ
• ಅವಿವಾಹಿತರಾಗಿದ್ದರೆ-ಮರುಮದುವೆ ಆಗಿಲ್ಲ ಎಂಬ ಪ್ರಮಾಣ ಪತ್ರ
• ವಿಚ್ಛೇದಾರರಿಗೆ- ಗಂಡನಿಂದ ದೂರವಾಗಿರುವ ಪ್ರಮಾಣ ಪತ್ರ
• ಪಾಸ್ಪೋರ್ಟ್ ಅಳತೆಯ ಪೋಟೋ
ಅರ್ಜಿ ಸಲ್ಲಿಸುವ ವಿಧಾನ:
ನಿಮ್ಮ ಹತ್ತಿರದ ನಾಡಕಚೇರಿ ಅಥವಾ ಅಟಲ್ ಜೀ ಜನಸ್ನೇಹಿ ಕೇಂದ್ರ ಕ್ಕೇ ಭೇಟಿ ನೀಡಬೇಕು. ಅಲ್ಲಿ ಫಾರಂ ಪಡೆದು ದಾಖಲೆಯೊಂದಿಗೆ ಅರ್ಜಿ ಸಲ್ಲಿಸಬಹುದು. ಯಾವುದೇ ಆನ್ ಲೈನ್ ವ್ಯವಸ್ಥೆ ಬಂದಿಲ್ಲ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…